ಯಳಂದೂರು: ತಾಲ್ಲೂಕಿನ ಪುರಾಣಿಪೋಡಿನ ಗಿರಿಜನ ಆಶ್ರಮ ಶಾಲೆಯ ಬಳಿ ಕಾಣಿಸಿಕೊಂಡಿದ್ದ ಮರಿಯಾನೆಗೆ ಕೊನೆಗೂ ತಾಯಿ ಸಿಗಲಿಲ್ಲ. ಆದ್ದರಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಮೈಸೂರಿನ ಕೂರ್ಗಳ್ಳಿ ಬಳಿಯ ಪ್ರಾಣಿಗಳ ಪುನರ್ವಸತಿ ಕೇಂದ್ರಕ್ಕೆ ಮರಿಯಾನೆಯನ್ನು ರವಾನಿಸಿದ್ದಾರೆ.
ತಾಯಿಯಿಂದ ಬೇರ್ಪಟ್ಟಿದ್ದ ಗಂಡು ಮರಿಯಾನೆ ಭಾನುವಾರ ಪುರಾಣಿ ಪೋಡಿನ ಗಿರಿಜನ ಆಶ್ರಮ ಶಾಲೆಯ
ಆವರಣದಲ್ಲಿ ಕಾಣಿಸಿಕೊಂಡಿತ್ತು. ಮಕ್ಕಳು, ಗಿರಿಜನರ ಜೊತೆ ಆಟವಾಡಿದ್ದ ಈ ಮರಿಯಾನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದರು.
ಅರಣ್ಯ ಸಿಬ್ಬಂದಿ ಮರಿಯಾನೆಯ ತಾಯಿಗಾಗಿ ಶೋಧ ನಡೆಸಿದ್ದರು. ಮಂಗಳವಾರದ ತನಕವೂ ಇದರ ತಾಯಿ ಪತ್ತೆಯಾಗದ ಹಿನ್ನೆಲೆಯಲ್ಲಿ ಇದನ್ನು ಮೈಸೂರಿಗೆ ರವಾನಿಸಲಾಗಿದೆ ಎಂದು ಆರ್ಎಫ್ಒ ಲೊಕೇಶ್ ಮೂರ್ತಿ ಮಾಹಿತಿ ನೀಡಿದ್ದಾರೆ. ಯಳಂದೂರು ತಾಲ್ಲೂಕಿನ ಬಿಆರ್ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶದಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ ಮರಿಯಾನೆ ಇದಾಗಿದೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…