ಜಿಲ್ಲೆಗಳು

ಸಿಎಂ ಭೇಟಿ ಹಿನ್ನೆಲೆ ಸಚಿವರಿಂದ ಸ್ಥಳ ಪರಿಶೀಲನೆ

ಹನೂರು: ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಡಿ.12ರಂದು ವಿವಿಧ ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಲೋಕಾರ್ಪಣೆಗೊಳಸಿಲಿದ್ದು ಈ ಸಂಬಂಧ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಭೇಟಿ ನೀಡಿ ಪರಿಶೀಲಿಸಿದರು.
ತಾಲ್ಲೂಕಿನ ಬಹುನಿರೀಕ್ಷಿತ 198 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೊದಲ ಹಂತದಲ್ಲಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 98 ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಿದ್ದಾರೆ. ಹನೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಬಾಲಕಿಯರ ವಸತಿ ನಿಲಯ, ಇಂದಿರಾ ಗಾಂಧಿ ವಸತಿ ಶಾಲೆ ಹಾಗೂ ಗುಂಪು ಮನೆ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಹಕ್ಕುಪತ್ರ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

ಶನಿವಾರ ಸಂಜೆ ಅಧಿಕಾರಿಗಳೊಂದಿಗೆ ಮಹದೇಶ್ವರ ಕ್ರೀಡಾಂಗಣಕ್ಕೆ ಬೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ರಾಜ್ಯದ ಮುಖ್ಯಮಂತ್ರಿಗಳು ತಾಲ್ಲೂಕು ಕೇಂದ್ರಕ್ಕೆ ಆಗಮಿಸುವುದರಿಂದ ಯಾವುದೇ ಕೊರತೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಕೆಶಿಫ್ ಯೋಜನೆಯಡಿ ನಿರ್ಮಾಣವಾಗುತ್ತಿರುವ ರಸ್ತೆ ಹೊರತುಪಡಿಸಿ ಉಳಿದ ಕಡೆ ರಸ್ತೆಗಳಲ್ಲಿ ಉಂಟಾಗಿರುವಗುಂಡಿಗಳನ್ನು ಮುಚ್ಚಿಸಿಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಚಿವರ ಗಮನಸೆಳೆದ ಕ್ರೀಡಾಪಟುಗಳು : ಸುಸಜ್ಜಿತ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಬೇಕು, ವಾಯು ವಿಹಾರಿಗಳಿಗೆ ವಿದ್ಯುತ್ ಸೌಲಭ್ಯ ಇಲ್ಲದೆ ಇರುವುದರಿಂದ ತೀವ್ರ ತೊಂದರೆಯಾಗುತ್ತಿದೆ, ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ರೀಡಾ ಸಾಮಗ್ರಿಗಳನ್ನು ನೀಡುವಂತೆ ಸಚಿವರಿಗೆ ಮನವಿ ಮಾಡಿದರು. ಸಚಿವ ವಿ ಸೋಮಣ್ಣ ಪ್ರತಿಕ್ರಿಯಿಸಿ ಇ ಇ ವಿನಯ್ ಕುಮಾರ್ ಅವರಿಗೆ ನಾಳೆಯೇ ಐದು ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಸೂಚನೆ ನೀಡಿ, ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯ ಕ್ರಮವಹಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಿ.ಎಸ್ ರಮೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ ಗಾಯತ್ರಿ,ಇ ಇ ವಿನಯ್ ಕುಮಾರ್,ಉಪ ವಿಭಾಗಾಧಿಕಾರಿ ಗೀತಾ ಹುಡೇದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಸುಂದರ್ ರಾಜ್ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ. ದತ್ತೇಶ್ ಕುಮಾರ್, ಬಿಜೆಪಿ ಮುಖಂಡ ನಿಶಾಂತ್,ತಹಸಿಲ್ದಾರ್ ಆನಂದಯ್ಯ ಇ ಒ ಶ್ರೀನಿವಾಸ್ ಸಿ ಒ ಮೂರ್ತಿ ಇದ್ದರು.

andolanait

Recent Posts

ವೋಟ್‌ ಚೋರಿ | ಸತ್ಯದ ಬೆನ್ನಿಗೆ ನಿಂತು ಮೋದಿ, ಶಾ, ಆರ್‌ಎಸ್‌ಎಸ್‌ ಅನ್ನು ಖಾಲಿ ಮಾಡಿಸುತ್ತೇವೆ : ಕಾಂಗ್ರೆಸ್‌ ಶಪಥ

ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…

10 mins ago

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…

1 hour ago

ಆಯ್ತಪ್ಪ ನಾಳೆ ʻಗ್ಯಾರಂಟಿʼ ನಿಲ್ಲಿಸಿತ್ತೀವಿ ಬಿಡಿ : ಪರಮೇಶ್ವರ್‌ ಹೀಗೆ ಹೇಳಿದ್ಯಾಕೆ?

ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…

1 hour ago

ಇಂದಿರಾಗಾಂಧಿ ತ್ಯಾಗದ ಮುಂದೆ ನಮ್ಮದೇನು ಇಲ್ಲ : ಖರ್ಗೆ ಭಾವುಕ ನುಡಿ

ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್‌ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್‌ ಮಾಡಿ ಬಹಳ…

1 hour ago

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ; ಸಾರ್ವಜನಿಕರಲ್ಲಿ ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ!

ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…

2 hours ago

ಶಿವಾಜಿ ಮುಸ್ಲಿಂರ ವಿರೋಧಿಯಾಗಿರಲಿಲ್ಲ :ಸಚಿವ ಕಾರ್ಮಿಕ ಸಂತೋಷ ಲಾಡ್‌

ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ‌ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…

2 hours ago