ಜಿಲ್ಲೆಗಳು

ಮುಖ್ಯಮಂತ್ರಿಯವರ ಜಿಲ್ಲಾ ಕಾರ್ಯಕ್ರಮ ಯಶಸ್ವಿ: ವಿ.ಸೋಮಣ್ಣ ಕೃತಜ್ಞತೆ

ಚಾಮರಾಜನಗರ: ಮುಖ್ಯಮಂತ್ರಿಯವರ ಚಾಮರಾಜನಗರ ಜಿಲ್ಲಾ ಭೇಟಿ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ಅಭೂತಪೂರ್ವವಾಗಿ ಯಶಸ್ವಿಗೊಳಿಸಿದ ಜಿಲ್ಲಾ ಜನತೆಗೆ ವಸತಿ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿಯವರು ಮಂಗಳವಾರ ಚಾಮರಾಜನಗರ ಮತ್ತು ಹನೂರು ಪಟ್ಟಣದಲ್ಲಿ ಒಂದು ಸಾವಿರ ಕೋಟಿಗೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳ ಉದ್ಛಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟಕ್ಕೂ ಭೇಟಿ ನೀಡಿ ಶ್ರೀಕ್ಷೇತ್ರದ ಅಭಿವೃದ್ಧಿ ಸಂಬಂಧ ಸಭೆ ನಡೆಸಿದ್ದಾರೆ.

ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ನಿರೀಕ್ಷೆಗೂ ಮೀರಿ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಭಾಗವಹಿಸಿ ಬೆಂಬಲ ,ಪ್ರೀತಿ ತೋರಿಸಿದ್ದಾರೆ.

ಈ ಹಿಂದೆ ಕಂಡರಿಯದ ರೀತಿಯಲ್ಲಿ ಜನರು ಮುಖ್ಯಮಂತ್ರಿಯವರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಚಾಮರಾಜನಗರ ಜಿಲ್ಲೆಯ ಭೇಟಿಯನ್ನು ಅವಿಸ್ಮರಣೀಯವಾಗಿಸಿದ್ದಾರೆ.

ಜಿಲ್ಲೆಯ ಜನರು ವ್ಯಕ್ತಪಡಿಸಿದ ಅತೀವ ಉತ್ಸಾಹ, ಪ್ರೀತಿ ಕಂಡು ಮುಖ್ಯಮಂತ್ರಿವರು ಜಿಲ್ಲೆಯ ಜನತೆಯ ಹೃದಯ ಶ್ರೀಮಂತಿಕೆಯ ಗುಣಗಾನ ಮಾಡಿ ಪ್ರಶಂಸಿದ್ದಾರೆ. ನೀವು ಎಷ್ಟು ಬಾರಿ ಕರೆದರೂ ಸಹ ಚಾಮರಾಜನಗರ ಜಿಲ್ಲೆಗೆ ಬರುತ್ತೇನೆ ಎಂದು ಮುಖ್ಯಮಂತ್ರಿಯವರು ಸಮಾರಂಭದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ನುಡಿದಿರುವುದಕ್ಕೆ ನಾವು ನೀವೆಲ್ಲ ಸಾಕ್ಷಿಯಾಗಿದ್ದೇವೆ.

ಕಾರ್ಯಕ್ರಮ ಯಶಸ್ವಿಯಾಗಲು ಜಿಲ್ಲಾ ಜನತೆ ಕೈಜೋಡಿಸಿದ್ದಾರೆ. ಅಲ್ಲದೆ ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್,ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಕಾರ್ಯಕ್ರಮ ಫಲಪ್ರದವಾಗಲು ಅವಿರತವಾಗಿ ಶ್ರಮಿಸಿದ್ದಾರೆ. ಜನಪ್ರತಿನಿಧಿಗಳು ಕೂಡ ಯಶಸ್ವಿಗೆ ಕಾರಣರಾಗಿದ್ದಾರೆ.
ಮುಖ್ಯಮಂತ್ರಿಯವರ ಜಿಲ್ಲಾ ಭೇಟಿಯ ಅಭಿವೃದ್ಧಿ ಕಾರ್ಯಕ್ರಮ ಯಶಸ್ವಿಗೆ ಮುಂದಾದ ಸರ್ವರಿಗೂ ಮನದಾಳದ ಕೃತಜ್ಞತೆ ಸಲ್ಲಿಸುವೆ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಕಂಕಣ ಬದ್ಧನಾಗಿರುವ ನನಗೆ ತಮ್ಮ ಪ್ರೀತಿ ಸಹಕಾರ ಇದೇ ರೀತಿಯಲ್ಲಿ ಮುಂದುವರೆಯಲಿ ಎಂದು ಕೋರುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

7 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

7 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

8 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

8 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

8 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

9 hours ago