ಜಿಲ್ಲೆಗಳು

ಆರ್.ಅಶೋಕ್ ಗ್ರಾಮ ವಾಸ್ತವ್ಯ : ಸಾಂಪ್ರದಾಯಿಕ ಕುಣಿತಗಳೊಂದಿಗೆ ಸ್ವಾಗತಿಸಿದ ಗ್ರಾಮಸ್ಥರು

ಎಚ್.ಡಿ.ಕೋಟೆ: ಜಿಲ್ಲಾಧಿಕಾರಿಗಳ ಹಳ್ಳಿಯ ಕಡೆ ಕಾರ್ಯಕ್ರಮ ಮತ್ತು ಗ್ರಾಮ ವಾಸ್ತವ್ಯದ ಅಂಗವಾಗಿ ಎಚ್.ಡಿ.ಕೋಟೆಯ ಭೀಮನಕೊಲ್ಲಿಗೆ ಆಗಮಿಸಿದ್ದ ಕಂದಾಯ ಸಚಿವ ಆರ್.ಅಶೋಕ್ ರವರನ್ನು ತೋಟಗಾರಿಕ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ವತಿಯಿಂದ ಸಾಂಪ್ರದಾಯಿಕ ಕುಣಿತಗಳೊಂದಿಗೆ ಟ್ರಾಕ್ಟರ್ ಮೂಲಕ ಮೆರವಣಿಗೆಯಲ್ಲಿ ವಿಶೇಷವಾಗಿ ಸ್ವಾಗತಿಸಲಾಯಿತು.

ಶನಿವಾರ ತಾಲ್ಲೂಕಿನ ಭೀಮನಕೊಲ್ಲಿಗೆ ಆಗಮಿಸಿದ ಸಚಿವ ಆರ್.ಅಶೋಕ್ ರವರನ್ನು ವಿವಿಧ ಆದಿವಾಸಿ ಸಮುದಾಯಗಳ ಸಾಂಪ್ರದಾಯಿಕ ಕುಣಿತಗಳು, ನಗಾರಿ, ಪೂಜಾ ಕುಣಿತ, ಕರಡಿ ಕುಣಿತ, ಬ್ಯಾಂಡ್ ಸೆಟ್, ಡೊಳ್ಳು ಕುಣಿತ, ನಂದಿ ಕಂಬ ಕುಣಿತ, ವೀರಗಾಸೆ, ಕಳಸದೊಂದಿಗೆ ಮುಂತಾದ ಸಾಂಪ್ರದಾಯಿಕ ಕುಣಿತದೊಂದಿಗೆ ಸಿಂಗರಿಸಿದ ಟ್ರಾಕ್ಟರ್ ಮೂಲಕ ಮೆರವಣಿಗೆಯಲ್ಲಿ ಭೀಮಕೊಲ್ಲಿ ದೇವಸ್ಥಾನದ ಆವರಣಕ್ಕೆ ಬರಮಾಡಿಕೊಳ್ಳಲಾಯಿತು.

ನಂದಿಧ್ವಜಕ್ಕೆ ಪೂಜೆ: ಈ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವ ಆರ್.ಅಶೋಕ್ ರವರು ಶಾಸಕ ಅನಿಲ್ ಚಿಕ್ಕಮಾದು ಹಾಗೂ ವಿವಿಧ ಮುಖಂಡರೊಂದಿಗೆ ಜೊತೆಗೂಡಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ದೇವಾಲಯದ ಆವರಣದಲ್ಲಿ ನಿರ್ಮಿಸಿದ್ದ ಮಳಿಗೆಗಳ ಉದ್ಘಾಟಿನೆ : ಇದೇ ವೇಳೆ ಭೀಮನಕೊಲ್ಲಿ ಮಹದೇಶ್ವರ ದೇವಾಲಯದ ಆವರಣದಲ್ಲಿ ವಿವಿಧ ಇಲಾಖೆಗಳ ವತಿಯಿಂದ ನಿರ್ಮಿಸಲಾಗಿದ್ದ ವಿವಿಧ ವಸ್ತು ಪ್ರದರ್ಶನರ ಮಳಿಗೆಗಳು ಉದ್ಘಾಟಿಸಿ ಬಳಿಕ ಮಳಿಗೆಗಳನ್ನು ಪರಿಶೀಲಿಸಿದರು. ಬಳಿಕ ಎಚ್.ಡಿ.ಕೋಟೆ ಕ್ಷೇತ್ರಕ್ಕೆ ಆಗಮಿಸಿದ ಹಿನ್ನೆಲೆ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಇದೇ ವೇಳೆ ಶಾಸಕ ಅನಿಲ್ ಚಿಕ್ಕಮಾದು, ಮುಖಂಡರಾದ ಕೃಷ್ಣಸ್ವಾಮಿ, ಹಂಚೀಪುರ ಗುರುಸ್ವಾಮಿ, ಗಿರೀಶ್, ಅರುಣ್ ಕುಮಾರ್ ಗೌಡ, ರಾಜೇಂದ್ರ, ಅರಸ್ಸು, ವಿಜಯ್ ಕುಮಾರ್, ರುದ್ರಪ್ಪ, ಗಣೇಶಾಚಾರಿ, ಸತೀಶ್ ಬಹದ್ದೂರ್, ತಹಸೀಲ್ದಾರ್ ಚಲುವರಾಜು, ಅಧಿಕಾರಿಗಳಾದ ಸಣ್ಣರಾಮಪ್ಪ, ರಾಜೇಶ್ ಜೊರಾಲ್ಡ್, ವೃತ್ತ ನಿರೀಕ್ಷಕ ಆನಂದ್ ಮುಂತಾದವರು ಹಾಜರಿದ್ದರು.

andolana

Recent Posts

ಪಡಿತರ ವಿತರಣೆ | ಸಮಯ ಬದಲಾವಣೆ

ನ್ಯಾಯಬೆಲೆ ಅಂಗಡಿಗಳ ಗ್ರಾಹಕರ ಮನವಿಗೆ ಸರ್ಕಾರದ ಸ್ಪಂದನೆ ಅ.1ರಿಂದ ಬೆಳಿಗ್ಗೆ 7ರಿಂದ ಮಧ್ಯಾಹ್ನ 12; ಸಂಜೆ 4ರಿಂದ ರಾತ್ರಿ 8…

2 mins ago

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

10 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

10 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

12 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

17 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

24 hours ago