ಜಿಲ್ಲೆಗಳು

ಅರಮನೆ ಫಲಪುಷ್ಪ ಪ್ರದರ್ಶನಕ್ಕೆ ಸಿ.ಎಂ ಸಿದ್ದರಾಮಯ್ಯ ಚಾಲನೆ

ಮೈಸೂರು:  ಅರಮನೆ ಮಂಡಳಿ ವತಿಯಿಂದ ಇಂದು ಅರಮನೆ ಆವರಣದಲ್ಲಿ ಅರಮನೆ ಫಲಪುಷ್ಪ ಪ್ರದರ್ಶನ- 2023 ಕಾರ್ಯಕ್ರಮವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನ ನವರು ಉದ್ಘಾಟಿಸಿ, ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿ ಸಂತೋಷ ವ್ಯಕ್ತ ಪಡಿಸಿದರು.

ಪ್ರದರ್ಶನದಲ್ಲಿ ಜಿಲ್ಲೆಯ ಪ್ರಮುಖ ಆಕರ್ಷಕ ಕೇಂದ್ರಗಳಾದ ಸೋಮನಾಥೇಶ್ವರ ದೇವಾಲಯ, ಸಿರಿ ಧಾನ್ಯದಿಂದ ನಿರ್ಮಿಸಿದ ಮಲೆ ಮಹದೇಶ್ವರ ಪ್ರತಿಮೆ, ಹಂಪಿಯ ಕಲ್ಲಿನ ರಥ, ವಿರೂಪಾಕ್ಷ ವಿಗ್ರಹ, ಬ್ರಾಂಡ್ ಮೈಸೂರು ಲೋಗೋ, 8 ಬಾರಿ ಅಂಬಾರಿ ಹೊತ್ತ ಅರ್ಜುನ ಅನೆ ಆಕೃತಿ, ನಾಲ್ವಡಿ ಕೃಷ್ಣ ರಾಜ ಒಡೆಯರ್, ಕೆಂಪ ನಂಜಮ್ಮಣಿ, ಶ್ರಿ ಕಂತ ದತ್ತ ಒಡೆಯರ್, ಮೈಸೂರು ಅರಮನೆ ಮಂಡಳಿ, ಹಾಗೂ ವಿವಿಧ ರೀತಿಯ ಪ್ರಾಣಿಗಳ ಪ್ರತಿಮೆಗಳು ಕಂಡುಬಂದವು.

ಹಣ್ಣುಗಳಿಂದ ಚಿತ್ರಿಸಿದ ಕಲಾಕೃತಿಗಳಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ಕಿತ್ತೂರು ರಾಣಿ ಚೆನ್ನಮ್ಮ, ನಾಲ್ವಡಿ ಕೃಷ್ಣರಾಜ ಒಡೆಯರ್, ರಾಜ್ಯದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯ ಮಂತ್ರಿಗಳಾದ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್ .ಸಿ ಮಹದೇವಪ್ಪ ಆಕೃತಿಗಳು ಜನರ ಮನ ಸೆಳೆದವು.

ವಿವಿಧ ರೀತಿಯ ಕಲಾಕೃತಿಗಳು, ಸ್ಪೈಡರ್ ಮ್ಯಾನ್, ಬ್ಯಾಟ್ ಮ್ಯಾನ್, ಸೂಪರ್ ಮ್ಯಾನ್ ಹೀಗೆ ಮಕ್ಕಳಿಗೆ ಪ್ರಿಯವಾಗಿರುವ ಹೂಗಳಿಂದ ಅಲಂಕೃತಗೊಂಡ ವಿವಿಧ ಕಲಾಕೃತಿಗಳು, ಸೆಲ್ಫಿ ಪಾಯಿಂಟ್, ರಾಜ್ ಕುಮಾರ್, ಕ್ರಿಸ್ ಮಸ್ ಟ್ರೀ ಗಳು ಜನರನ್ನು ಆಕರ್ಷಿಸಿದವು.

ಮೈಸೂರು ಅರಮನೆ ಮಂಡಳಿ ವತಿಯಿಂದ ರಾಜ ಮನೆತನಕ್ಕೆ ಸೇರಿದ ಆಯ್ದ ಹಳೆಯ ಹಾಗೂ ಅಮೂಲ್ಯ ಛಾಯಾ ಚಿತ್ರಗಳು, ನವರಾತ್ರಿ ಸಂದರ್ಭದಲ್ಲಿ ಮನೆಗಳಲ್ಲಿ ಪ್ರದರ್ಶಿಸಿದ ಬೊಂಬೆಗಳು, ನಾಲ್ವಡಿ ಕೃಷ್ಣ ರಾಜ ಒಡೆಯರು ಮತ್ತು ಮೈಸೂರು ಅರಮನೆ ಕುರಿತು ವಿಡಿಯೋ ಪ್ರದರ್ಶನವನ್ನು ಆಯೋಜಿಸಲಾಗಿತ್ತು.

 ಭಾರತ ಸಂವಿಧಾನದ ಪ್ರಸ್ತಾವನೆ: ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಸರ್ವರೂ ಸಮಾನರು ಎಂಬ ಸಂದೇಶವನ್ನು ಸಾರುವ ಸಂವಿಧಾನ ಪೀಠಿಕೆ, ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಸಮಾನತೆ, ಏಕತೆ ಮತ್ತು ಸಮಗ್ರತೆಯನ್ನು ಮೂಡಿಸುವಲ್ಲಿ ಸಂವಿಧಾನದ ಪಾತ್ರ ಮುಖ್ಯ ಎಂಬುದರ ವಿಷಯವನ್ನು ಪ್ರತಿಯೊಬ್ಬ ಸಾರ್ವಜನಿಕರಿಗೂ ತಿಳಿಸಲು ಭಾರತ ಸಂವಿಧಾನದ ಪ್ರಸ್ತಾವನೆಯನ್ನು ನಿರ್ಮಿಸಲಾಗಿತ್ತು.

ಅರಮನೆ ಅನೆಗಳಿಂದ ನಾಲ್ವಡಿ ಕೃಷ್ಣ ರಾಜ ಒಡೆಯರು, ಕೆಂಪ ನಂಜಮ್ಮಣಿ, ಶ್ರಿ ಕಂತ ದತ್ತ ಒಡೆಯರ್ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್ .ಸಿ. ಮಹದೇವಪ್ಪ. ಶಾಸಕರಾದ ಡಿ. ತಿಮ್ಮಯ್ಯ, ಜಿಲ್ಲಾಧಿಕಾರಿಗಳಾದ ಡಾ. ಕೆ. ವಿ ರಾಜೇಂದ್ರ, ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಭಾಗಹಿಸಿದ್ದರು.

andolanait

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

1 hour ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

3 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

5 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

6 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

9 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

9 hours ago