ಜಿಲ್ಲೆಗಳು

ಸ್ವಚ್ಚ ಭಾರತ್ ಯೋಜನೆಯಡಿ ಏಕ ಬಳಕೆಯ ಪ್ಲಾಸ್ಟಿಕ್ ವಿಲೇವಾರಿ : ಎಂ.ಎನ್. ನಟರಾಜು

ಚಾಮರಾಜನಗರ: ಪ್ರತಿ ವರ್ಷ ಅಕ್ಟೋಬರ್ ೧ ರಿಂದ ೩೦ ರವರೆಗೆ ಸ್ವಚ್ಚ ಭಾರತ್ ಕಾರ್ಯಕ್ರಮವನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದು, ಈ ಬಾರಿಯೂ ಏಕ ಬಳಕೆಯ ಪ್ಲಾಸ್ಟಿಕ್ ಸಂಗ್ರಹಿಸಿ ವಿಲೇವಾರಿ ಮಾಡಲಾಗುತ್ತದೆ ಎಂದು ಎಂದು ನೆಹರು ಯುವ ಕೇಂದ್ರ ಸಂಘಟನೆ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ರಾಜ್ಯ ನಿರ್ದೇಶಕ ಎಂ.ಎನ್. ನಟರಾಜು ತಿಳಿಸಿದರು.
ಯುವಜನ ವ್ಯವಹಾರಗಳ ಇಲಾಖೆ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ದೇಶದೆಲ್ಲೆಡೆ ‘ಸ್ವಚ್ಚ ಭಾರತ್ ೨.೦’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರಡಿ ವಿವಿಧ ಕಡೆ ಸ್ವಚ್ಚತಾ ಕಾರ್ಯಕ್ರಮ ನಡೆಸುತ್ತಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಳೆದ ವರ್ಷ ಸ್ವಚ್ಚ ಭಾರತ ಕಾರ್ಯಕ್ರಮದ ಅಂಗವಾಗಿ ದೇಶದ ೭೪೪ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ೭೫ ಲಕ್ಷ ಕೆಜಿ ಏಕಬಳಕೆಯ ಪ್ಲಾಸ್ಟಿಕ್ ಸಂಗ್ರಹಿಸುವ ಗುರಿ ನಿಗದಿಪಡಿಸಲಾಗಿತ್ತು. ಕೇವಲ ೨೨ ದಿನಗಳಲ್ಲಿಯೇ ನಿಗದಿತ ಗುರಿ ಸಾಧಿಸಲಾಗಿದೆ. ಈ ಬಾರಿ ೧ ಕೋಟಿ ಕೆ.ಜಿ. ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರ ಊಹಿಸಲಾಗದ ಹಾಳಾಗಿದೆ. . ಇದನ್ನು ತಡೆಗಟ್ಟಿ ಪ್ರಾಣಿ-ಪಕ್ಷಿ ಸಂಕುಲವನ್ನು ರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸ್ವಚ್ಚಭಾರತ ಕಾರ್ಯಕ್ರಮದಲ್ಲಿ ದೇಶದ ೭೪೪ ಜಿಲ್ಲೆಗಳಲ್ಲಿ ಕರ್ನಾಟಕದ ೩೧ ಜಿಲ್ಲೆಗಳು ಸೇರಿವೆ ಎಂದರು.
ಪ್ರಮುಖ ಪ್ರವಾಸಿ ಸ್ಥಳಗಳು, ಧಾರ್ಮಿಕ ಕೇಂದ್ರಗಳು, ಇತರೆ ಕಡೆ ಮುಖ್ಯ ಹೆದ್ದಾರಿಗಳಲ್ಲಿನ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತದೆ. ಗ್ರಾಮ ಮಟ್ಟದಲ್ಲಿ ಗ್ರಾಮಪಂಚಾಯಿತಿ ಹಾಗೂ ನಗರ ಪ್ರದೇಶದಲ್ಲಿ ನಗರಾಭಿವೃದ್ಧಿ ಕೋಶ ತ್ಯಾಜ್ಯಸಂಗ್ರಹಣೆಯ ಉಸ್ತುವಾರಿ ವಹಿಸಲಿವೆ ಎಂದರು.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

4 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

5 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

6 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

11 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

18 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

18 hours ago