ಜಿಲ್ಲೆಗಳು

ಮುರುಘಾ ಶರಣರ ವಿರುದ್ಧ ದೂರು: ಸಂತ್ರಸ್ತ ವಿದ್ಯಾರ್ಥಿನಿಯರ ತಾಯಿ ಪೊಲೀಸ್ ವಶಕ್ಕೆ

ಮೈಸೂರು: ಪೋಕ್ಸೋ ಕಾಯಿದೆಯಡಿ ಬಂಧನದಲ್ಲಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಿದ ಇಬ್ಬರು ಸಂತ್ರಸ್ತ ವಿದ್ಯಾರ್ಥಿನಿಯರ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೈಸೂರಿನಲ್ಲಿದ್ದ ಇವರನ್ನು ಪೊಲೀಸರು ವಿಚಾರಣೆಗಾಗಿ ಶುಕ್ರವಾರ ನಸುಕಿನಲ್ಲಿ ಚಿತ್ರದುರ್ಗಕ್ಕೆ ಕರೆದೊಯ್ದರು. ಮಹಿಳಾ ಪೊಲೀಸರು ಇವರನ್ನು ಇಡೀ ದಿನ ವಿಚಾರಣೆ ನಡೆಸಿದ್ದಾರೆ. ಶರಣರ ವಿರುದ್ಧ ಹೇಳಿಕೆ ನೀಡುವಂತೆ ಮಠದಲ್ಲಿ ಹಾಸ್ಟೆಲ್‌ನಲ್ಲಿ ವ್ಯಾಸಂಗ ಮಾಡಿದ್ದ ತನ್ನ ಪುತ್ರಿಯರಿಗೆ ಕುಮ್ಮಕ್ಕು ನೀಡಿದ ಆರೋಪ ಈ ಮಹಿಳೆಯ ಮೇಲಿದೆ.
ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ನೀಡಿದ ದೂರು ಆಧರಿಸಿ ಮಠದ ವಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಶಿಕ್ಷಕ ಬಸವರಾಜೇಂದ್ರ ಎಂಬವರನ್ನು ಬಂಧಿಸಿದ್ದ ಪೊಲೀಸರು, ಶುಕ್ರವಾರ ಚಿತ್ರದುರ್ಗದಲ್ಲಿ ಪ್ರತ್ಯೇಕವಾಗಿ ವಿಚಾರಣೆ ನಡೆಸಿದರು. ಬಸವರಾಜನ್ ಪತ್ನಿ ಸೌಭಾಗ್ಯ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಸ್ಥಳ ಮಹಜರು: ಶಿವಮೂರ್ತಿ ಶರಣರ ಫೋಟೊಗಳು ಕಳವಾಗಿರುವ ಚಿತ್ರದುರ್ಗ ಮಠದ ರಾಜಾಂಗಣದ ಸ್ಥಳ ಮಹಜರು ಶುಕ್ರವಾರ ನಡೆಯಿತು. ಪೊಲೀಸ್ ವಶದಲ್ಲಿರುವ ಆರೋಪಿ ಶ್ರೀನಿವಾಸ್ ಎಂಬುವರನ್ನು ಮಠಕ್ಕೆ ಕರೆದೊಯ್ದು ತನಿಖಾ ತಂಡ ಸ್ಥಳ ಮಹಜರು ಮಾಡಿತು.
ಜಾಮೀನು ಅರ್ಜಿ ವಜಾ: ಎರಡನೇ ಪೋಕ್ಸೊ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಇಬ್ಬರು ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಜಾ ಮಾಡಿದೆ. ಆರೋಪಿಗಳಾದ ಮಹಾಲಿಂಗ ಮತ್ತು ಕರಿಬಸಪ್ಪ ಎಂಬುವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತು.

andolanait

Recent Posts

ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ : ಮಹತ್ವದ ಮಾಹಿತಿ ಕೊಟ್ಟ ಗೃಹ ಸಚಿವ ಪರಮೇಶ್ವರ

ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು…

1 min ago

ಸ್ಪೋಟ ದುರಂತ | ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಮಹದೇವಪ್ಪ ; ಬಳಿಕ ಹೇಳಿದ್ದೇನು?

ಮೈಸೂರು : ಮೈಸೂರಿನ ಅರಮನೆ ಬಳಿ ಹಿಲೀಯಂ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ ಪ್ರಕರಣ ಸಂಬಂಧ ಶುಕ್ರವಾರ ಜಿಲ್ಲಾ ಉಸ್ತುವಾರಿ…

4 mins ago

ಸಿಲಿಂಡರ್‌ ಸ್ಫೋಟ : ಮೈಸೂರಿಗೆ NIA ತಂಡ ಭೇಟಿ, ಹಲವು ಆಯಾಮಗಳಿಂದ ಪರಿಶೀಲನೆ

ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…

2 hours ago

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

4 hours ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

4 hours ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

4 hours ago