ಜಿಲ್ಲೆಗಳು

ಅರಮನೆ ಫಲಪುಷ್ಪ ಪ್ರದರ್ಶನಕ್ಕೆ ಸಿ.ಎಂ ಸಿದ್ದರಾಮಯ್ಯ ಚಾಲನೆ

ಮೈಸೂರು:  ಅರಮನೆ ಮಂಡಳಿ ವತಿಯಿಂದ ಇಂದು ಅರಮನೆ ಆವರಣದಲ್ಲಿ ಅರಮನೆ ಫಲಪುಷ್ಪ ಪ್ರದರ್ಶನ- 2023 ಕಾರ್ಯಕ್ರಮವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನ ನವರು ಉದ್ಘಾಟಿಸಿ, ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿ ಸಂತೋಷ ವ್ಯಕ್ತ ಪಡಿಸಿದರು.

ಪ್ರದರ್ಶನದಲ್ಲಿ ಜಿಲ್ಲೆಯ ಪ್ರಮುಖ ಆಕರ್ಷಕ ಕೇಂದ್ರಗಳಾದ ಸೋಮನಾಥೇಶ್ವರ ದೇವಾಲಯ, ಸಿರಿ ಧಾನ್ಯದಿಂದ ನಿರ್ಮಿಸಿದ ಮಲೆ ಮಹದೇಶ್ವರ ಪ್ರತಿಮೆ, ಹಂಪಿಯ ಕಲ್ಲಿನ ರಥ, ವಿರೂಪಾಕ್ಷ ವಿಗ್ರಹ, ಬ್ರಾಂಡ್ ಮೈಸೂರು ಲೋಗೋ, 8 ಬಾರಿ ಅಂಬಾರಿ ಹೊತ್ತ ಅರ್ಜುನ ಅನೆ ಆಕೃತಿ, ನಾಲ್ವಡಿ ಕೃಷ್ಣ ರಾಜ ಒಡೆಯರ್, ಕೆಂಪ ನಂಜಮ್ಮಣಿ, ಶ್ರಿ ಕಂತ ದತ್ತ ಒಡೆಯರ್, ಮೈಸೂರು ಅರಮನೆ ಮಂಡಳಿ, ಹಾಗೂ ವಿವಿಧ ರೀತಿಯ ಪ್ರಾಣಿಗಳ ಪ್ರತಿಮೆಗಳು ಕಂಡುಬಂದವು.

ಹಣ್ಣುಗಳಿಂದ ಚಿತ್ರಿಸಿದ ಕಲಾಕೃತಿಗಳಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ಕಿತ್ತೂರು ರಾಣಿ ಚೆನ್ನಮ್ಮ, ನಾಲ್ವಡಿ ಕೃಷ್ಣರಾಜ ಒಡೆಯರ್, ರಾಜ್ಯದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯ ಮಂತ್ರಿಗಳಾದ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್ .ಸಿ ಮಹದೇವಪ್ಪ ಆಕೃತಿಗಳು ಜನರ ಮನ ಸೆಳೆದವು.

ವಿವಿಧ ರೀತಿಯ ಕಲಾಕೃತಿಗಳು, ಸ್ಪೈಡರ್ ಮ್ಯಾನ್, ಬ್ಯಾಟ್ ಮ್ಯಾನ್, ಸೂಪರ್ ಮ್ಯಾನ್ ಹೀಗೆ ಮಕ್ಕಳಿಗೆ ಪ್ರಿಯವಾಗಿರುವ ಹೂಗಳಿಂದ ಅಲಂಕೃತಗೊಂಡ ವಿವಿಧ ಕಲಾಕೃತಿಗಳು, ಸೆಲ್ಫಿ ಪಾಯಿಂಟ್, ರಾಜ್ ಕುಮಾರ್, ಕ್ರಿಸ್ ಮಸ್ ಟ್ರೀ ಗಳು ಜನರನ್ನು ಆಕರ್ಷಿಸಿದವು.

ಮೈಸೂರು ಅರಮನೆ ಮಂಡಳಿ ವತಿಯಿಂದ ರಾಜ ಮನೆತನಕ್ಕೆ ಸೇರಿದ ಆಯ್ದ ಹಳೆಯ ಹಾಗೂ ಅಮೂಲ್ಯ ಛಾಯಾ ಚಿತ್ರಗಳು, ನವರಾತ್ರಿ ಸಂದರ್ಭದಲ್ಲಿ ಮನೆಗಳಲ್ಲಿ ಪ್ರದರ್ಶಿಸಿದ ಬೊಂಬೆಗಳು, ನಾಲ್ವಡಿ ಕೃಷ್ಣ ರಾಜ ಒಡೆಯರು ಮತ್ತು ಮೈಸೂರು ಅರಮನೆ ಕುರಿತು ವಿಡಿಯೋ ಪ್ರದರ್ಶನವನ್ನು ಆಯೋಜಿಸಲಾಗಿತ್ತು.

 ಭಾರತ ಸಂವಿಧಾನದ ಪ್ರಸ್ತಾವನೆ: ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಸರ್ವರೂ ಸಮಾನರು ಎಂಬ ಸಂದೇಶವನ್ನು ಸಾರುವ ಸಂವಿಧಾನ ಪೀಠಿಕೆ, ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಸಮಾನತೆ, ಏಕತೆ ಮತ್ತು ಸಮಗ್ರತೆಯನ್ನು ಮೂಡಿಸುವಲ್ಲಿ ಸಂವಿಧಾನದ ಪಾತ್ರ ಮುಖ್ಯ ಎಂಬುದರ ವಿಷಯವನ್ನು ಪ್ರತಿಯೊಬ್ಬ ಸಾರ್ವಜನಿಕರಿಗೂ ತಿಳಿಸಲು ಭಾರತ ಸಂವಿಧಾನದ ಪ್ರಸ್ತಾವನೆಯನ್ನು ನಿರ್ಮಿಸಲಾಗಿತ್ತು.

ಅರಮನೆ ಅನೆಗಳಿಂದ ನಾಲ್ವಡಿ ಕೃಷ್ಣ ರಾಜ ಒಡೆಯರು, ಕೆಂಪ ನಂಜಮ್ಮಣಿ, ಶ್ರಿ ಕಂತ ದತ್ತ ಒಡೆಯರ್ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್ .ಸಿ. ಮಹದೇವಪ್ಪ. ಶಾಸಕರಾದ ಡಿ. ತಿಮ್ಮಯ್ಯ, ಜಿಲ್ಲಾಧಿಕಾರಿಗಳಾದ ಡಾ. ಕೆ. ವಿ ರಾಜೇಂದ್ರ, ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಭಾಗಹಿಸಿದ್ದರು.

andolanait

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

14 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

14 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

14 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

14 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

14 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

15 hours ago