ಜಿಲ್ಲೆಗಳು

ಸಿಎಂ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳಿ : ಆರ್.ಸುಂದರ್ ಮನವಿ

ಚಾಮರಾಜನಗರ: ಡಿ.13 ರಂದು ನಗರ ಮತ್ತು ಹನೂರಿನಲ್ಲಿ ನಡೆಯುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಆಗಮಿಸಬೇಕೆಂದು ಪಕ್ಷದ ಜಿಲ್ಲಾಧ್ಯಕ್ಷ ಆರ್.ಸುಂದರ್ ಮನವಿ ಮಾಡಿದರು.
ಇದೊಂದು ಸರ್ಕಾರಿ ಕಾರ್ಯಕ್ರಮವೇ ಹೊರತು ಬಿಜೆಪಿ ಪಕ್ಷದಲ್ಲ. ವಿವಿಧ ಅಭಿವೃದ್ದಿ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಶಂಕುಸ್ಥಾಪನೆ ನೆರವೇರಿಸುವರು ಮತ್ತು ಉದ್ಘಾಟಿಸುವರು. ಆದ್ದರಿಂದ ಪಕ್ಷಾತೀತವಾಗಿ ಎಲ್ಲರೂ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಜಿಲ್ಲೆಗೆ ಮುಖ್ಯಮಂತ್ರಿ ಅವರನ್ನು ಕರೆತರುವಲ್ಲಿ ಸಚಿವರಾದ ವಿ.ಸೋಮಣ್ಣ ಯಶಸ್ವಿಯಾಗಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ೨ನೇ ಬಾರಿ ಜಿಲ್ಲೆಗೆ ಆಗಮಿಸುತ್ತಿದ್ದು, ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಚಾಲನೆ ನೀಡಲಿದ್ದಾರೆ. ಇವರಿಗೆ ಜಿಲ್ಲೆಯ ಜನತೆ ಗೌರವ ಪೂರ್ವಕವಾಗಿ ಸ್ವಾಗತ ಕೋರಬೇಕು ಎಂದರು.
ಮುಖ್ಯಮಂತ್ರಿ ಚಾಮರಾಜನಗರಕ್ಕೆ ಭೇಟಿ ನೀಡುವುದಿಲ್ಲ ಎಂಬ ಅಪವಾದವನ್ನು ತೊಡೆದು ಹಾಕಲು ಕರೆತರಲಾಗುತ್ತಿದೆ. ಜಿಲ್ಲಾಡಳಿತದ ಜೊತೆ ಪಕ್ಷದ ಮುಖಂಡರು ಮುಖ್ಯಮಂತ್ರಿಗಳ ಕಾರ್ಯಕ್ರಮದ ಯಶಸ್ವಿಗೆ ದುಡಿಯುತ್ತಿದ್ದಾರೆ ಎಂದರು.
೧೫ ರಂದು ಕಚೇರಿ ಉದ್ಘಾಟನೆ: ನಗರದ ಕುಲುಮೆ ರಸ್ತೆಯಲ್ಲಿ ನಿರ್ಮಿಸಿರುವ ಬಿಜೆಪಿ ಕಾರ್ಯಾಲಯವನ್ನು ಪಕ್ಷದ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ವರ್ಚುಯಲ್ ಕಾರ್ಯಕ್ರಮದ ಮೂಲಕ ಉದ್ಘಾಟಿಸುವರು. ೧೨ ಜಿಲ್ಲಾ ಬಿಜೆಪಿ ಕಾರ್ಯಾಲಯಗಳ ಉದ್ಘಾಟನೆಯಲ್ಲಿ ಚಾಮರಾಜನಗರವೂ ಒಂದಾಗಿದೆ ಎಂದು ತಿಳಿಸಿದರು.
ಸ್ಥಳೀಯರಿಗೆ ಆದ್ಯತೆ: ಚಾ.ನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸಲು ಸ್ಥಳೀಯರಿಗೆ ಟಿಕೆಟ್ ನೀಡುವ ಕುರಿತು ಪಕ್ಷದ ವರಿಷ್ಠರ ಮಟ್ಟದಲ್ಲಿ ಚರ್ಚೆಯಾಗಿದೆ. ಕ್ಷೇತ್ರದಲ್ಲಿ ನಡೆಯುವ ಪಕ್ಷದ ಎಲ್ಲ ಬೆಳವಣಿಗೆಗಳ ಕುರಿತು ವರಿಷ್ಠರ ಗಮನಕ್ಕೆ ತಂದು ಚರ್ಚಿಸಲಾಗಿದೆ. ಸ್ಥಳೀಯರಿಗೆ ಆದ್ಯತೆ ನೀಡಲು ಚಿಂತನೆ ನಡೆಸಿದ್ದಾರೆ ಎಂದರು.
ಗೋಷ್ಠಿಯಲ್ಲಿ ಬಿಜೆಪಿ ಉಪಾಧ್ಯಕ್ಷ ವೃಷಬೇಂದ್ರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಗಲ ಶಿವಕುಮಾರ್, ಜಿಲ್ಲಾ ವಕ್ತಾರ ಅಯ್ಯನಪುರ ಶಿವಕುಮಾರ್, ಜಿಪಂ ಮಾಜಿ ಸದಸ್ಯ ಆರ್.ಬಾಲರಾಜ್, ಮುಖಂಡರಾದ ನಾರಾಯಣಪ್ರಸಾದ್, ಮಂಜುನಾಥ್ ಹಾಜರಿದ್ದರು.

andolanait

Recent Posts

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

2 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

3 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

4 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

8 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

8 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

8 hours ago