ಜಿಲ್ಲೆಗಳು

ನಂಜನಗೂಡಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಾಳೆ ಸಿಎಂ ಚಾಲನೆ

ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರದ ಶಾಸಕ ಬಿ.ಹರ್ಷವರ್ಧನ್ ಮಾಹಿತಿ
ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ(ನ.೨೮) ದಕ್ಷಿಣ ಕಾಶಿ ನಂಜನಗೂಡಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು.
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೧೦.೩೦ಕ್ಕೆ ಶ್ರೀಕಂಠೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಸರ್ಕಾರದಿಂದ ಮಂಜೂರಾಗಿರುವ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಜತೆಗೆ ನುಗು ಮತ್ತು ಹೆಡಿಯಾಲ ಏತ ನೀರಾವರಿ ಯೋಜನೆಗೆ ಚಾಲನೆ, ಗೋಳೂರು(ಗೀಕಹಳ್ಳಿ) ಗ್ರಾಮದಲ್ಲಿ ನಿರ್ಮಾಣ ಮಾಡಲಿರುವ ೬೬/೧೧ ಕೆ.ವಿ. ವಿದ್ಯುತ್ ಉಪಕೇಂದ್ರಕ್ಕೆ ಶಂಕುಸ್ಥಾಪನೆ, ನಗರೋತ್ಥಾನ ಹಂತ-೪ರಲ್ಲಿ ನಂಜನಗೂಡು ನಗರಸಭಾ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ನಗರೋತ್ಥಾನ ಹಂತ-೩ರಲ್ಲಿ ಗೌರಿಘಟ್ಟದ ಬೀದಿಯಲ್ಲಿರುವ ನಾಯಕ ಸಮುದಾಯ ಭವನ ಉದ್ಘಾಟನೆ, ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿಯವರೊಂದಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಚಿವರಾದ ಗೋವಿಂದ ಎಂ.ಕಾರಜೋಳ, ಬಿ.ಶ್ರೀರಾಮುಲು, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಎಂಟಿಬಿ ನಾಗರಾಜ್, ವಿ.ಸುನಿಲ್ ಕುಮಾರ್ ಭಾಗವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶೇಷ ಆಹ್ವಾನಿತರಾಗಿದ್ದಾರೆ. ಸಂಸದರಾದ ವಿ.ಶ್ರೀನಿವಾಸ ಪ್ರಸಾದ್, ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಯಾರೇ ಎದುರಾಳಿಗಳಾದರೂ ಎದುರಿಸುತ್ತೇನೆ: ಹರ್ಷವರ್ಧನ್
ಮೈಸೂರು: ಮುಂದಿನ ಚುನಾವಣೆಯಲ್ಲಿ ನನಗೆ ಯಾರು ಎದುರಾಳಿಗಳಾಗುತ್ತಾರೆ ಎಂಬುದರ ಬಗ್ಗೆ ನಾನು ತಲೆ ಕೆಡಿಸಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಏನಾಗುತ್ತದೆಯೋ ಗೊತ್ತಿಲ್ಲ. ನನ್ನ ಹಣೆಬರಹದಲ್ಲಿ ಏನು ಬರೆದಿದೆಯೋ ಅದೇ ಆಗುತ್ತದೆ. ಆದರೆ, ಯಾರೇ ಎದುರಾಳಿಗಳಾದರೂ ಎದುರಿಸುತ್ತೇನೆ ಎಂದು ಶಾಸಕ ಬಿ.ಹರ್ಷವರ್ಧನ್ ಹೇಳಿದರು.
ನಾನು ಯಾವುದೇ ದಲ್ಲಾಳಿಗಳನ್ನು ಮುಂದಿಟ್ಟುಕೊಂಡು ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿಗೆ ಮುಂದಾಗಿಲ್ಲ. ಈ ರೀತಿ ನನ್ನ ಮೇಲೆ ಮಾಡುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ. ನನ್ನ ಹೆಸರು ಕೆಡಿಸಲು ಕೆಲವರು ಈ ರೀತಿಯ ಕುತಂತ್ರ ಮಾಡುತ್ತಿದ್ದಾರೆ ಎಂದರು.
ರಾಜಕೀಯ ಗಿಮಿಕ್: ರಾಹುಲ್ ಗಾಂಧಿ ನಡೆಸಿದ ಭಾರತ್ ಜೋಡೊ ಯಾತ್ರೆ ಪೂರ್ವನಿಯೋಜಿತವಾದುದು. ಭಾರತ್ ಜೋಡೊ ಯಾತ್ರೆಗೆ ಅಷ್ಟೊಂದು ಜನರನ್ನು ಎಲ್ಲಿಂದ, ಯಾವ ರೀತಿ ಕರೆ ತಂದರೆಂಬುದು ನಮಗೆ ಗೊತ್ತಿದೆ. ಇಷ್ಟು ವರ್ಷಗಳ ಕಾಲ ಗಾಂಧಿ ಹೆಸರನ್ನು ಕಾಂಗ್ರೆಸ್‌ನವರು ದುರುಪಯೋಗ ಮಾಡಿಕೊಂಡಿದ್ದಾರೆ. ಈಗ ಏಕೆ ನಂಜನಗೂಡಿನ ಬದನವಾಳುಗೆ ರಾಹುಲ್ ಗಾಂಧಿ ಭೇಟಿ ನೀಡಿದ್ದರು? ಇದು ಕೇವಲ ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ನಡೆದಿರುವ ಗಿಮಿಕ್ ಎಂದು ಅಸಮಾಧಾನ ವ್ಯಕ್ತಪಡಿಸಿದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

34 mins ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago