ಹನೂರು: ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಡಿ.12ರಂದು ವಿವಿಧ ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಲೋಕಾರ್ಪಣೆಗೊಳಸಿಲಿದ್ದು ಈ ಸಂಬಂಧ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಭೇಟಿ ನೀಡಿ ಪರಿಶೀಲಿಸಿದರು.
ಸಚಿವರ ಗಮನಸೆಳೆದ ಕ್ರೀಡಾಪಟುಗಳು : ಸುಸಜ್ಜಿತ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಬೇಕು, ವಾಯು ವಿಹಾರಿಗಳಿಗೆ ವಿದ್ಯುತ್ ಸೌಲಭ್ಯ ಇಲ್ಲದೆ ಇರುವುದರಿಂದ ತೀವ್ರ ತೊಂದರೆಯಾಗುತ್ತಿದೆ, ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ರೀಡಾ ಸಾಮಗ್ರಿಗಳನ್ನು ನೀಡುವಂತೆ ಸಚಿವರಿಗೆ ಮನವಿ ಮಾಡಿದರು. ಸಚಿವ ವಿ ಸೋಮಣ್ಣ ಪ್ರತಿಕ್ರಿಯಿಸಿ ಇ ಇ ವಿನಯ್ ಕುಮಾರ್ ಅವರಿಗೆ ನಾಳೆಯೇ ಐದು ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಸೂಚನೆ ನೀಡಿ, ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯ ಕ್ರಮವಹಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಿ.ಎಸ್ ರಮೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ ಗಾಯತ್ರಿ,ಇ ಇ ವಿನಯ್ ಕುಮಾರ್,ಉಪ ವಿಭಾಗಾಧಿಕಾರಿ ಗೀತಾ ಹುಡೇದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಸುಂದರ್ ರಾಜ್ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ. ದತ್ತೇಶ್ ಕುಮಾರ್, ಬಿಜೆಪಿ ಮುಖಂಡ ನಿಶಾಂತ್,ತಹಸಿಲ್ದಾರ್ ಆನಂದಯ್ಯ ಇ ಒ ಶ್ರೀನಿವಾಸ್ ಸಿ ಒ ಮೂರ್ತಿ ಇದ್ದರು.
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…