ಚಾಮರಾಜನಗರ: ಡಿ.೧೨ ರಂದು ಹಮ್ಮಿಕೊಳ್ಳಲಾಗಿದ್ದ ಮುಖ್ಯಮಂತ್ರಿಗಳಿಂದ ಚಾ.ನಗರ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭವು ಡಿ.13ಕ್ಕೆ ಮುಂದೂಡಿಕೆಯಾಗಿದೆ.
ಗುಜರಾತ್ನಲ್ಲಿ ನಡೆಯಲಿರುವ ನೂತನ ಮುಖ್ಯಮಂತ್ರಿಯ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಳ್ಳುವ ಕಾರಣದಿಂದ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿಯ ಸ್ವಾಗತಕ್ಕಾಗಿ ಜಿಲ್ಲಾಡಳಿತ ಮತ್ತು ಜಿಲ್ಲೆಯ ಬಿಜೆಪಿ ಪಕ್ಷದ ಮುಖಂಡರು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ದಿಢೀರನೆ ಕಾರ್ಯಕ್ರಮವು ೧ ದಿನ ಮುಂದಕ್ಕೆ ಹೋಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ.೧೩ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸುವರು. ನಂತರ ಕೆಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಧ್ಯಾಹ್ನದ ನಂತರ ಬೆಂಗಳೂರಿಗೆ ತೆರಳುವರು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗ ಸುರಿಯುತ್ತಿರುವ ಮಳೆ ಹೀಗೆೆಯೇ ಮುಂದುವರಿದರೆ ಮುಖ್ಯಮಂತ್ರಿಗಳ ಕಾರ್ಯಕ್ರಮವು ನಿಗದಿತ ಕಾರ್ಯಕ್ರಮಕ್ಕೆ ನಡೆಯುವುದು ಅನುಮಾನ. ಮಳೆ ನಿಂತರೆ ಕಾರ್ಯಕ್ರಮ ಜರುಗಲಿದೆ ಎಂದು ಹೇಳಲಾಗುತ್ತಿದೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…