ಮಂಡ್ಯ : ಜಿಲ್ಲೆಯ ಪ್ರಸಿದ್ದ ಸ್ಥಳವಾದ ಮೇಲುಕೋಟೆಯಲ್ಲಿ ತೆಲುಗು ಸಿನಿಮಾ ಚಿತ್ರತಂಡವು ಚಿತ್ರೀಕರಣಕ್ಕಾಗಿ ಪ್ರಾಚ್ಯ ಸ್ಮಾರಕವನ್ನೇ ಬಾರ್ ಆಗಿ ಪರಿವರ್ತಿಸಿದ ಘಟನೆ ನಡೆದಿದೆ.
ಈ ಮೂಲಕ ಐತಿಹಾಸಿಕ ಪಾರಂಪರೆ, ಸಂಸ್ಕೃತಿಗೆ ದಕ್ಕೆಯನ್ನುಂಟುಮಾಡಿದೆ.ಸಿನಿಮಾ ತಂಡ.
ಪಾರಂಪರಿಕ ಸ್ಥಳವಾದ ರಾಯಗೋಪುರದಲ್ಲಿ ಬಾರ್ ರೀತಿಯ ಸೆಟ್ ಹಾಕಿ ವಿವಿಧ ಬ್ರಾಂಡ್ ಮದ್ಯದ ಬಾಟಲಿಗಳನ್ನಿಟ್ಟು ಚಿತ್ರೀಕರಣ ಮಾಡಿರುವ ಬಗ್ಗೆ ಜನರು ಆರೋಪಿಸಿದ್ದಾರೆ.
ಈ ಚಿತ್ರದಲ್ಲಿ ನಾಯಕ ನಟನಾಗಿ ನಾಗಾರ್ಜುನ ಅವರ ಪುತ್ರ ನಾಗಚೈತನ್ಯ ಅವರು ನಟಿಸುತ್ತಿದ್ದು, ಈ ಸ್ಥಳಗಳಲ್ಲಿ 2 ದಿನಗಳ ಕಾಲ ಚಿತ್ರೀಕರಣವನ್ನು ಮಾಡಲು ಷರತ್ತು ಬದ್ದ ಅನುಮತಿಯನ್ನು ಜಿಲ್ಲಾಧಿಕಾರಿಗಳು ನೀಡಿದ್ದರು.
ಆದರೆ ಈ ಸಿನಿಮಾ ತಂಡವು ಸೆಟ್ ನಿರ್ಮಿಸಲು ಭಾರೀ ಗಾತ್ರದ ಕಬ್ಬಿಣದ ಕಂಬಗಳನ್ನು ಬಳಸಿದ್ದಲ್ಲದೆ ಅಲ್ಲಿಯ ನಿಯಮವನ್ನು ಉಲ್ಲಂಘಿಸಿದೆ. ಈ ಸಂಬಂಧ ಚಿತ್ರ ತಂಡಕ್ಕೆ ನೋಟಿಸ್ ನೀಡಲಾಗಿದ್ದು. ಚಿತ್ರೀಕರಣವನ್ನು ರದ್ದುಗೊಳಿಸಲಾಗಿದೆ.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…