ಯಳಂದೂರು: ತಾಲ್ಲೂಕಿನ ಪುರಾಣಿಪೋಡಿನ ಗಿರಿಜನ ಆಶ್ರಮ ಶಾಲೆಯ ಬಳಿ ಕಾಣಿಸಿಕೊಂಡಿದ್ದ ಮರಿಯಾನೆಗೆ ಕೊನೆಗೂ ತಾಯಿ ಸಿಗಲಿಲ್ಲ. ಆದ್ದರಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಮೈಸೂರಿನ ಕೂರ್ಗಳ್ಳಿ ಬಳಿಯ ಪ್ರಾಣಿಗಳ ಪುನರ್ವಸತಿ ಕೇಂದ್ರಕ್ಕೆ ಮರಿಯಾನೆಯನ್ನು ರವಾನಿಸಿದ್ದಾರೆ.
ತಾಯಿಯಿಂದ ಬೇರ್ಪಟ್ಟಿದ್ದ ಗಂಡು ಮರಿಯಾನೆ ಭಾನುವಾರ ಪುರಾಣಿ ಪೋಡಿನ ಗಿರಿಜನ ಆಶ್ರಮ ಶಾಲೆಯ
ಆವರಣದಲ್ಲಿ ಕಾಣಿಸಿಕೊಂಡಿತ್ತು. ಮಕ್ಕಳು, ಗಿರಿಜನರ ಜೊತೆ ಆಟವಾಡಿದ್ದ ಈ ಮರಿಯಾನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದರು.
ಅರಣ್ಯ ಸಿಬ್ಬಂದಿ ಮರಿಯಾನೆಯ ತಾಯಿಗಾಗಿ ಶೋಧ ನಡೆಸಿದ್ದರು. ಮಂಗಳವಾರದ ತನಕವೂ ಇದರ ತಾಯಿ ಪತ್ತೆಯಾಗದ ಹಿನ್ನೆಲೆಯಲ್ಲಿ ಇದನ್ನು ಮೈಸೂರಿಗೆ ರವಾನಿಸಲಾಗಿದೆ ಎಂದು ಆರ್ಎಫ್ಒ ಲೊಕೇಶ್ ಮೂರ್ತಿ ಮಾಹಿತಿ ನೀಡಿದ್ದಾರೆ. ಯಳಂದೂರು ತಾಲ್ಲೂಕಿನ ಬಿಆರ್ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶದಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ ಮರಿಯಾನೆ ಇದಾಗಿದೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…