ಜಿಲ್ಲೆಗಳು

ಸಮರ್ಥನಂ ಬುದ್ಧಿ ವಿಶೇಷ ಶಾಲೆಯ ಆವರಣದಲ್ಲಿ ಮಕ್ಕಳ ದಿನಾಚರಣೆ ಆಚರಣೆ

ಮೈಸೂರು: ಮೈಸೂರಿನ ವಿಜಯನಗರ ನಾಲ್ಕನೇ ಹಂತದಲ್ಲಿರುವ ಸಮರ್ಥನಂ ಬುದ್ಧಿ ವಿಶೇಷ ಶಾಲೆಯ ಆವರಣದಲ್ಲಿ ಬುದ್ಧಿ ವಿಶೇಷ ಮಕ್ಕಳಿಂದ ಮಾಜಿ ಪಿಎಂ ಜವಾಹರಲಾಲ್‌ನೆಹರು ಜನ್ಮ ದಿನಾಚರಣೆಯ ಅಂಗವಾಗಿ ಮಕ್ಕಳ ದಿನಾಚರಣೆ ಆಚರಣೆ ಮಾಡಲಾಯಿತು.

ಸಮರ್ಥನಂ ಸಂಸ್ಥೆಯ ಹಿತೈಷಿ ಸೀತಾಲಕ್ಷ್ಮೀ ಮಾತನಾಡಿ, ಮಕ್ಕಳು ನಾಳಿನ ಪ್ರಜೆಗಳು. ಹಾಗಾಗಿ ನಮ್ಮ ಭಾರತ ದೇಶದ ಯಾವುದೇ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬಾರದು ಎಂದು ನೆಹರು ಸದಾ ಹೇಳುತ್ತಿದ್ದರು, ಇಂದು ನಾವು ಮಕ್ಕಳಿಗೆ ಒಳ್ಳೆಯ ಭವಿಷ್ಯವನ್ನು ರೂಪಿಸಿ ಕೊಟ್ಟರೆ ಮುಂದೆ ಮಕ್ಕಳು ನಮ್ಮ ರಾಷ್ಟ್ರಕ್ಕೆ ಭವಿಷ್ಯದ ಭದ್ರ ಬುನಾದಿ ಆಗಲಿದ್ದಾರೆ. ಹಾಗಾಗಿ ಇಂದಿನ ಮಕ್ಕಳನ್ನು ನಾವು ಹೇಗೆ ಬೆಳೆಸುತ್ತೇವೆ ಎಂಬುದರ ಮೇಲೆ ನಮ್ಮ ಇಡೀ ರಾಷ್ಟ್ರದ ಭವಿಷ್ಯ ನಿಂತಿದೆ ಎಂದು ತಿಳಿಸಿದರು.

ಸಮರ್ಥನಂ ಸಂಸ್ಥೆಯ ಶಿವರಾಜು ಮಾತನಾಡಿ, ಜವಾಹರಲಾಲ್ ನೆಹರು ಅವರು ತಮ್ಮ ಜೀವನದುದ್ದಕ್ಕೂ ಮಕ್ಕಳನ್ನು ಅವರ ಜಾತಿ, ಮತ, ಧರ್ಮ, ಸಂಸ್ಕೃತಿ ಅಥವಾ ಆರ್ಥಿಕ ಹಿನ್ನೆಲೆಯನ್ನು ಲೆಕ್ಕಿಸದೆ ಮೆಚ್ಚಿದರು ಮತ್ತು ಪ್ರೀತಿಸುತ್ತಿದ್ದರು. ಮಕ್ಕಳು ರಾಷ್ಟ್ರದ ಭವಿಷ್ಯವಾಗಿರುವುದರಿಂದ ಪಂಡಿತ್ ಜವಾಹರಲಾಲ್ ನೆಹರು ಅವರು ರಾಷ್ಟ್ರದ ಭವಿಷ್ಯದ ವಾಹಕರಾಗಿರುವುದರಿಂದ ಮಕ್ಕಳಿಗೆ ಪ್ರೀತಿ ಮತ್ತು ಗಮನವನ್ನು ನೀಡಬೇಕು ಎಂದು ನಂಬಿದ್ದರು ಎಂದು ಹೇಳಿದರು.

ಮುಖಂಡ ನರಸಿಂಹಮೂರ್ತಿ ಮಾತನಾಡಿ, ಪಂಡಿತ್ ಜವಾಹರಲಾಲ್ ನೆಹರು ಅವರು ರಾಷ್ಟ್ರದ ಭವಿಷ್ಯದ ವಾಹಕರಾಗಿರುವುದರಿಂದ ಮಕ್ಕಳಿಗೆ ಪ್ರೀತಿ ಮತ್ತು ಗಮನವನ್ನು ನೀಡಬೇಕು ಎಂದು ನಂಬಿದ್ದರು. ಮಕ್ಕಳು ನಿಜವಾಗಿಯೂ ಅವರಿಗೆ ಮೀಸಲಾದ ದಿನಕ್ಕೆ ಅರ್ಹರು. ಪ್ರಪಂಚದಾದ್ಯಂತ, ವಿವಿಧ ದೇಶಗಳು ಮಕ್ಕಳ ದಿನವನ್ನು ಆಚರಿಸುತ್ತವೆ. ನೀವೆಲ್ಲರೂ ಮುಗ್ಧತೆಯ ಚಿತ್ರವಾಗಿದ್ದೀರಿ ಮತ್ತು ಎಲ್ಲರೂ ಮಕ್ಕಳನ್ನು ಆರಾಧಿಸುತ್ತಾರೆ. ಇದು ಮಕ್ಕಳನ್ನು ಗೌರವಿಸಲು ಮತ್ತು ನಿಮ್ಮ ಉಪಸ್ಥಿತಿಯನ್ನು ಆಚರಿಸಲು ವಿಶೇಷವಾಗಿ ಮೀಸಲಿಟ್ಟ ದಿನವಾಗಿದೆ ಎಂದು ಹೇಳಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಭ್ರಮರಾಂಭ, ವಿಶೇಷ ಶಿಕ್ಷಕಿರಾದ ಪಿ. ಪದ್ಮ, ಹೆಚ್.ವಿದ್ಯಾವತಿ ಸಿಬ್ಬಂದಿಗಳಾದ ರಾಘವೇಂದ್ರ, ಪವಿತ್ರ ಹಾಜರಿದ್ದರು.

 

 

andolana

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

7 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

7 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

8 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

8 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

9 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

9 hours ago