ಜಿಲ್ಲೆಗಳು

ಸಿಎಂ ಆಗಮನ ವೇಳೆ ತರಾತುರಿಯಲ್ಲಿ ಮೆಟ್ಟಿಲಿಂಗ್ ರಸ್ತೆ ನಿರ್ಮಾಣ

ಹನೂರು: ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಕೆಸರಿನಿಂದ ಕೂಡಿದ ರಸ್ತೆಯನ್ನು ಪಿಡಬ್ಯುಡಿ ಇಲಾಖೆಯ ಅಧಿಕಾರಿಗಳು ಸಿಎಂ ಆಗಮಿಸುವ ಒಂದೂವರೆ ಗಂಟೆ ಮುಂಚಿತವಷ್ಟೇ ತರಾತುರಿಯಲ್ಲಿ ಮೆಟ್ಲಿಂಗ್ ರಸ್ತೆಯನ್ನು ನಿರ್ಮಿಸಲಾಯಿತು.

ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಮುಖ್ಯದ್ವಾರದಿಂದ ವೇದಿಕೆಗೆ ತೆರಳುವ ರಸ್ತೆಯು ಕೆಸರಿನಿಂದ ಕೂಡಿತ್ತು. ಈ ಹಿನ್ನಲೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸಮತಟ್ಟು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ದಿಸೆಯಲ್ಲಿ ಜೇಡಿಮಣ್ಣು ಸುರಿದು ಸಮತಟ್ಟು ಮಾಡಲಾಗಿತ್ತು. ಆದರೂ ಕೆಸರುಗದ್ದೆಯಂತಾಗಿತ್ತು. ಇದರಿಂದ ಸಿಎಂ ಅಗಮಿಸುವ ವೇಳೆ ತೊಂದರೆಯಾಗಬಹುದು ಎನ್ನುವ ಉದ್ದೇಶದಿಂದ ಅಧಿಕಾರಿಗಳು ತರಾತುರಿಯಲ್ಲಿ ಮೆಟ್ಲಿಂಗ್ ರಸ್ತೆಯನ್ನು ನಿರ್ಮಿಸಲಾಯಿತು. ಈ ವೇಳೆ ಕ್ರೀಡಾಂಗಣದ ಒಳಾಂಗಣಕ್ಕೆ ಸರ್ಕಾರಿ ವಾಹನಗಳ ಪ್ರವೇಶವನ್ನು ಸ್ಥಗಿತಗೊಳಿಸಲಾಗಿತ್ತು. ಪಿಡಬ್ಯುಡಿ ಎಇಇಗಳಾದ ರಾಜೇಶ್ ಮುನ್ಸಿ, ಸದಾಶಿವಮೂರ್ತಿ ಹಾಗೂ ಚಿನ್ನಣ್ಣ ರಸ್ತೆ ನಿರ್ಮಿಸಲು ಹರಸಾಹಸ ಪಟ್ಟರು. ಸಚಿವರ ಸೂಚನೆಯಂತೆ ವೇದಿಕೆ ಮುಂಭಾಗದ ಎರಡು ಬದಿಯಲ್ಲಿ ಹಾಕಲಾಗಿದ್ದ ಸಾಮಾನ್ಯ ಶಾಮಿಯಾನವನ್ನು ಕಳಚಿ ವಾಟರ್ ಫ್ರೂಪ್ ಶಾಮಿಯನ್ನು ಅಳವಡಿಸಲಾಯಿತು.

andolanait

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

7 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

8 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

9 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

10 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

10 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

10 hours ago