ಚಾಮರಾಜನಗರ: ಡಿ.೧೨ ರಂದು ಹಮ್ಮಿಕೊಳ್ಳಲಾಗಿದ್ದ ಮುಖ್ಯಮಂತ್ರಿಗಳಿಂದ ಚಾ.ನಗರ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭವು ಡಿ.13ಕ್ಕೆ ಮುಂದೂಡಿಕೆಯಾಗಿದೆ.
ಗುಜರಾತ್ನಲ್ಲಿ ನಡೆಯಲಿರುವ ನೂತನ ಮುಖ್ಯಮಂತ್ರಿಯ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಳ್ಳುವ ಕಾರಣದಿಂದ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿಯ ಸ್ವಾಗತಕ್ಕಾಗಿ ಜಿಲ್ಲಾಡಳಿತ ಮತ್ತು ಜಿಲ್ಲೆಯ ಬಿಜೆಪಿ ಪಕ್ಷದ ಮುಖಂಡರು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ದಿಢೀರನೆ ಕಾರ್ಯಕ್ರಮವು ೧ ದಿನ ಮುಂದಕ್ಕೆ ಹೋಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ.೧೩ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸುವರು. ನಂತರ ಕೆಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಧ್ಯಾಹ್ನದ ನಂತರ ಬೆಂಗಳೂರಿಗೆ ತೆರಳುವರು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗ ಸುರಿಯುತ್ತಿರುವ ಮಳೆ ಹೀಗೆೆಯೇ ಮುಂದುವರಿದರೆ ಮುಖ್ಯಮಂತ್ರಿಗಳ ಕಾರ್ಯಕ್ರಮವು ನಿಗದಿತ ಕಾರ್ಯಕ್ರಮಕ್ಕೆ ನಡೆಯುವುದು ಅನುಮಾನ. ಮಳೆ ನಿಂತರೆ ಕಾರ್ಯಕ್ರಮ ಜರುಗಲಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…