ಜಿಲ್ಲೆಗಳು

ಚಿನ್ನಸ್ವಾಮಿ ವಡ್ಡಗೆರೆ ಕೃತಿ ʼಬಂಗಾರದ ಮನುಷ್ಯರುʼ ಎರಡನೇಯ ಮುದ್ರಣ

ಮೈಸೂರು  : ಚಿನ್ನಸ್ವಾಮಿ ವಡ್ಡಗೆರೆ ಅವರು ಬರೆದಿರುವ  ಪ್ರಯೋಗಶೀಲ ರೈತರ ಕರ್ಮ ಭೂಮಿಯಲ್ಲೇ ನಿಂತು ಅವರ ಬೇಸಾಯದ ಮಾದರಿಯನ್ನು ಅವಲೋಕಿಸಿ ಅವರ  ಅನುಭವಗಳನ್ನು ದಾಖಲಿಸಿ ಕೊಟ್ಟಿರುವ  ” ಬಂಗಾರದ ಮನುಷ್ಯರು ” ಕೃತಿಯ 2ನೇ ಮುದ್ರಣವು ಮಾರುಕಟ್ಟೆಗಳಲ್ಲಿ ಲಭ್ಯವಿದೆ.

ಈ ಕೃತಿ ಕನ್ನಡದ ಒಂದು ವಿಶಿಷ್ಟ ,ಅನನ್ಯ ಕೃಷಿ ಕೈಪಿಡಿಯಾಗಿದ್ದು, 18 ಜನ ಒಣಭೂಮಿ ಬೇಸಾಯಗಾರರು, 31 ಜನ ತೋಟಗಾರಿಕೆ ಹಾಗೂ ಕಾಡು ಕೃಷಿಯ ಬಗ್ಗೆ, 10 ಜನ ರೇಷ್ಮೆ ಮತ್ತು ಹೈನುಗಾರಿಕೆ ಕೃಷಿಯ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಒಟ್ಟು 59 ವಿಶಿಷ್ಟ ಮಾದರಿಯ ಕೃಷಿ ಪದ್ಧತಿಗಳನ್ನು ಬಂಗಾರದ ಮನುಷ್ಯರು ಕೃತಿ ದಾಖಲಿಸಿದೆ. ಯಾರೇ ಈ ಪುಸ್ತಕವನ್ನು ಓದಿದರು ಅವರಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡುವುದು ,ನಾವೂ ಕೃಷಿ ಕ್ಷೇತ್ರದ ಕಡೆಗೆ ಮುನ್ನಗ್ಗಬೇಕು ಎಂಬ ಹಂಬಲ ಮೂಡಿಸುವುದು ಈ ಗ್ರಂಥದ ವೈಶಿಷ್ಟ್ಯ. ಕೃಷಿ ಸಾಹಿತ್ಯದಲ್ಲೇ ಅಪರೂಪ ಎನ್ನಬಹುದಾದ ಮಾಹಿತಿಗಳನ್ನು ಒಳಗೊಂಡಿರುವ “ಬಂಗಾರದ ಮನುಷ್ಯರು” ಪ್ರತಿಯೊಬ್ಬ ಪ್ರಯೋಗಶೀಲ ಯುವ ರೈತನ ಮನೆಯಲ್ಲಿರಬೇಕಾದ ಸಂಗಾತಿ ಎನ್ನಬಹುದಾಗಿದೆ.
ಪುಸ್ತಕದ ಪ್ರತಿಗಳಿಗಾಗಿ ಅಭಿರುಚಿ ಗಣೇಶ್ 99805 60013 ಸಂಪರ್ಕಿಸಬಹುದಾಗಿದೆ.

andolanait

Recent Posts

ಓದುಗರ ಪತ್ರ: ಈಡೇರಿದ ಭಾರತ್ ಜೋಡೋ ಪಾದಯಾತ್ರೆ ಆಶ್ವಾಸನೆ

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…

44 mins ago

ಓದುಗರ ಪತ್ರ: ಅರ್ಥಪೂರ್ಣ ಲೇಖನ

‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…

46 mins ago

ಓದುಗರ ಪತ್ರ: ಹಾರ್ಡಿಂಜ್ ವೃತ್ತದಲ್ಲಿರುವ ನಿಲ್ದಾಣದಲ್ಲೇ ಬಸ್ ನಿಲುಗಡೆಯಾಗಲಿ

ಮೈಸೂರಿನ ಹಾರ್ಡಿಂಜ್ ವೃತ್ತದ ಮೂಲಕ ಮೈಸೂರಿನಿಂದ- ಚಾಮರಾಜ ನಗರ, ಗುಂಡ್ಲುಪೇಟೆ, ಹಾಸನ, ಮಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಹಾಗೂ ಇನ್ನಿತರ ಸ್ಥಳಗಳ…

48 mins ago

ಕರ್ನಾಟಕ ಸಂಘದ 2 ಪ್ರತಿಷ್ಠಿತ ಪ್ರಶಸ್ತಿಗಳ ಪ್ರದಾನಕ್ಕೆ ಸಜ್ಜು

ಪ್ರೊ.ಬಿ.ಜಯಪ್ರಕಾಶ್‌ಗೌಡ  ಡಾ.ರಾಮೇಗೌಡ, ದಿ.ಸಿಂಗಾರಿಗೌಡ ಹೆಸರಲ್ಲಿ ಗೌರವ  ವಿಮರ್ಶಕ, ಜಾನಪದ ತಜ್ಞ ಡಾ.ರಾಮೇಗೌಡ ಮತ್ತು ಸರಳ ಸಜ್ಜನ ರಾಜಕಾರಣಿ ದಿ. ಸಿಂಗಾರಿಗೌಡ…

51 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡಿಗರ ಕಣ್ಮಣಿ ಡಾ.ರಾಜಕುಮಾರ್ ನೆನಪಿನಂಗಳದಲ್ಲಿ ಗಾಜನೂರು

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ  ಏಪ್ರಿಲ್ ೧೨, ೨೦೦೬. ಶಿವರಾಜಕುಮಾರ್ ಅಭಿನಯದ ‘ಕುಮಾರ ರಾಮ; ಚಿತ್ರದ ಚಿತ್ರೀಕರಣ. ಭಾರ್ಗವ ನಿರ್ದೇಶಕರು. ಹಂಪಿಯಲ್ಲಿ…

59 mins ago

ಎಸ್‌ಎಸ್‌ಎಲ್‌ಸಿ ಫಲಿತಾಂಶ; ಕೊಡಗಿಗೆ 8ನೇ ಸ್ಥಾನ

ನವೀನ್ ಡಿಸೋಜ ಮಡಿಕೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿ ನಾಲ್ಕನೇ ಸ್ಥಾನದಲ್ಲಿದ್ದ ಕೊಡಗು ಈ ಬಾರಿ ೮ನೇ…

1 hour ago