ಜಿಲ್ಲೆಗಳು

ಸಮರ್ಥನಂ ಬುದ್ಧಿ ವಿಶೇಷ ಶಾಲೆಯ ಆವರಣದಲ್ಲಿ ಮಕ್ಕಳ ದಿನಾಚರಣೆ ಆಚರಣೆ

ಮೈಸೂರು: ಮೈಸೂರಿನ ವಿಜಯನಗರ ನಾಲ್ಕನೇ ಹಂತದಲ್ಲಿರುವ ಸಮರ್ಥನಂ ಬುದ್ಧಿ ವಿಶೇಷ ಶಾಲೆಯ ಆವರಣದಲ್ಲಿ ಬುದ್ಧಿ ವಿಶೇಷ ಮಕ್ಕಳಿಂದ ಮಾಜಿ ಪಿಎಂ ಜವಾಹರಲಾಲ್‌ನೆಹರು ಜನ್ಮ ದಿನಾಚರಣೆಯ ಅಂಗವಾಗಿ ಮಕ್ಕಳ ದಿನಾಚರಣೆ ಆಚರಣೆ ಮಾಡಲಾಯಿತು.

ಸಮರ್ಥನಂ ಸಂಸ್ಥೆಯ ಹಿತೈಷಿ ಸೀತಾಲಕ್ಷ್ಮೀ ಮಾತನಾಡಿ, ಮಕ್ಕಳು ನಾಳಿನ ಪ್ರಜೆಗಳು. ಹಾಗಾಗಿ ನಮ್ಮ ಭಾರತ ದೇಶದ ಯಾವುದೇ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬಾರದು ಎಂದು ನೆಹರು ಸದಾ ಹೇಳುತ್ತಿದ್ದರು, ಇಂದು ನಾವು ಮಕ್ಕಳಿಗೆ ಒಳ್ಳೆಯ ಭವಿಷ್ಯವನ್ನು ರೂಪಿಸಿ ಕೊಟ್ಟರೆ ಮುಂದೆ ಮಕ್ಕಳು ನಮ್ಮ ರಾಷ್ಟ್ರಕ್ಕೆ ಭವಿಷ್ಯದ ಭದ್ರ ಬುನಾದಿ ಆಗಲಿದ್ದಾರೆ. ಹಾಗಾಗಿ ಇಂದಿನ ಮಕ್ಕಳನ್ನು ನಾವು ಹೇಗೆ ಬೆಳೆಸುತ್ತೇವೆ ಎಂಬುದರ ಮೇಲೆ ನಮ್ಮ ಇಡೀ ರಾಷ್ಟ್ರದ ಭವಿಷ್ಯ ನಿಂತಿದೆ ಎಂದು ತಿಳಿಸಿದರು.

ಸಮರ್ಥನಂ ಸಂಸ್ಥೆಯ ಶಿವರಾಜು ಮಾತನಾಡಿ, ಜವಾಹರಲಾಲ್ ನೆಹರು ಅವರು ತಮ್ಮ ಜೀವನದುದ್ದಕ್ಕೂ ಮಕ್ಕಳನ್ನು ಅವರ ಜಾತಿ, ಮತ, ಧರ್ಮ, ಸಂಸ್ಕೃತಿ ಅಥವಾ ಆರ್ಥಿಕ ಹಿನ್ನೆಲೆಯನ್ನು ಲೆಕ್ಕಿಸದೆ ಮೆಚ್ಚಿದರು ಮತ್ತು ಪ್ರೀತಿಸುತ್ತಿದ್ದರು. ಮಕ್ಕಳು ರಾಷ್ಟ್ರದ ಭವಿಷ್ಯವಾಗಿರುವುದರಿಂದ ಪಂಡಿತ್ ಜವಾಹರಲಾಲ್ ನೆಹರು ಅವರು ರಾಷ್ಟ್ರದ ಭವಿಷ್ಯದ ವಾಹಕರಾಗಿರುವುದರಿಂದ ಮಕ್ಕಳಿಗೆ ಪ್ರೀತಿ ಮತ್ತು ಗಮನವನ್ನು ನೀಡಬೇಕು ಎಂದು ನಂಬಿದ್ದರು ಎಂದು ಹೇಳಿದರು.

ಮುಖಂಡ ನರಸಿಂಹಮೂರ್ತಿ ಮಾತನಾಡಿ, ಪಂಡಿತ್ ಜವಾಹರಲಾಲ್ ನೆಹರು ಅವರು ರಾಷ್ಟ್ರದ ಭವಿಷ್ಯದ ವಾಹಕರಾಗಿರುವುದರಿಂದ ಮಕ್ಕಳಿಗೆ ಪ್ರೀತಿ ಮತ್ತು ಗಮನವನ್ನು ನೀಡಬೇಕು ಎಂದು ನಂಬಿದ್ದರು. ಮಕ್ಕಳು ನಿಜವಾಗಿಯೂ ಅವರಿಗೆ ಮೀಸಲಾದ ದಿನಕ್ಕೆ ಅರ್ಹರು. ಪ್ರಪಂಚದಾದ್ಯಂತ, ವಿವಿಧ ದೇಶಗಳು ಮಕ್ಕಳ ದಿನವನ್ನು ಆಚರಿಸುತ್ತವೆ. ನೀವೆಲ್ಲರೂ ಮುಗ್ಧತೆಯ ಚಿತ್ರವಾಗಿದ್ದೀರಿ ಮತ್ತು ಎಲ್ಲರೂ ಮಕ್ಕಳನ್ನು ಆರಾಧಿಸುತ್ತಾರೆ. ಇದು ಮಕ್ಕಳನ್ನು ಗೌರವಿಸಲು ಮತ್ತು ನಿಮ್ಮ ಉಪಸ್ಥಿತಿಯನ್ನು ಆಚರಿಸಲು ವಿಶೇಷವಾಗಿ ಮೀಸಲಿಟ್ಟ ದಿನವಾಗಿದೆ ಎಂದು ಹೇಳಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಭ್ರಮರಾಂಭ, ವಿಶೇಷ ಶಿಕ್ಷಕಿರಾದ ಪಿ. ಪದ್ಮ, ಹೆಚ್.ವಿದ್ಯಾವತಿ ಸಿಬ್ಬಂದಿಗಳಾದ ರಾಘವೇಂದ್ರ, ಪವಿತ್ರ ಹಾಜರಿದ್ದರು.

 

 

andolana

Recent Posts

ಗುಂಡ್ಲುಪೇಟೆ| ಕಾಡಿನಿಂದ‌ ದಾರಿ ತಪ್ಪಿ ಮನೆಗೆ ನುಗ್ಗಿದ ಜಿಂಕೆ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…

59 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

2 hours ago

ಚಿಕ್ಕಮಗಳೂರು| ತೋಟದಲ್ಲಿ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…

2 hours ago

ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ…

3 hours ago

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಕೇಂದ್ರ ಸರ್ಕಾರದ ವಿರುದ್ಧ…

3 hours ago

ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ

ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್‌…

4 hours ago