ಜಿಲ್ಲೆಗಳು

ಚುಡಾದ 20 ವರ್ಷಗಳ ಮಾಸ್ಟರ್ ಪ್ಲಾನ್ ಸಿದ್ಧ!

ತಾತ್ಕಾಲಿಕ ಒಪ್ಪಿಗೆ ದೊರೆಕಿದ್ದು ಅಂತಿಮ ಅನುಮೋದನೆ ಬಾಕಿ

ರಾಜೇಶ್ ಬೆಂಡರವಾಡಿ

ಚಾಮರಾಜನಗರ: ಬೆಳೆಯುತ್ತಿರುವ ಚಾಮರಾಜನಗರದ ಮುಂದಿನ ೨೦ವರ್ಷಗಳ ಬೆಳವಣಿಗೆ ದೃಷ್ಟಿಯಲ್ಲಿರಿಸಿಕೊಂಡು  ಚುಡಾ ಸಿದ್ಧಪಡಿಸಿರುವ ಮಾಸ್ಟರ್ ಪ್ಲಾನ್ (ಪರಿಷ್ಕೃತ -೨)ಕರಡು ಪ್ರತಿಗೆ ಅನುಮೋದನೆ ದೊರಕಿದ್ದು ಅಂತಿಮ ಅನುಮೋದನೆಗಾಗಿ ಸರ್ಕಾರಕ್ಕೆ ಕಳಿಸುವುದಷ್ಟೇ ಬಾಕಿ ಇದೆ.
ಚಾಮರಾಜನಗರ ನಗರಾಭಿವೃದ್ಧಿ ಪ್ರಾಧಿಕಾರ(ಚುಡಾ) ವ್ಯಾಪ್ತಿ ೧೨೦.೯೯ ಚದರ ಕಿಲೋಮೀಟರ್ ಇದೆ. ಚಾಮರಾಜನಗರ ನಗರಸಭೆಯು ೩೧ ವಾರ್ಡುಗಳಲ್ಲದೆ ನಗರ ಸುತ್ತಮುತ್ತಲಿನ ೨೬ ಗ್ರಾಮಗಳೂ ಇದರಲ್ಲಿ ಸೇರಿವೆ.
ಕೂಡ್ಲೂರು, ಬೂದಿತಿಟ್ಟು, ಶಿವಪುರ, ಕೋಡಿಮೋಳೆ, ಚಂದಕವಾಡಿ, ಬಸವನಪುರ, ಬಂಡಿಗೆರೆ, ದೊಡ್ಡಮೋಳೆ ಇನ್ನಿತರ ಗ್ರಾಮಗಳು ಚುಡಾದ ಕರಡು ನಕ್ಷೆಯಲ್ಲಿದ್ದು, ಈ ಎಲ್ಲಾ ಕಡೆಯ ಬೆಳವಣಿಗೆಯನ್ನು ಮಹಾಯೋಜನೆಯಲ್ಲಿ (ಮಾಸ್ಟರ್ ಪ್ಲಾನ್‌ನಲ್ಲಿ) ದಾಖಲಿಸಲಾಗಿದೆ.
ವಸತಿ, ಉದ್ಯಾನವನ, ವಾಣಿಜ್ಯ, ಕೈಗಾರಿಕೆ, ವ್ಯವಸಾಯ, ಸಾರ್ವಜನಿಕ ಮತ್ತು ಅರೆ ಸಾರ್ವಜನಿಕ ವಲಯ-ಹೀಗೆ ವಿವಿಧ ಪ್ರಕಾರಗಳ ಅನುಸಾರ ಭೂಮಿಯನ್ನು ವಿಂಗಡಿಸಲಾಗಿದೆ. ಮುಂದಿನ ೨೦೪೧ನೇ ಇಸವಿಯ ೨.೫೦ ಲಕ್ಷ ಜನಸಂಖ್ಯೆಯನ್ನು ಆಧರಿಸಿ ಸಿದ್ಧಪಡಿಸಿರುವ ಈ ಮಾಸ್ಟರ್ ಪ್ಲಾನ್‌ಗೆ ಕಳೆದ ಮಾರ್ಚ್ ನಲ್ಲಿಯೇ ಸರ್ಕಾರ ತಾತ್ಕಾಲಿಕ ಅನುಮೋದನೆ ನೀಡಿದೆ.
ಕರಡು ಅನುಮೋದನೆ ಬಳಿಕ ಸಾರ್ವಜನಿಕರ ಸಲಹೆ ಮತ್ತು ಆಕ್ಷೇಪಕ್ಕೆ ೬೦ದಿನಗಳ ಕಾಲಾವಕಾಶ ನೀಡಲಾಗಿತ್ತು. ಅದರಂತೆ ಆಕ್ಷೇಪಗಳು-ಸಲಹೆಗಳನ್ನು ಪಡೆಯಲಾಗಿದೆ. ಕೆಲವೊಂದು ಸಲಹೆಗಳನ್ನು ಅಳವಡಿಸಿಕೊಂಡು ಅಂತಿಮ ಅನುಮೋದನೆಗಾಗಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅವರಿಗೆ ಸಲ್ಲಿಸಲು ಪ್ರತಿ ಸಿದ್ಧವಾಗಿದೆ.
ಕುಲಗಾಣ ಶಾಂತಮೂರ್ತಿ ಅವರ ನಂತರ ಚುಡಾಕ್ಕೆ ಯಾರನ್ನೂ ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿಲ್ಲ. ಹೀಗಾಗಿ ಜಿಲ್ಲಾಧಿಕಾರಿ ಅವರೇ ಅಧ್ಯಕ್ಷರಾಗಿದ್ದು ಅವರಿಂದ ಸಹಿಪಡೆದು ಅಂತಿಮ ಒಪ್ಪಿಗೆಗಾಗಿ ಸರ್ಕಾರಕ್ಕೆ ಕಳುಹಿಸಬೇಕಿದೆ.
ಮೂಲಗಳ ಪ್ರಕಾರ ಈ ತಿಂಗಳ ಒಳಗೆ ಸರ್ಕಾರ ಕ್ಕೆ ಸಲ್ಲಿಕೆಯಾಗಲಿದ್ದು ಅಲ್ಲಿ ಅನುಮೋದನೆ ದೊರೆತ ನಂತರ ಹೊಸ ಮಹಾಯೋಜನೆ(ಪರಿಷ್ಕೃತ೨) ಅನುಷ್ಠಾನಕ್ಕೆ ಬರಲಿದೆ. ಚಾ.ನಗರ ನಗರಸಭೆ ಮಾದರಿಯಲ್ಲೇ ಸುತ್ತಮುತ್ತಲಿನ ೨೬ಗ್ರಾಮಗಳವರು ಕಟ್ಟಡಗಳ ನಿರ್ಮಾಣ ಭೂ ಪರಿವರ್ತನೆ, ಇಷ್ಟೇ ಎತ್ತರದಲ್ಲಿ ಕಟ್ಟಡ ಕಟ್ಟಬೇಕೆಂಬ ನಿಯಮಗಳಿಗೆ ಮಹಾಯೋಜನೆ-೧ಜಾರಿಗೊಂಡಾಗಲೇ ಒಳಪಟ್ಟಿದ್ದಾರೆ. ಆದರೆ ಆಸ್ತಿ ತೆರಿಗೆ, ಕುಡಿಯುವ ನೀರು ಇನ್ನಿತರ ಮೂಲಸೌಕರ್ಯ ವ್ಯವಹಾರಗಳೆಲ್ಲಾ ಎಂದಿನಂತೆ ಗ್ರಾಪಂಗಳಲ್ಲೇ ಮುಂದುವರಿದಿದೆ.
ಚುಡಾ ೧೯೯೮ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು ಆಗ ಚಾಮರಾಜನಗರ ನಗರಸಭೆ ಜೊತೆ ಕೆಲ ಗ್ರಾಮಗಳಷ್ಟೇ ಭಾಗಶಃ ಒಳಪಟ್ಟಿದ್ದವು. ೨೦೦೭ರಲ್ಲಿ ಮಹಾಯೋಜನೆ-೧ ರ ಪರಿಷ್ಕರಣೆ ನಡೆದಿತ್ತು.


ಚಾಮರಾಜನಗರ ನಗರಾಭಿವೃದ್ಧಿ ಪ್ರಾಧಿಕಾರ(ಚುಡಾ) ಮಾಸ್ಟರ್ ಪ್ಲಾನ್-೨ಗೆ ಈಗಾಗಲೇ ತಾತ್ಕಾಲಿಕ ಅನುಮೋದನೆ ದೊರಕಿದೆ. ಅಂತಿಮ ಅನುಮೋದನೆ ದೊರಕಬೇಕಿದೆ.
-ಎಂ.ಎಸ್.ಪಂಕಜಾ, ಆಯುಕ್ತರು, ಚುಡಾ.


ಅನುಷ್ಠಾನ ನಿಶ್ಚಿತ
ಸರ್ಕಾರ ಈಗಾಗಲೇ ತಾತ್ಕಾಲಿಕ ಅನುಮೋದನೆ ನೀಡಿರುವುದರಿಂದ ಪರಿಷ್ಕೃತ ಕರಡು-೨ಗೆ ಅನುಮೋದನೆ ದೊರಕಿ ಅದು ಅನುಷ್ಠಾನಗೊಳ್ಳುವುದು ನಿಶ್ಚಿತ ಎಂದು ಚಾ.ನಗರ ನಗರಾಭಿವೃಧ್ಧಿ ಪ್ರಾಧಿಕಾರದ ಮೂಲಗಳು ತಿಳಿಸಿವೆ.

andolanait

Recent Posts

ಎಐ ಸಮ್ಮಿಟ್‌ನಲ್ಲಿ ಯುವ ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ : ಮಾರ್ಗರೇಟ್ ಆಳ್ವಾ ಖಂಡನೆ

ಬೆಂಗಳೂರು : ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ…

3 mins ago

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…

19 mins ago

ಮೈಸೂರು | ಸ್ವಚ್ಛತಾ ರಾಯಾಭಾರಿಗಳಾಗಿ ಆರು ಗಣ್ಯರ ನೇಮಕ

ಮೈಸೂರು : ಐತಿಹಾಸಿಕ ಪರಂಪರೆ, ಸಾಂಸ್ಕ ತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ…

40 mins ago

ನಟ ದರ್ಶನ್‌ಗೆ ಬಿಗ್‌ ರಿಲೀಫ್‌: ಗನ್‌ ಲೈಸೆನ್ಸ್‌ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್‌ ಅವರ…

2 hours ago

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ: ರಾಜ್ಯದಲ್ಲೂ ಹೈಅಲರ್ಟ್‌ ಎಂದ ಪರಮೇಶ್ವರ್‌

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್‌ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…

2 hours ago

ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ: ಸಚಿವ ಕೆ.ವೆಂಕಟೇಶ್‌

ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ಸಿಎಂ ಕೂಗು…

3 hours ago