ಜಿಲ್ಲೆಗಳು

ಎರಡು ವರ್ಷಗಳ ನಂತರ ಚುಂಚನಕಟ್ಟೆ ಜಲಪಾತೋತ್ಸವ

ನಾಳೆ ಸಂಜೆ ೬ ಗಂಟೆಗೆ ಸಚಿವ ಎಸ್‌ಟಿಎಸ್‌ರಿಂದ ಉದ್ಘಾಟನೆ; ಜಲಪಾತಕ್ಕೆ ವರ್ಣರಂಜಿತ ವಿದ್ಯುತ್ ದೀಪಾಲಂಕಾರ

ಭೇರ್ಯ ಮಹೇಶ್

 ಕೆ.ಆರ್.ನಗರ: ಮೈಸೂರು ಜಿಲ್ಲೆಯ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಪ್ರವಾಸಿ ತಾಣವಾದ ಚುಂಚನಕಟ್ಟೆಯಲ್ಲಿ ಕಾವೇರಿ ನದಿಯ ಜಲಪಾತೋತ್ಸವ ಭಾನುವಾರ (ನ.೧೩) ಸಂಜೆ ೬ ಗಂಟೆಗೆ ನಡೆಯಲಿದೆ.

ಕಾವೇರಿ ನದಿಯ ಧನುಷ್ಕೋಟಿ ಜಲಪಾತೋತ್ಸವಕ್ಕೆ ಲೇಸರ್ ಲೈಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಜಲಪಾತ ಲೇಸರ್ ಬೆಳಕಿನಲ್ಲಿ ಜಗಮಗಿಸುತ್ತಿದ್ದು, ನೋಡುಗರ ಕಣ್ಮನ ಸೆಳೆುುಂವಂತೆ ಸಾಲಿಗ್ರಾಮ ತಾಲ್ಲೂಕು ಆಡಳಿತ ಸಕಲ ವ್ಯವಸ್ಥೆಯನ್ನು ಕಲ್ಪಿಸಿದೆ.

ಚುಂಚನಕಟ್ಟೆಯ ಕಾವೇರಿ ಜಲಪಾತೋತ್ಸವ ಹಿನ್ನೆಲೆಯಲ್ಲಿ ಶ್ರೀರಾಮನ ದೇವಾಲಯ, ಬಸವ ವೃತ್ತ, ಕಾವೇರಿ ನದಿಯ ಸೇತುವೆ ಸೇರಿದಂತೆ ಮತ್ತಿತರ ಕಡೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು ವಿಭಿನ್ನ ರೀತಿುಂಲ್ಲಿ ವಿದ್ಯುತ್ ಬೆಳೆಕಿನ ಸೊಬಗು ಕಾರ್ಯಕ್ರಮಕ್ಕೆ ಆಗಮಿಸುವವರಲ್ಲಿ ಉಲ್ಲಾಸ ತರಿಸುವುದು ಖಚಿತ.

ಶ್ರೀರಾಮನ ದೇವಸ್ಥಾನದ ಹಿಂಭಾಗದಲ್ಲಿ ಬೃಹತ್ ವೇದಿಕೆುಂನ್ನು ನಿರ್ಮಿಸಲಾಗಿದ್ದು ಎಲ್.ಇ.ಡಿ. ದೊಡ್ಡ ಪರದೆುಂ ವ್ಯವಸ್ಥೆ ಕೂಡ ವಾಡಲಾಗಿದೆ. ಜ್ಹೀ ಕನ್ನಡ ಸರಿಗಮಪ ಖ್ಯಾತಿುಂ ಹಿನ್ನೆಲೆ ಗಾುಂಕ ಕಂಬದ ರಂಗ್ಂಯು ಸೇರಿದಂತೆ ಅನೇಕ ಖ್ಯಾತ ಗಾುಂಕರು ಹಾಗೂ ರೆಮೊ ಚಿತ್ರದ ತಂಡದಿಂದ ಮನರಂಜನೆ ಕಾರ್ಯಕ್ರಮ ಜೊತೆಗೆ ಹಾಸ್ಯ ರಸದೌತಣವನ್ನು ಖ್ಯಾತ ಹಾಸ್ಯ ನಟರು ನೀಡಲಿದ್ದಾರೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಲಿದ್ದು, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಭಾಗವಹಿಸುವರು. ಶಾಸಕ ಸಾ.ರಾ.ಮಹೇಶ್ ಅಧ್ಯಕ್ಷತೆಯಲ್ಲಿ ಜಲಪಾತೋತ್ಸವ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ ಮಂಡಳಿ ಅಧ್ಯಕ್ಷರು, ನಿರ್ದೇಶಕರು, ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಅಧಿಕಾರಿ ವರ್ಗದವರು ಭಾಗವಹಿಸಲಿದ್ದು, ಸಾಲಿಗ್ರಾಮ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತು ಏರ್ಪಡಿಸಿದ್ದಾರೆ.

೨ ವರ್ಷಗಳ ನಂತರ ಜಲಪಾತೋತ್ಸವ: ಕಳೆದ ಎರಡು ವರ್ಷಗಳಿಂದ ಕೋವಿಡ್‌ನಿಂದಾಗಿ ಚುಂಚನಕಟ್ಟೆ ಕಾವೇರಿ ಜಲಪಾತೋತ್ಸವ ಕಾರ್ಯಕ್ರಮ ಸ್ಥಗಿತಗೊಳಿಸಲಾಗಿತ್ತು. ಈ ಬಾರಿ ಅದ್ಧೂರಿಯಾಗಿ ಜಲಪಾತೋತ್ಸವ ಕಾರ್ಯಕ್ರಮವನ್ನು ಸರ್ಕಾರ ಶಾಸಕ ಸಾ.ರಾ.ಮಹೇಶ್ ನೇತೃತ್ವದಲ್ಲಿ ನಡೆಸಲಾಗುತ್ತಿದೆ.

ಚುಂಚನಕಟ್ಟೆಯ ಕಾವೇರಿ ಜಲಪಾತೋತ್ಸವ ಹಿನ್ನೆಲೆಯಲ್ಲಿ ಶ್ರೀರಾಮನ ದೇವಾಲಯ, ಬಸವ ವೃತ್ತ, ಕಾವೇರಿ ನದಿಯ ಸೇತುವೆ ಮತ್ತಿತರ ಕಡೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

andolana

Recent Posts

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

55 mins ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

1 hour ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

1 hour ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

1 hour ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

3 hours ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

4 hours ago