ಜಿಲ್ಲೆಗಳು

ಸ್ವಚ್ಚ ಭಾರತ್ ಯೋಜನೆಯಡಿ ಏಕ ಬಳಕೆಯ ಪ್ಲಾಸ್ಟಿಕ್ ವಿಲೇವಾರಿ : ಎಂ.ಎನ್. ನಟರಾಜು

ಚಾಮರಾಜನಗರ: ಪ್ರತಿ ವರ್ಷ ಅಕ್ಟೋಬರ್ ೧ ರಿಂದ ೩೦ ರವರೆಗೆ ಸ್ವಚ್ಚ ಭಾರತ್ ಕಾರ್ಯಕ್ರಮವನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದು, ಈ ಬಾರಿಯೂ ಏಕ ಬಳಕೆಯ ಪ್ಲಾಸ್ಟಿಕ್ ಸಂಗ್ರಹಿಸಿ ವಿಲೇವಾರಿ ಮಾಡಲಾಗುತ್ತದೆ ಎಂದು ಎಂದು ನೆಹರು ಯುವ ಕೇಂದ್ರ ಸಂಘಟನೆ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ರಾಜ್ಯ ನಿರ್ದೇಶಕ ಎಂ.ಎನ್. ನಟರಾಜು ತಿಳಿಸಿದರು.
ಯುವಜನ ವ್ಯವಹಾರಗಳ ಇಲಾಖೆ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ದೇಶದೆಲ್ಲೆಡೆ ‘ಸ್ವಚ್ಚ ಭಾರತ್ ೨.೦’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರಡಿ ವಿವಿಧ ಕಡೆ ಸ್ವಚ್ಚತಾ ಕಾರ್ಯಕ್ರಮ ನಡೆಸುತ್ತಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಳೆದ ವರ್ಷ ಸ್ವಚ್ಚ ಭಾರತ ಕಾರ್ಯಕ್ರಮದ ಅಂಗವಾಗಿ ದೇಶದ ೭೪೪ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ೭೫ ಲಕ್ಷ ಕೆಜಿ ಏಕಬಳಕೆಯ ಪ್ಲಾಸ್ಟಿಕ್ ಸಂಗ್ರಹಿಸುವ ಗುರಿ ನಿಗದಿಪಡಿಸಲಾಗಿತ್ತು. ಕೇವಲ ೨೨ ದಿನಗಳಲ್ಲಿಯೇ ನಿಗದಿತ ಗುರಿ ಸಾಧಿಸಲಾಗಿದೆ. ಈ ಬಾರಿ ೧ ಕೋಟಿ ಕೆ.ಜಿ. ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರ ಊಹಿಸಲಾಗದ ಹಾಳಾಗಿದೆ. . ಇದನ್ನು ತಡೆಗಟ್ಟಿ ಪ್ರಾಣಿ-ಪಕ್ಷಿ ಸಂಕುಲವನ್ನು ರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸ್ವಚ್ಚಭಾರತ ಕಾರ್ಯಕ್ರಮದಲ್ಲಿ ದೇಶದ ೭೪೪ ಜಿಲ್ಲೆಗಳಲ್ಲಿ ಕರ್ನಾಟಕದ ೩೧ ಜಿಲ್ಲೆಗಳು ಸೇರಿವೆ ಎಂದರು.
ಪ್ರಮುಖ ಪ್ರವಾಸಿ ಸ್ಥಳಗಳು, ಧಾರ್ಮಿಕ ಕೇಂದ್ರಗಳು, ಇತರೆ ಕಡೆ ಮುಖ್ಯ ಹೆದ್ದಾರಿಗಳಲ್ಲಿನ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತದೆ. ಗ್ರಾಮ ಮಟ್ಟದಲ್ಲಿ ಗ್ರಾಮಪಂಚಾಯಿತಿ ಹಾಗೂ ನಗರ ಪ್ರದೇಶದಲ್ಲಿ ನಗರಾಭಿವೃದ್ಧಿ ಕೋಶ ತ್ಯಾಜ್ಯಸಂಗ್ರಹಣೆಯ ಉಸ್ತುವಾರಿ ವಹಿಸಲಿವೆ ಎಂದರು.

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

49 mins ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

1 hour ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

1 hour ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

2 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

11 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

11 hours ago