ಜಿಲ್ಲೆಗಳು

ಮುಖ್ಯಮಂತ್ರಿಯವರ ಜಿಲ್ಲಾ ಕಾರ್ಯಕ್ರಮ ಯಶಸ್ವಿ: ವಿ.ಸೋಮಣ್ಣ ಕೃತಜ್ಞತೆ

ಚಾಮರಾಜನಗರ: ಮುಖ್ಯಮಂತ್ರಿಯವರ ಚಾಮರಾಜನಗರ ಜಿಲ್ಲಾ ಭೇಟಿ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ಅಭೂತಪೂರ್ವವಾಗಿ ಯಶಸ್ವಿಗೊಳಿಸಿದ ಜಿಲ್ಲಾ ಜನತೆಗೆ ವಸತಿ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿಯವರು ಮಂಗಳವಾರ ಚಾಮರಾಜನಗರ ಮತ್ತು ಹನೂರು ಪಟ್ಟಣದಲ್ಲಿ ಒಂದು ಸಾವಿರ ಕೋಟಿಗೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳ ಉದ್ಛಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟಕ್ಕೂ ಭೇಟಿ ನೀಡಿ ಶ್ರೀಕ್ಷೇತ್ರದ ಅಭಿವೃದ್ಧಿ ಸಂಬಂಧ ಸಭೆ ನಡೆಸಿದ್ದಾರೆ.

ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ನಿರೀಕ್ಷೆಗೂ ಮೀರಿ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಭಾಗವಹಿಸಿ ಬೆಂಬಲ ,ಪ್ರೀತಿ ತೋರಿಸಿದ್ದಾರೆ.

ಈ ಹಿಂದೆ ಕಂಡರಿಯದ ರೀತಿಯಲ್ಲಿ ಜನರು ಮುಖ್ಯಮಂತ್ರಿಯವರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಚಾಮರಾಜನಗರ ಜಿಲ್ಲೆಯ ಭೇಟಿಯನ್ನು ಅವಿಸ್ಮರಣೀಯವಾಗಿಸಿದ್ದಾರೆ.

ಜಿಲ್ಲೆಯ ಜನರು ವ್ಯಕ್ತಪಡಿಸಿದ ಅತೀವ ಉತ್ಸಾಹ, ಪ್ರೀತಿ ಕಂಡು ಮುಖ್ಯಮಂತ್ರಿವರು ಜಿಲ್ಲೆಯ ಜನತೆಯ ಹೃದಯ ಶ್ರೀಮಂತಿಕೆಯ ಗುಣಗಾನ ಮಾಡಿ ಪ್ರಶಂಸಿದ್ದಾರೆ. ನೀವು ಎಷ್ಟು ಬಾರಿ ಕರೆದರೂ ಸಹ ಚಾಮರಾಜನಗರ ಜಿಲ್ಲೆಗೆ ಬರುತ್ತೇನೆ ಎಂದು ಮುಖ್ಯಮಂತ್ರಿಯವರು ಸಮಾರಂಭದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ನುಡಿದಿರುವುದಕ್ಕೆ ನಾವು ನೀವೆಲ್ಲ ಸಾಕ್ಷಿಯಾಗಿದ್ದೇವೆ.

ಕಾರ್ಯಕ್ರಮ ಯಶಸ್ವಿಯಾಗಲು ಜಿಲ್ಲಾ ಜನತೆ ಕೈಜೋಡಿಸಿದ್ದಾರೆ. ಅಲ್ಲದೆ ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್,ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಕಾರ್ಯಕ್ರಮ ಫಲಪ್ರದವಾಗಲು ಅವಿರತವಾಗಿ ಶ್ರಮಿಸಿದ್ದಾರೆ. ಜನಪ್ರತಿನಿಧಿಗಳು ಕೂಡ ಯಶಸ್ವಿಗೆ ಕಾರಣರಾಗಿದ್ದಾರೆ.
ಮುಖ್ಯಮಂತ್ರಿಯವರ ಜಿಲ್ಲಾ ಭೇಟಿಯ ಅಭಿವೃದ್ಧಿ ಕಾರ್ಯಕ್ರಮ ಯಶಸ್ವಿಗೆ ಮುಂದಾದ ಸರ್ವರಿಗೂ ಮನದಾಳದ ಕೃತಜ್ಞತೆ ಸಲ್ಲಿಸುವೆ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಕಂಕಣ ಬದ್ಧನಾಗಿರುವ ನನಗೆ ತಮ್ಮ ಪ್ರೀತಿ ಸಹಕಾರ ಇದೇ ರೀತಿಯಲ್ಲಿ ಮುಂದುವರೆಯಲಿ ಎಂದು ಕೋರುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

40 mins ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

1 hour ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

5 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago