ಜಿಲ್ಲೆಗಳು

ನಂಜನಗೂಡಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಾಳೆ ಸಿಎಂ ಚಾಲನೆ

ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರದ ಶಾಸಕ ಬಿ.ಹರ್ಷವರ್ಧನ್ ಮಾಹಿತಿ
ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ(ನ.೨೮) ದಕ್ಷಿಣ ಕಾಶಿ ನಂಜನಗೂಡಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು.
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೧೦.೩೦ಕ್ಕೆ ಶ್ರೀಕಂಠೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಸರ್ಕಾರದಿಂದ ಮಂಜೂರಾಗಿರುವ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಜತೆಗೆ ನುಗು ಮತ್ತು ಹೆಡಿಯಾಲ ಏತ ನೀರಾವರಿ ಯೋಜನೆಗೆ ಚಾಲನೆ, ಗೋಳೂರು(ಗೀಕಹಳ್ಳಿ) ಗ್ರಾಮದಲ್ಲಿ ನಿರ್ಮಾಣ ಮಾಡಲಿರುವ ೬೬/೧೧ ಕೆ.ವಿ. ವಿದ್ಯುತ್ ಉಪಕೇಂದ್ರಕ್ಕೆ ಶಂಕುಸ್ಥಾಪನೆ, ನಗರೋತ್ಥಾನ ಹಂತ-೪ರಲ್ಲಿ ನಂಜನಗೂಡು ನಗರಸಭಾ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ನಗರೋತ್ಥಾನ ಹಂತ-೩ರಲ್ಲಿ ಗೌರಿಘಟ್ಟದ ಬೀದಿಯಲ್ಲಿರುವ ನಾಯಕ ಸಮುದಾಯ ಭವನ ಉದ್ಘಾಟನೆ, ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿಯವರೊಂದಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಚಿವರಾದ ಗೋವಿಂದ ಎಂ.ಕಾರಜೋಳ, ಬಿ.ಶ್ರೀರಾಮುಲು, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಎಂಟಿಬಿ ನಾಗರಾಜ್, ವಿ.ಸುನಿಲ್ ಕುಮಾರ್ ಭಾಗವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶೇಷ ಆಹ್ವಾನಿತರಾಗಿದ್ದಾರೆ. ಸಂಸದರಾದ ವಿ.ಶ್ರೀನಿವಾಸ ಪ್ರಸಾದ್, ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಯಾರೇ ಎದುರಾಳಿಗಳಾದರೂ ಎದುರಿಸುತ್ತೇನೆ: ಹರ್ಷವರ್ಧನ್
ಮೈಸೂರು: ಮುಂದಿನ ಚುನಾವಣೆಯಲ್ಲಿ ನನಗೆ ಯಾರು ಎದುರಾಳಿಗಳಾಗುತ್ತಾರೆ ಎಂಬುದರ ಬಗ್ಗೆ ನಾನು ತಲೆ ಕೆಡಿಸಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಏನಾಗುತ್ತದೆಯೋ ಗೊತ್ತಿಲ್ಲ. ನನ್ನ ಹಣೆಬರಹದಲ್ಲಿ ಏನು ಬರೆದಿದೆಯೋ ಅದೇ ಆಗುತ್ತದೆ. ಆದರೆ, ಯಾರೇ ಎದುರಾಳಿಗಳಾದರೂ ಎದುರಿಸುತ್ತೇನೆ ಎಂದು ಶಾಸಕ ಬಿ.ಹರ್ಷವರ್ಧನ್ ಹೇಳಿದರು.
ನಾನು ಯಾವುದೇ ದಲ್ಲಾಳಿಗಳನ್ನು ಮುಂದಿಟ್ಟುಕೊಂಡು ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿಗೆ ಮುಂದಾಗಿಲ್ಲ. ಈ ರೀತಿ ನನ್ನ ಮೇಲೆ ಮಾಡುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ. ನನ್ನ ಹೆಸರು ಕೆಡಿಸಲು ಕೆಲವರು ಈ ರೀತಿಯ ಕುತಂತ್ರ ಮಾಡುತ್ತಿದ್ದಾರೆ ಎಂದರು.
ರಾಜಕೀಯ ಗಿಮಿಕ್: ರಾಹುಲ್ ಗಾಂಧಿ ನಡೆಸಿದ ಭಾರತ್ ಜೋಡೊ ಯಾತ್ರೆ ಪೂರ್ವನಿಯೋಜಿತವಾದುದು. ಭಾರತ್ ಜೋಡೊ ಯಾತ್ರೆಗೆ ಅಷ್ಟೊಂದು ಜನರನ್ನು ಎಲ್ಲಿಂದ, ಯಾವ ರೀತಿ ಕರೆ ತಂದರೆಂಬುದು ನಮಗೆ ಗೊತ್ತಿದೆ. ಇಷ್ಟು ವರ್ಷಗಳ ಕಾಲ ಗಾಂಧಿ ಹೆಸರನ್ನು ಕಾಂಗ್ರೆಸ್‌ನವರು ದುರುಪಯೋಗ ಮಾಡಿಕೊಂಡಿದ್ದಾರೆ. ಈಗ ಏಕೆ ನಂಜನಗೂಡಿನ ಬದನವಾಳುಗೆ ರಾಹುಲ್ ಗಾಂಧಿ ಭೇಟಿ ನೀಡಿದ್ದರು? ಇದು ಕೇವಲ ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ನಡೆದಿರುವ ಗಿಮಿಕ್ ಎಂದು ಅಸಮಾಧಾನ ವ್ಯಕ್ತಪಡಿಸಿದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago