ಜಿಲ್ಲೆಗಳು

ಸಮರ್ಥನಂ ಬುದ್ಧಿ ವಿಶೇಷ ಶಾಲೆಯ ಆವರಣದಲ್ಲಿ ಮಕ್ಕಳ ದಿನಾಚರಣೆ ಆಚರಣೆ

ಮೈಸೂರು: ಮೈಸೂರಿನ ವಿಜಯನಗರ ನಾಲ್ಕನೇ ಹಂತದಲ್ಲಿರುವ ಸಮರ್ಥನಂ ಬುದ್ಧಿ ವಿಶೇಷ ಶಾಲೆಯ ಆವರಣದಲ್ಲಿ ಬುದ್ಧಿ ವಿಶೇಷ ಮಕ್ಕಳಿಂದ ಮಾಜಿ ಪಿಎಂ ಜವಾಹರಲಾಲ್‌ನೆಹರು ಜನ್ಮ ದಿನಾಚರಣೆಯ ಅಂಗವಾಗಿ ಮಕ್ಕಳ ದಿನಾಚರಣೆ ಆಚರಣೆ ಮಾಡಲಾಯಿತು.

ಸಮರ್ಥನಂ ಸಂಸ್ಥೆಯ ಹಿತೈಷಿ ಸೀತಾಲಕ್ಷ್ಮೀ ಮಾತನಾಡಿ, ಮಕ್ಕಳು ನಾಳಿನ ಪ್ರಜೆಗಳು. ಹಾಗಾಗಿ ನಮ್ಮ ಭಾರತ ದೇಶದ ಯಾವುದೇ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬಾರದು ಎಂದು ನೆಹರು ಸದಾ ಹೇಳುತ್ತಿದ್ದರು, ಇಂದು ನಾವು ಮಕ್ಕಳಿಗೆ ಒಳ್ಳೆಯ ಭವಿಷ್ಯವನ್ನು ರೂಪಿಸಿ ಕೊಟ್ಟರೆ ಮುಂದೆ ಮಕ್ಕಳು ನಮ್ಮ ರಾಷ್ಟ್ರಕ್ಕೆ ಭವಿಷ್ಯದ ಭದ್ರ ಬುನಾದಿ ಆಗಲಿದ್ದಾರೆ. ಹಾಗಾಗಿ ಇಂದಿನ ಮಕ್ಕಳನ್ನು ನಾವು ಹೇಗೆ ಬೆಳೆಸುತ್ತೇವೆ ಎಂಬುದರ ಮೇಲೆ ನಮ್ಮ ಇಡೀ ರಾಷ್ಟ್ರದ ಭವಿಷ್ಯ ನಿಂತಿದೆ ಎಂದು ತಿಳಿಸಿದರು.

ಸಮರ್ಥನಂ ಸಂಸ್ಥೆಯ ಶಿವರಾಜು ಮಾತನಾಡಿ, ಜವಾಹರಲಾಲ್ ನೆಹರು ಅವರು ತಮ್ಮ ಜೀವನದುದ್ದಕ್ಕೂ ಮಕ್ಕಳನ್ನು ಅವರ ಜಾತಿ, ಮತ, ಧರ್ಮ, ಸಂಸ್ಕೃತಿ ಅಥವಾ ಆರ್ಥಿಕ ಹಿನ್ನೆಲೆಯನ್ನು ಲೆಕ್ಕಿಸದೆ ಮೆಚ್ಚಿದರು ಮತ್ತು ಪ್ರೀತಿಸುತ್ತಿದ್ದರು. ಮಕ್ಕಳು ರಾಷ್ಟ್ರದ ಭವಿಷ್ಯವಾಗಿರುವುದರಿಂದ ಪಂಡಿತ್ ಜವಾಹರಲಾಲ್ ನೆಹರು ಅವರು ರಾಷ್ಟ್ರದ ಭವಿಷ್ಯದ ವಾಹಕರಾಗಿರುವುದರಿಂದ ಮಕ್ಕಳಿಗೆ ಪ್ರೀತಿ ಮತ್ತು ಗಮನವನ್ನು ನೀಡಬೇಕು ಎಂದು ನಂಬಿದ್ದರು ಎಂದು ಹೇಳಿದರು.

ಮುಖಂಡ ನರಸಿಂಹಮೂರ್ತಿ ಮಾತನಾಡಿ, ಪಂಡಿತ್ ಜವಾಹರಲಾಲ್ ನೆಹರು ಅವರು ರಾಷ್ಟ್ರದ ಭವಿಷ್ಯದ ವಾಹಕರಾಗಿರುವುದರಿಂದ ಮಕ್ಕಳಿಗೆ ಪ್ರೀತಿ ಮತ್ತು ಗಮನವನ್ನು ನೀಡಬೇಕು ಎಂದು ನಂಬಿದ್ದರು. ಮಕ್ಕಳು ನಿಜವಾಗಿಯೂ ಅವರಿಗೆ ಮೀಸಲಾದ ದಿನಕ್ಕೆ ಅರ್ಹರು. ಪ್ರಪಂಚದಾದ್ಯಂತ, ವಿವಿಧ ದೇಶಗಳು ಮಕ್ಕಳ ದಿನವನ್ನು ಆಚರಿಸುತ್ತವೆ. ನೀವೆಲ್ಲರೂ ಮುಗ್ಧತೆಯ ಚಿತ್ರವಾಗಿದ್ದೀರಿ ಮತ್ತು ಎಲ್ಲರೂ ಮಕ್ಕಳನ್ನು ಆರಾಧಿಸುತ್ತಾರೆ. ಇದು ಮಕ್ಕಳನ್ನು ಗೌರವಿಸಲು ಮತ್ತು ನಿಮ್ಮ ಉಪಸ್ಥಿತಿಯನ್ನು ಆಚರಿಸಲು ವಿಶೇಷವಾಗಿ ಮೀಸಲಿಟ್ಟ ದಿನವಾಗಿದೆ ಎಂದು ಹೇಳಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಭ್ರಮರಾಂಭ, ವಿಶೇಷ ಶಿಕ್ಷಕಿರಾದ ಪಿ. ಪದ್ಮ, ಹೆಚ್.ವಿದ್ಯಾವತಿ ಸಿಬ್ಬಂದಿಗಳಾದ ರಾಘವೇಂದ್ರ, ಪವಿತ್ರ ಹಾಜರಿದ್ದರು.

 

 

andolana

Recent Posts

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

6 mins ago

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

56 mins ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

1 hour ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

1 hour ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

2 hours ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರ ನಿಷೇಧ ಕಾನೂನು ಸ್ವಾಗತಾರ್ಹ

ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…

2 hours ago