ಜಿಲ್ಲೆಗಳು

ಚಿನ್ನಸ್ವಾಮಿ ವಡ್ಡಗೆರೆ ಕೃತಿ ʼಬಂಗಾರದ ಮನುಷ್ಯರುʼ ಎರಡನೇಯ ಮುದ್ರಣ

ಮೈಸೂರು  : ಚಿನ್ನಸ್ವಾಮಿ ವಡ್ಡಗೆರೆ ಅವರು ಬರೆದಿರುವ  ಪ್ರಯೋಗಶೀಲ ರೈತರ ಕರ್ಮ ಭೂಮಿಯಲ್ಲೇ ನಿಂತು ಅವರ ಬೇಸಾಯದ ಮಾದರಿಯನ್ನು ಅವಲೋಕಿಸಿ ಅವರ  ಅನುಭವಗಳನ್ನು ದಾಖಲಿಸಿ ಕೊಟ್ಟಿರುವ  ” ಬಂಗಾರದ ಮನುಷ್ಯರು ” ಕೃತಿಯ 2ನೇ ಮುದ್ರಣವು ಮಾರುಕಟ್ಟೆಗಳಲ್ಲಿ ಲಭ್ಯವಿದೆ.

ಈ ಕೃತಿ ಕನ್ನಡದ ಒಂದು ವಿಶಿಷ್ಟ ,ಅನನ್ಯ ಕೃಷಿ ಕೈಪಿಡಿಯಾಗಿದ್ದು, 18 ಜನ ಒಣಭೂಮಿ ಬೇಸಾಯಗಾರರು, 31 ಜನ ತೋಟಗಾರಿಕೆ ಹಾಗೂ ಕಾಡು ಕೃಷಿಯ ಬಗ್ಗೆ, 10 ಜನ ರೇಷ್ಮೆ ಮತ್ತು ಹೈನುಗಾರಿಕೆ ಕೃಷಿಯ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಒಟ್ಟು 59 ವಿಶಿಷ್ಟ ಮಾದರಿಯ ಕೃಷಿ ಪದ್ಧತಿಗಳನ್ನು ಬಂಗಾರದ ಮನುಷ್ಯರು ಕೃತಿ ದಾಖಲಿಸಿದೆ. ಯಾರೇ ಈ ಪುಸ್ತಕವನ್ನು ಓದಿದರು ಅವರಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡುವುದು ,ನಾವೂ ಕೃಷಿ ಕ್ಷೇತ್ರದ ಕಡೆಗೆ ಮುನ್ನಗ್ಗಬೇಕು ಎಂಬ ಹಂಬಲ ಮೂಡಿಸುವುದು ಈ ಗ್ರಂಥದ ವೈಶಿಷ್ಟ್ಯ. ಕೃಷಿ ಸಾಹಿತ್ಯದಲ್ಲೇ ಅಪರೂಪ ಎನ್ನಬಹುದಾದ ಮಾಹಿತಿಗಳನ್ನು ಒಳಗೊಂಡಿರುವ “ಬಂಗಾರದ ಮನುಷ್ಯರು” ಪ್ರತಿಯೊಬ್ಬ ಪ್ರಯೋಗಶೀಲ ಯುವ ರೈತನ ಮನೆಯಲ್ಲಿರಬೇಕಾದ ಸಂಗಾತಿ ಎನ್ನಬಹುದಾಗಿದೆ.
ಪುಸ್ತಕದ ಪ್ರತಿಗಳಿಗಾಗಿ ಅಭಿರುಚಿ ಗಣೇಶ್ 99805 60013 ಸಂಪರ್ಕಿಸಬಹುದಾಗಿದೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

1 hour ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

1 hour ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

2 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

2 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

2 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

2 hours ago