ಜಿಲ್ಲೆಗಳು

ಸಮರ್ಥನಂ ಬುದ್ಧಿ ವಿಶೇಷ ಶಾಲೆಯ ಆವರಣದಲ್ಲಿ ಮಕ್ಕಳ ದಿನಾಚರಣೆ ಆಚರಣೆ

ಮೈಸೂರು: ಮೈಸೂರಿನ ವಿಜಯನಗರ ನಾಲ್ಕನೇ ಹಂತದಲ್ಲಿರುವ ಸಮರ್ಥನಂ ಬುದ್ಧಿ ವಿಶೇಷ ಶಾಲೆಯ ಆವರಣದಲ್ಲಿ ಬುದ್ಧಿ ವಿಶೇಷ ಮಕ್ಕಳಿಂದ ಮಾಜಿ ಪಿಎಂ ಜವಾಹರಲಾಲ್‌ನೆಹರು ಜನ್ಮ ದಿನಾಚರಣೆಯ ಅಂಗವಾಗಿ ಮಕ್ಕಳ ದಿನಾಚರಣೆ ಆಚರಣೆ ಮಾಡಲಾಯಿತು.

ಸಮರ್ಥನಂ ಸಂಸ್ಥೆಯ ಹಿತೈಷಿ ಸೀತಾಲಕ್ಷ್ಮೀ ಮಾತನಾಡಿ, ಮಕ್ಕಳು ನಾಳಿನ ಪ್ರಜೆಗಳು. ಹಾಗಾಗಿ ನಮ್ಮ ಭಾರತ ದೇಶದ ಯಾವುದೇ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬಾರದು ಎಂದು ನೆಹರು ಸದಾ ಹೇಳುತ್ತಿದ್ದರು, ಇಂದು ನಾವು ಮಕ್ಕಳಿಗೆ ಒಳ್ಳೆಯ ಭವಿಷ್ಯವನ್ನು ರೂಪಿಸಿ ಕೊಟ್ಟರೆ ಮುಂದೆ ಮಕ್ಕಳು ನಮ್ಮ ರಾಷ್ಟ್ರಕ್ಕೆ ಭವಿಷ್ಯದ ಭದ್ರ ಬುನಾದಿ ಆಗಲಿದ್ದಾರೆ. ಹಾಗಾಗಿ ಇಂದಿನ ಮಕ್ಕಳನ್ನು ನಾವು ಹೇಗೆ ಬೆಳೆಸುತ್ತೇವೆ ಎಂಬುದರ ಮೇಲೆ ನಮ್ಮ ಇಡೀ ರಾಷ್ಟ್ರದ ಭವಿಷ್ಯ ನಿಂತಿದೆ ಎಂದು ತಿಳಿಸಿದರು.

ಸಮರ್ಥನಂ ಸಂಸ್ಥೆಯ ಶಿವರಾಜು ಮಾತನಾಡಿ, ಜವಾಹರಲಾಲ್ ನೆಹರು ಅವರು ತಮ್ಮ ಜೀವನದುದ್ದಕ್ಕೂ ಮಕ್ಕಳನ್ನು ಅವರ ಜಾತಿ, ಮತ, ಧರ್ಮ, ಸಂಸ್ಕೃತಿ ಅಥವಾ ಆರ್ಥಿಕ ಹಿನ್ನೆಲೆಯನ್ನು ಲೆಕ್ಕಿಸದೆ ಮೆಚ್ಚಿದರು ಮತ್ತು ಪ್ರೀತಿಸುತ್ತಿದ್ದರು. ಮಕ್ಕಳು ರಾಷ್ಟ್ರದ ಭವಿಷ್ಯವಾಗಿರುವುದರಿಂದ ಪಂಡಿತ್ ಜವಾಹರಲಾಲ್ ನೆಹರು ಅವರು ರಾಷ್ಟ್ರದ ಭವಿಷ್ಯದ ವಾಹಕರಾಗಿರುವುದರಿಂದ ಮಕ್ಕಳಿಗೆ ಪ್ರೀತಿ ಮತ್ತು ಗಮನವನ್ನು ನೀಡಬೇಕು ಎಂದು ನಂಬಿದ್ದರು ಎಂದು ಹೇಳಿದರು.

ಮುಖಂಡ ನರಸಿಂಹಮೂರ್ತಿ ಮಾತನಾಡಿ, ಪಂಡಿತ್ ಜವಾಹರಲಾಲ್ ನೆಹರು ಅವರು ರಾಷ್ಟ್ರದ ಭವಿಷ್ಯದ ವಾಹಕರಾಗಿರುವುದರಿಂದ ಮಕ್ಕಳಿಗೆ ಪ್ರೀತಿ ಮತ್ತು ಗಮನವನ್ನು ನೀಡಬೇಕು ಎಂದು ನಂಬಿದ್ದರು. ಮಕ್ಕಳು ನಿಜವಾಗಿಯೂ ಅವರಿಗೆ ಮೀಸಲಾದ ದಿನಕ್ಕೆ ಅರ್ಹರು. ಪ್ರಪಂಚದಾದ್ಯಂತ, ವಿವಿಧ ದೇಶಗಳು ಮಕ್ಕಳ ದಿನವನ್ನು ಆಚರಿಸುತ್ತವೆ. ನೀವೆಲ್ಲರೂ ಮುಗ್ಧತೆಯ ಚಿತ್ರವಾಗಿದ್ದೀರಿ ಮತ್ತು ಎಲ್ಲರೂ ಮಕ್ಕಳನ್ನು ಆರಾಧಿಸುತ್ತಾರೆ. ಇದು ಮಕ್ಕಳನ್ನು ಗೌರವಿಸಲು ಮತ್ತು ನಿಮ್ಮ ಉಪಸ್ಥಿತಿಯನ್ನು ಆಚರಿಸಲು ವಿಶೇಷವಾಗಿ ಮೀಸಲಿಟ್ಟ ದಿನವಾಗಿದೆ ಎಂದು ಹೇಳಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಭ್ರಮರಾಂಭ, ವಿಶೇಷ ಶಿಕ್ಷಕಿರಾದ ಪಿ. ಪದ್ಮ, ಹೆಚ್.ವಿದ್ಯಾವತಿ ಸಿಬ್ಬಂದಿಗಳಾದ ರಾಘವೇಂದ್ರ, ಪವಿತ್ರ ಹಾಜರಿದ್ದರು.

 

 

andolana

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

5 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

7 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

15 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

15 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

15 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

15 hours ago