ಯಳಂದೂರು: ತಾಲ್ಲೂಕಿನ ಪುರಾಣಿಪೋಡಿನ ಗಿರಿಜನ ಆಶ್ರಮ ಶಾಲೆಯ ಬಳಿ ಕಾಣಿಸಿಕೊಂಡಿದ್ದ ಮರಿಯಾನೆಗೆ ಕೊನೆಗೂ ತಾಯಿ ಸಿಗಲಿಲ್ಲ. ಆದ್ದರಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಮೈಸೂರಿನ ಕೂರ್ಗಳ್ಳಿ ಬಳಿಯ ಪ್ರಾಣಿಗಳ ಪುನರ್ವಸತಿ ಕೇಂದ್ರಕ್ಕೆ ಮರಿಯಾನೆಯನ್ನು ರವಾನಿಸಿದ್ದಾರೆ.
ತಾಯಿಯಿಂದ ಬೇರ್ಪಟ್ಟಿದ್ದ ಗಂಡು ಮರಿಯಾನೆ ಭಾನುವಾರ ಪುರಾಣಿ ಪೋಡಿನ ಗಿರಿಜನ ಆಶ್ರಮ ಶಾಲೆಯ
ಆವರಣದಲ್ಲಿ ಕಾಣಿಸಿಕೊಂಡಿತ್ತು. ಮಕ್ಕಳು, ಗಿರಿಜನರ ಜೊತೆ ಆಟವಾಡಿದ್ದ ಈ ಮರಿಯಾನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದರು.
ಅರಣ್ಯ ಸಿಬ್ಬಂದಿ ಮರಿಯಾನೆಯ ತಾಯಿಗಾಗಿ ಶೋಧ ನಡೆಸಿದ್ದರು. ಮಂಗಳವಾರದ ತನಕವೂ ಇದರ ತಾಯಿ ಪತ್ತೆಯಾಗದ ಹಿನ್ನೆಲೆಯಲ್ಲಿ ಇದನ್ನು ಮೈಸೂರಿಗೆ ರವಾನಿಸಲಾಗಿದೆ ಎಂದು ಆರ್ಎಫ್ಒ ಲೊಕೇಶ್ ಮೂರ್ತಿ ಮಾಹಿತಿ ನೀಡಿದ್ದಾರೆ. ಯಳಂದೂರು ತಾಲ್ಲೂಕಿನ ಬಿಆರ್ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶದಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ ಮರಿಯಾನೆ ಇದಾಗಿದೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…