ಮೈಸೂರು: ಪೋಕ್ಸೋ ಕಾಯಿದೆಯಡಿ ಬಂಧನದಲ್ಲಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಿದ ಇಬ್ಬರು ಸಂತ್ರಸ್ತ ವಿದ್ಯಾರ್ಥಿನಿಯರ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೈಸೂರಿನಲ್ಲಿದ್ದ ಇವರನ್ನು ಪೊಲೀಸರು ವಿಚಾರಣೆಗಾಗಿ ಶುಕ್ರವಾರ ನಸುಕಿನಲ್ಲಿ ಚಿತ್ರದುರ್ಗಕ್ಕೆ ಕರೆದೊಯ್ದರು. ಮಹಿಳಾ ಪೊಲೀಸರು ಇವರನ್ನು ಇಡೀ ದಿನ ವಿಚಾರಣೆ ನಡೆಸಿದ್ದಾರೆ. ಶರಣರ ವಿರುದ್ಧ ಹೇಳಿಕೆ ನೀಡುವಂತೆ ಮಠದಲ್ಲಿ ಹಾಸ್ಟೆಲ್ನಲ್ಲಿ ವ್ಯಾಸಂಗ ಮಾಡಿದ್ದ ತನ್ನ ಪುತ್ರಿಯರಿಗೆ ಕುಮ್ಮಕ್ಕು ನೀಡಿದ ಆರೋಪ ಈ ಮಹಿಳೆಯ ಮೇಲಿದೆ.
ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ನೀಡಿದ ದೂರು ಆಧರಿಸಿ ಮಠದ ವಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಶಿಕ್ಷಕ ಬಸವರಾಜೇಂದ್ರ ಎಂಬವರನ್ನು ಬಂಧಿಸಿದ್ದ ಪೊಲೀಸರು, ಶುಕ್ರವಾರ ಚಿತ್ರದುರ್ಗದಲ್ಲಿ ಪ್ರತ್ಯೇಕವಾಗಿ ವಿಚಾರಣೆ ನಡೆಸಿದರು. ಬಸವರಾಜನ್ ಪತ್ನಿ ಸೌಭಾಗ್ಯ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಸ್ಥಳ ಮಹಜರು: ಶಿವಮೂರ್ತಿ ಶರಣರ ಫೋಟೊಗಳು ಕಳವಾಗಿರುವ ಚಿತ್ರದುರ್ಗ ಮಠದ ರಾಜಾಂಗಣದ ಸ್ಥಳ ಮಹಜರು ಶುಕ್ರವಾರ ನಡೆಯಿತು. ಪೊಲೀಸ್ ವಶದಲ್ಲಿರುವ ಆರೋಪಿ ಶ್ರೀನಿವಾಸ್ ಎಂಬುವರನ್ನು ಮಠಕ್ಕೆ ಕರೆದೊಯ್ದು ತನಿಖಾ ತಂಡ ಸ್ಥಳ ಮಹಜರು ಮಾಡಿತು.
ಜಾಮೀನು ಅರ್ಜಿ ವಜಾ: ಎರಡನೇ ಪೋಕ್ಸೊ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಇಬ್ಬರು ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಜಾ ಮಾಡಿದೆ. ಆರೋಪಿಗಳಾದ ಮಹಾಲಿಂಗ ಮತ್ತು ಕರಿಬಸಪ್ಪ ಎಂಬುವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…