ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರದ ಶಾಸಕ ಬಿ.ಹರ್ಷವರ್ಧನ್ ಮಾಹಿತಿ
ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ(ನ.೨೮) ದಕ್ಷಿಣ ಕಾಶಿ ನಂಜನಗೂಡಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು.
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೧೦.೩೦ಕ್ಕೆ ಶ್ರೀಕಂಠೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಸರ್ಕಾರದಿಂದ ಮಂಜೂರಾಗಿರುವ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಜತೆಗೆ ನುಗು ಮತ್ತು ಹೆಡಿಯಾಲ ಏತ ನೀರಾವರಿ ಯೋಜನೆಗೆ ಚಾಲನೆ, ಗೋಳೂರು(ಗೀಕಹಳ್ಳಿ) ಗ್ರಾಮದಲ್ಲಿ ನಿರ್ಮಾಣ ಮಾಡಲಿರುವ ೬೬/೧೧ ಕೆ.ವಿ. ವಿದ್ಯುತ್ ಉಪಕೇಂದ್ರಕ್ಕೆ ಶಂಕುಸ್ಥಾಪನೆ, ನಗರೋತ್ಥಾನ ಹಂತ-೪ರಲ್ಲಿ ನಂಜನಗೂಡು ನಗರಸಭಾ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ನಗರೋತ್ಥಾನ ಹಂತ-೩ರಲ್ಲಿ ಗೌರಿಘಟ್ಟದ ಬೀದಿಯಲ್ಲಿರುವ ನಾಯಕ ಸಮುದಾಯ ಭವನ ಉದ್ಘಾಟನೆ, ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿಯವರೊಂದಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಚಿವರಾದ ಗೋವಿಂದ ಎಂ.ಕಾರಜೋಳ, ಬಿ.ಶ್ರೀರಾಮುಲು, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಎಂಟಿಬಿ ನಾಗರಾಜ್, ವಿ.ಸುನಿಲ್ ಕುಮಾರ್ ಭಾಗವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶೇಷ ಆಹ್ವಾನಿತರಾಗಿದ್ದಾರೆ. ಸಂಸದರಾದ ವಿ.ಶ್ರೀನಿವಾಸ ಪ್ರಸಾದ್, ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಯಾರೇ ಎದುರಾಳಿಗಳಾದರೂ ಎದುರಿಸುತ್ತೇನೆ: ಹರ್ಷವರ್ಧನ್
ಮೈಸೂರು: ಮುಂದಿನ ಚುನಾವಣೆಯಲ್ಲಿ ನನಗೆ ಯಾರು ಎದುರಾಳಿಗಳಾಗುತ್ತಾರೆ ಎಂಬುದರ ಬಗ್ಗೆ ನಾನು ತಲೆ ಕೆಡಿಸಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಏನಾಗುತ್ತದೆಯೋ ಗೊತ್ತಿಲ್ಲ. ನನ್ನ ಹಣೆಬರಹದಲ್ಲಿ ಏನು ಬರೆದಿದೆಯೋ ಅದೇ ಆಗುತ್ತದೆ. ಆದರೆ, ಯಾರೇ ಎದುರಾಳಿಗಳಾದರೂ ಎದುರಿಸುತ್ತೇನೆ ಎಂದು ಶಾಸಕ ಬಿ.ಹರ್ಷವರ್ಧನ್ ಹೇಳಿದರು.
ನಾನು ಯಾವುದೇ ದಲ್ಲಾಳಿಗಳನ್ನು ಮುಂದಿಟ್ಟುಕೊಂಡು ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿಗೆ ಮುಂದಾಗಿಲ್ಲ. ಈ ರೀತಿ ನನ್ನ ಮೇಲೆ ಮಾಡುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ. ನನ್ನ ಹೆಸರು ಕೆಡಿಸಲು ಕೆಲವರು ಈ ರೀತಿಯ ಕುತಂತ್ರ ಮಾಡುತ್ತಿದ್ದಾರೆ ಎಂದರು.
ರಾಜಕೀಯ ಗಿಮಿಕ್: ರಾಹುಲ್ ಗಾಂಧಿ ನಡೆಸಿದ ಭಾರತ್ ಜೋಡೊ ಯಾತ್ರೆ ಪೂರ್ವನಿಯೋಜಿತವಾದುದು. ಭಾರತ್ ಜೋಡೊ ಯಾತ್ರೆಗೆ ಅಷ್ಟೊಂದು ಜನರನ್ನು ಎಲ್ಲಿಂದ, ಯಾವ ರೀತಿ ಕರೆ ತಂದರೆಂಬುದು ನಮಗೆ ಗೊತ್ತಿದೆ. ಇಷ್ಟು ವರ್ಷಗಳ ಕಾಲ ಗಾಂಧಿ ಹೆಸರನ್ನು ಕಾಂಗ್ರೆಸ್ನವರು ದುರುಪಯೋಗ ಮಾಡಿಕೊಂಡಿದ್ದಾರೆ. ಈಗ ಏಕೆ ನಂಜನಗೂಡಿನ ಬದನವಾಳುಗೆ ರಾಹುಲ್ ಗಾಂಧಿ ಭೇಟಿ ನೀಡಿದ್ದರು? ಇದು ಕೇವಲ ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ನಡೆದಿರುವ ಗಿಮಿಕ್ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್ಎಸ್ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದಲ್ಲಿ…
ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.…
ನನ್ನ ಮನಸ್ಸಿನಲ್ಲಿ ಆಳವಾಗಿ ಇಳಿದ ಗಾಂಧಿಯವರ ಅಹಿಂಸಾ ಮಾರ್ಗ ಗಾಂಧಿಜಿ ಅವರ ಅಹಿಂಸಾ ಮಾರ್ಗ ಮತ್ತು ಸತ್ಯಾಗ್ರಹ ಚಳವಳಿಗಳು ನನ್ನ…
ಡಾ.ಎಂ.ಡಿ.ಉಮೇಶ ನೆಲ್ಸನ್ ಮಂಡೇಲಾರವರ ಮೇಲೆ ಗಾಂಧೀಜಿ ಅವರು ಆಳವಾದ ಪ್ರಭಾವವನ್ನು ಬೀರಿದ್ದರು. ಮುಖ್ಯವಾಗಿ ಅಹಿಂಸಾತ್ಮಕ ಪ್ರತಿರೋಧ ಮತ್ತು ಸತ್ಯಾಗ್ರಹದ ಮೂಲಕ…
ನಮ್ಮ ತಂದೆ ಪೋರ್ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ…