ಜಿಲ್ಲೆಗಳು

ಆರ್.ಅಶೋಕ್ ಗ್ರಾಮ ವಾಸ್ತವ್ಯ : ಸಾಂಪ್ರದಾಯಿಕ ಕುಣಿತಗಳೊಂದಿಗೆ ಸ್ವಾಗತಿಸಿದ ಗ್ರಾಮಸ್ಥರು

ಎಚ್.ಡಿ.ಕೋಟೆ: ಜಿಲ್ಲಾಧಿಕಾರಿಗಳ ಹಳ್ಳಿಯ ಕಡೆ ಕಾರ್ಯಕ್ರಮ ಮತ್ತು ಗ್ರಾಮ ವಾಸ್ತವ್ಯದ ಅಂಗವಾಗಿ ಎಚ್.ಡಿ.ಕೋಟೆಯ ಭೀಮನಕೊಲ್ಲಿಗೆ ಆಗಮಿಸಿದ್ದ ಕಂದಾಯ ಸಚಿವ ಆರ್.ಅಶೋಕ್ ರವರನ್ನು ತೋಟಗಾರಿಕ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ವತಿಯಿಂದ ಸಾಂಪ್ರದಾಯಿಕ ಕುಣಿತಗಳೊಂದಿಗೆ ಟ್ರಾಕ್ಟರ್ ಮೂಲಕ ಮೆರವಣಿಗೆಯಲ್ಲಿ ವಿಶೇಷವಾಗಿ ಸ್ವಾಗತಿಸಲಾಯಿತು.

ಶನಿವಾರ ತಾಲ್ಲೂಕಿನ ಭೀಮನಕೊಲ್ಲಿಗೆ ಆಗಮಿಸಿದ ಸಚಿವ ಆರ್.ಅಶೋಕ್ ರವರನ್ನು ವಿವಿಧ ಆದಿವಾಸಿ ಸಮುದಾಯಗಳ ಸಾಂಪ್ರದಾಯಿಕ ಕುಣಿತಗಳು, ನಗಾರಿ, ಪೂಜಾ ಕುಣಿತ, ಕರಡಿ ಕುಣಿತ, ಬ್ಯಾಂಡ್ ಸೆಟ್, ಡೊಳ್ಳು ಕುಣಿತ, ನಂದಿ ಕಂಬ ಕುಣಿತ, ವೀರಗಾಸೆ, ಕಳಸದೊಂದಿಗೆ ಮುಂತಾದ ಸಾಂಪ್ರದಾಯಿಕ ಕುಣಿತದೊಂದಿಗೆ ಸಿಂಗರಿಸಿದ ಟ್ರಾಕ್ಟರ್ ಮೂಲಕ ಮೆರವಣಿಗೆಯಲ್ಲಿ ಭೀಮಕೊಲ್ಲಿ ದೇವಸ್ಥಾನದ ಆವರಣಕ್ಕೆ ಬರಮಾಡಿಕೊಳ್ಳಲಾಯಿತು.

ನಂದಿಧ್ವಜಕ್ಕೆ ಪೂಜೆ: ಈ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವ ಆರ್.ಅಶೋಕ್ ರವರು ಶಾಸಕ ಅನಿಲ್ ಚಿಕ್ಕಮಾದು ಹಾಗೂ ವಿವಿಧ ಮುಖಂಡರೊಂದಿಗೆ ಜೊತೆಗೂಡಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ದೇವಾಲಯದ ಆವರಣದಲ್ಲಿ ನಿರ್ಮಿಸಿದ್ದ ಮಳಿಗೆಗಳ ಉದ್ಘಾಟಿನೆ : ಇದೇ ವೇಳೆ ಭೀಮನಕೊಲ್ಲಿ ಮಹದೇಶ್ವರ ದೇವಾಲಯದ ಆವರಣದಲ್ಲಿ ವಿವಿಧ ಇಲಾಖೆಗಳ ವತಿಯಿಂದ ನಿರ್ಮಿಸಲಾಗಿದ್ದ ವಿವಿಧ ವಸ್ತು ಪ್ರದರ್ಶನರ ಮಳಿಗೆಗಳು ಉದ್ಘಾಟಿಸಿ ಬಳಿಕ ಮಳಿಗೆಗಳನ್ನು ಪರಿಶೀಲಿಸಿದರು. ಬಳಿಕ ಎಚ್.ಡಿ.ಕೋಟೆ ಕ್ಷೇತ್ರಕ್ಕೆ ಆಗಮಿಸಿದ ಹಿನ್ನೆಲೆ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಇದೇ ವೇಳೆ ಶಾಸಕ ಅನಿಲ್ ಚಿಕ್ಕಮಾದು, ಮುಖಂಡರಾದ ಕೃಷ್ಣಸ್ವಾಮಿ, ಹಂಚೀಪುರ ಗುರುಸ್ವಾಮಿ, ಗಿರೀಶ್, ಅರುಣ್ ಕುಮಾರ್ ಗೌಡ, ರಾಜೇಂದ್ರ, ಅರಸ್ಸು, ವಿಜಯ್ ಕುಮಾರ್, ರುದ್ರಪ್ಪ, ಗಣೇಶಾಚಾರಿ, ಸತೀಶ್ ಬಹದ್ದೂರ್, ತಹಸೀಲ್ದಾರ್ ಚಲುವರಾಜು, ಅಧಿಕಾರಿಗಳಾದ ಸಣ್ಣರಾಮಪ್ಪ, ರಾಜೇಶ್ ಜೊರಾಲ್ಡ್, ವೃತ್ತ ನಿರೀಕ್ಷಕ ಆನಂದ್ ಮುಂತಾದವರು ಹಾಜರಿದ್ದರು.

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

8 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

8 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

8 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

8 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

9 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago