ಮೈಸೂರು: ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನದ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಜಿಲ್ಲಾ ಪತ್ರಕರ್ತರ ಸಂಘದ ನಿಯೋಗ ಬೆಂಗಳೂರಿನ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಮನವಿ ಮಾಡಲಾಯಿತು.
ಮನವಿ ಪುರಸ್ಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ಅತ್ಯುತ್ತಮ ಪತ್ರಿಕಾ ಭವನ ನಿರ್ಮಾಣಕ್ಕೆ ಎಲ್ಲ ರೀತಿಯ ಸಹಕಾರ ನೀಡುವೆ ಎಂದು ಸಕಾರಾತ್ಮಕವಾಗಿ ಸ್ಪಂದಿಸಿದರು.ಪತ್ರಿಕಾ ಭವನದ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಡಿ.21 (ಗುರುವಾರ)ರಂದು ಬೆಳಗ್ಗೆ 11ಗಂಟೆಗೆ ಆಯೋಜಿಸುವಂತೆ ಸೂಚಿಸಿ, ಸಮಾರಂಭದಲ್ಲಿ ತಾವು ಪಾಲ್ಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಇದ್ದರು. ನಿಯೋಗದಲ್ಲಿ ಜಿಲ್ಲಾ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್, ಮಾಜಿ ಅಧ್ಯಕ್ಷ ಸಿ.ಕೆ.ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ, ಗ್ರಾಮಾಂತರ ಉಪಾಧ್ಯಕ್ಷ ಧರ್ಮಾಪುರ ನಾರಾಯಣ್, ರಾಜ್ಯ ಸಮಿತಿ ಸದಸ್ಯ ಬಿ.ರಾಘವೇಂದ್ರ, ಗ್ರಾಮಾಂತರ ಕಾರ್ಯದರ್ಶಿ ಎಂ.ಮಹದೇವ್, ಕಾರ್ಯಕಾರಿ ಸಮಿತಿ ಸದಸ್ಯರಾದ ಹುಲ್ಲಹಳ್ಳಿ ಶ್ರೀನಿವಾಸ್, ಬಿ.ಆರ್.ಗಣೇಶ್, ದಾ.ರಾ.ಮಹೇಶ್ ಹಾಜರಿದ್ದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…