ಜಿಲ್ಲೆಗಳು

ಎರಡು ವರ್ಷಗಳ ನಂತರ ಚುಂಚನಕಟ್ಟೆ ಜಲಪಾತೋತ್ಸವ

ನಾಳೆ ಸಂಜೆ ೬ ಗಂಟೆಗೆ ಸಚಿವ ಎಸ್‌ಟಿಎಸ್‌ರಿಂದ ಉದ್ಘಾಟನೆ; ಜಲಪಾತಕ್ಕೆ ವರ್ಣರಂಜಿತ ವಿದ್ಯುತ್ ದೀಪಾಲಂಕಾರ

ಭೇರ್ಯ ಮಹೇಶ್

 ಕೆ.ಆರ್.ನಗರ: ಮೈಸೂರು ಜಿಲ್ಲೆಯ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಪ್ರವಾಸಿ ತಾಣವಾದ ಚುಂಚನಕಟ್ಟೆಯಲ್ಲಿ ಕಾವೇರಿ ನದಿಯ ಜಲಪಾತೋತ್ಸವ ಭಾನುವಾರ (ನ.೧೩) ಸಂಜೆ ೬ ಗಂಟೆಗೆ ನಡೆಯಲಿದೆ.

ಕಾವೇರಿ ನದಿಯ ಧನುಷ್ಕೋಟಿ ಜಲಪಾತೋತ್ಸವಕ್ಕೆ ಲೇಸರ್ ಲೈಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಜಲಪಾತ ಲೇಸರ್ ಬೆಳಕಿನಲ್ಲಿ ಜಗಮಗಿಸುತ್ತಿದ್ದು, ನೋಡುಗರ ಕಣ್ಮನ ಸೆಳೆುುಂವಂತೆ ಸಾಲಿಗ್ರಾಮ ತಾಲ್ಲೂಕು ಆಡಳಿತ ಸಕಲ ವ್ಯವಸ್ಥೆಯನ್ನು ಕಲ್ಪಿಸಿದೆ.

ಚುಂಚನಕಟ್ಟೆಯ ಕಾವೇರಿ ಜಲಪಾತೋತ್ಸವ ಹಿನ್ನೆಲೆಯಲ್ಲಿ ಶ್ರೀರಾಮನ ದೇವಾಲಯ, ಬಸವ ವೃತ್ತ, ಕಾವೇರಿ ನದಿಯ ಸೇತುವೆ ಸೇರಿದಂತೆ ಮತ್ತಿತರ ಕಡೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು ವಿಭಿನ್ನ ರೀತಿುಂಲ್ಲಿ ವಿದ್ಯುತ್ ಬೆಳೆಕಿನ ಸೊಬಗು ಕಾರ್ಯಕ್ರಮಕ್ಕೆ ಆಗಮಿಸುವವರಲ್ಲಿ ಉಲ್ಲಾಸ ತರಿಸುವುದು ಖಚಿತ.

ಶ್ರೀರಾಮನ ದೇವಸ್ಥಾನದ ಹಿಂಭಾಗದಲ್ಲಿ ಬೃಹತ್ ವೇದಿಕೆುಂನ್ನು ನಿರ್ಮಿಸಲಾಗಿದ್ದು ಎಲ್.ಇ.ಡಿ. ದೊಡ್ಡ ಪರದೆುಂ ವ್ಯವಸ್ಥೆ ಕೂಡ ವಾಡಲಾಗಿದೆ. ಜ್ಹೀ ಕನ್ನಡ ಸರಿಗಮಪ ಖ್ಯಾತಿುಂ ಹಿನ್ನೆಲೆ ಗಾುಂಕ ಕಂಬದ ರಂಗ್ಂಯು ಸೇರಿದಂತೆ ಅನೇಕ ಖ್ಯಾತ ಗಾುಂಕರು ಹಾಗೂ ರೆಮೊ ಚಿತ್ರದ ತಂಡದಿಂದ ಮನರಂಜನೆ ಕಾರ್ಯಕ್ರಮ ಜೊತೆಗೆ ಹಾಸ್ಯ ರಸದೌತಣವನ್ನು ಖ್ಯಾತ ಹಾಸ್ಯ ನಟರು ನೀಡಲಿದ್ದಾರೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಲಿದ್ದು, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಭಾಗವಹಿಸುವರು. ಶಾಸಕ ಸಾ.ರಾ.ಮಹೇಶ್ ಅಧ್ಯಕ್ಷತೆಯಲ್ಲಿ ಜಲಪಾತೋತ್ಸವ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ ಮಂಡಳಿ ಅಧ್ಯಕ್ಷರು, ನಿರ್ದೇಶಕರು, ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಅಧಿಕಾರಿ ವರ್ಗದವರು ಭಾಗವಹಿಸಲಿದ್ದು, ಸಾಲಿಗ್ರಾಮ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತು ಏರ್ಪಡಿಸಿದ್ದಾರೆ.

೨ ವರ್ಷಗಳ ನಂತರ ಜಲಪಾತೋತ್ಸವ: ಕಳೆದ ಎರಡು ವರ್ಷಗಳಿಂದ ಕೋವಿಡ್‌ನಿಂದಾಗಿ ಚುಂಚನಕಟ್ಟೆ ಕಾವೇರಿ ಜಲಪಾತೋತ್ಸವ ಕಾರ್ಯಕ್ರಮ ಸ್ಥಗಿತಗೊಳಿಸಲಾಗಿತ್ತು. ಈ ಬಾರಿ ಅದ್ಧೂರಿಯಾಗಿ ಜಲಪಾತೋತ್ಸವ ಕಾರ್ಯಕ್ರಮವನ್ನು ಸರ್ಕಾರ ಶಾಸಕ ಸಾ.ರಾ.ಮಹೇಶ್ ನೇತೃತ್ವದಲ್ಲಿ ನಡೆಸಲಾಗುತ್ತಿದೆ.

ಚುಂಚನಕಟ್ಟೆಯ ಕಾವೇರಿ ಜಲಪಾತೋತ್ಸವ ಹಿನ್ನೆಲೆಯಲ್ಲಿ ಶ್ರೀರಾಮನ ದೇವಾಲಯ, ಬಸವ ವೃತ್ತ, ಕಾವೇರಿ ನದಿಯ ಸೇತುವೆ ಮತ್ತಿತರ ಕಡೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

andolana

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

22 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

22 hours ago