ಮೈಸೂರು : ಚಿನ್ನಸ್ವಾಮಿ ವಡ್ಡಗೆರೆ ಅವರು ಬರೆದಿರುವ ಪ್ರಯೋಗಶೀಲ ರೈತರ ಕರ್ಮ ಭೂಮಿಯಲ್ಲೇ ನಿಂತು ಅವರ ಬೇಸಾಯದ ಮಾದರಿಯನ್ನು ಅವಲೋಕಿಸಿ ಅವರ ಅನುಭವಗಳನ್ನು ದಾಖಲಿಸಿ ಕೊಟ್ಟಿರುವ ” ಬಂಗಾರದ ಮನುಷ್ಯರು ” ಕೃತಿಯ 2ನೇ ಮುದ್ರಣವು ಮಾರುಕಟ್ಟೆಗಳಲ್ಲಿ ಲಭ್ಯವಿದೆ.
ಈ ಕೃತಿ ಕನ್ನಡದ ಒಂದು ವಿಶಿಷ್ಟ ,ಅನನ್ಯ ಕೃಷಿ ಕೈಪಿಡಿಯಾಗಿದ್ದು, 18 ಜನ ಒಣಭೂಮಿ ಬೇಸಾಯಗಾರರು, 31 ಜನ ತೋಟಗಾರಿಕೆ ಹಾಗೂ ಕಾಡು ಕೃಷಿಯ ಬಗ್ಗೆ, 10 ಜನ ರೇಷ್ಮೆ ಮತ್ತು ಹೈನುಗಾರಿಕೆ ಕೃಷಿಯ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಒಟ್ಟು 59 ವಿಶಿಷ್ಟ ಮಾದರಿಯ ಕೃಷಿ ಪದ್ಧತಿಗಳನ್ನು ಬಂಗಾರದ ಮನುಷ್ಯರು ಕೃತಿ ದಾಖಲಿಸಿದೆ. ಯಾರೇ ಈ ಪುಸ್ತಕವನ್ನು ಓದಿದರು ಅವರಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡುವುದು ,ನಾವೂ ಕೃಷಿ ಕ್ಷೇತ್ರದ ಕಡೆಗೆ ಮುನ್ನಗ್ಗಬೇಕು ಎಂಬ ಹಂಬಲ ಮೂಡಿಸುವುದು ಈ ಗ್ರಂಥದ ವೈಶಿಷ್ಟ್ಯ. ಕೃಷಿ ಸಾಹಿತ್ಯದಲ್ಲೇ ಅಪರೂಪ ಎನ್ನಬಹುದಾದ ಮಾಹಿತಿಗಳನ್ನು ಒಳಗೊಂಡಿರುವ “ಬಂಗಾರದ ಮನುಷ್ಯರು” ಪ್ರತಿಯೊಬ್ಬ ಪ್ರಯೋಗಶೀಲ ಯುವ ರೈತನ ಮನೆಯಲ್ಲಿರಬೇಕಾದ ಸಂಗಾತಿ ಎನ್ನಬಹುದಾಗಿದೆ.
ಪುಸ್ತಕದ ಪ್ರತಿಗಳಿಗಾಗಿ ಅಭಿರುಚಿ ಗಣೇಶ್ 99805 60013 ಸಂಪರ್ಕಿಸಬಹುದಾಗಿದೆ.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…