ಜಿಲ್ಲೆಗಳು

ಕಾಲೇಜು ಕಟ್ಟಡ ಕುಸಿತ: ಕೆಸರೆರಚಾಟ ಶುರು

ಪಾರಂಪರಿಕ ಕಟ್ಟಡಗಳನ್ನು ಕಾಪಾಡಬೇಕೆಂಬುದು ನಾಗರಿಕರ ವಾದ; ಪುನರ್ ನಿರ್ಮಾಣವೊಂದೇ ದಾರಿ ಎಂಬುದು ಅಧಿಕಾರಿಗಳ ಮಾತು

ಮೈಸೂರು: ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿತವಾದ ಬೆನ್ನಲ್ಲೇ ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಕೆಸರೆರಚಾಟ ಶುರುವಾಗಿದೆ.
ಪ್ರವಾಸೋದ್ಯಮದ ದೃಷ್ಟಿಯಿಂದ ಮಹಾರಾಜರ ಆಳ್ವಿಕೆ ಕಾಲದಲ್ಲಿ ನಿರ್ಮಿಸಿರುವ ಪಾರಂಪರಿಕ ಕಟ್ಟಡಗಳನ್ನು ಜತನದಿಂದ ಕಾಪಾಡಿಕೊಳ್ಳಬೇಕು ಎಂಬುದು ರಾಜ ಮನೆತನದವರು ಹಾಗೂ ಮೈಸೂರು ನಾಗರಿಕರ ವಾದವಾಗಿದ್ದರೆ, ‘ಶಿಥಿಲ ಕಟ್ಟಡಗಳನ್ನು ಕಾಪಾಡಿಕೊಳ್ಳುವುದು ಅಸಾಧ್ಯದ ಮಾತು. ಏನಿದ್ದರೂ ಶಿಥಿಲ ಕಟ್ಟಡಗಳನ್ನು ಕೆಡವಿ ಪುನರ್ ನಿರ್ಮಾಣ ಮಾಡುವುದೊಂದೇ ದಾರಿ’ ಎನ್ನುವುದು ಲೋಕೋಪಯೋಗಿ ಇಲಾಖೆ ಆಧಿಕಾರಿಗಳ ವಾದ. ಅಂದಿನ ಕಾಲಕ್ಕೆ ಯಾವುದೇ ಕಟ್ಟಡ ನಿರ್ಮಾಣಕ್ಕೂ ಫಿಲ್ಲರ್‌ಗಳನ್ನು ಹಾಕಿ ಕಾಂಕ್ರೀಟ್ ಬಳಸುತ್ತಿರಲಿಲ್ಲ. ದಪ್ಪನಾದ ಇಟ್ಟಿಗೆ ಗೋಡೆಗೆ ಸುಣ್ಣದ ಗಾರೆ, ಕಲ್ಲುಗಳನ್ನು ಬಳಸಿ ಕಟ್ಟಲಾಗಿದೆ. ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಹೆಚ್ಚು ಮಳೆಯಾದಾಗ ಈ ಕಟ್ಟಡಗಳ ಗೋಡೆಗಳು ನೀರು ಹೀರಿಕೊಂಡು ಶಿಥಿಲಗೊಳ್ಳುತ್ತಿವೆ. ಜತೆಗೆ ಕಟ್ಟಡಗಳ ಅಕ್ಕ ಪಕ್ಕ ಇರುವ ಬೃಹದಾಕಾರದ ಮರಗಳಿಂದ ಉದುರಿರುವ ಎಲೆಗಳ ರಾಶಿ ಜತೆಗೆ ತೇವಾಂಶ ಇದ್ದ ಕಡೆಗಳಲ್ಲೆಲ್ಲ ಗಿಡ-ಗಂಟಿಗಳು ಬೆಳೆದು ಕಟ್ಟಡಗಳು ಶಿಥಿಲಗೊಳ್ಳಲು ಕಾರಣವಾಗಿವೆ ಎನ್ನುತ್ತಾರೆ ಪಾರಂಪರಿಕ ತಜ್ಞ ಪ್ರೊ.ಎನ್.ಎಸ್.ರಂಗರಾಜ್.

ಹೆರಿಟೇಜ್ ಕಮಿಟಿಯತ್ತ ಬೊಟ್ಟು: ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿತ ಪ್ರಕರಣವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರ ಗಮನಕ್ಕೆ ತಂದಿದ್ದು, ದೀಪಾವಳಿ ಹಬ್ಬ ಕಳೆದ ನಂತರ ಸಚಿವರು ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಜತೆಗೆ ಈಗಾಗಲೇ ಲೋಕೋಪಯೋಗಿ ಇಲಾಖೆ ಇಂಜಿನಿಯರುಗಳನ್ನು ಕರೆಸಿ ಸ್ಥಳ ಪರಿಶೀಲನೆ ಮಾಡಿಸಿದ್ದು, ೧೦೬ ವರ್ಷಗಳಷ್ಟು ಹಳೆಯದಾದ ಸಂಪೂರ್ಣ ಶಿಥಿಲವಾಗಿರುವ ಕಾಲೇಜು ಕಟ್ಟಡದ ಪುನರ್ ನಿರ್ಮಾಣ ಸಾಧ್ಯವೇ ಇಲ್ಲ ಎಂದು ಶಾಸಕ ಎಲ್.ನಾಗೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ಲೋಕೋಪಯೋಗಿ ಇಲಾಖೆ ಇಂಜಿನಿಯರುಗಳ ಈ ಅಭಿಪ್ರಾಯದ ಹಿನ್ನೆಲೆಯಲ್ಲಿ ಕುಸಿದು ಬಿದ್ದಿರುವ ಕಾಲೇಜು ಕಟ್ಟಡದ ಅಷ್ಟೂ ಭಾಗವನ್ನೂ ಸಂಪೂರ್ಣ ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಿಸುವ ಸಂಬಂಧ ಅಂದಾಜು ವೆಚ್ಚ ಸಿದ್ಧಪಡಿಸಿ, ವರದಿ ನೀಡುವಂತೆ ಲೋಕೋಪಯೋಗಿ ಇಲಾಖೆ ಇಂಜಿನಿಯರುಗಳಿಗೆ ಸೂಚಿಸಿದ್ದು, ಮೂರ್ನಾಲ್ಕು ದಿನಗಳಲ್ಲಿ ವರದಿ ಕೈಸೇರಲಿದೆ ಎಂದು ತಿಳಿಸಿದರು.


ಮೈಸೂರಿನಲ್ಲಿ ಮಹಾರಾಜರ ಕಾಲದಲ್ಲಿ ಕಟ್ಟಿಸಲಾಗಿರುವ ನೂರಾರು ಕಟ್ಟಡಗಳು ಸೂಕ್ತ ನಿರ್ವಹಣೆ ಇಲ್ಲದೆ ಶಿಥಿಲಗೊಂಡು ಕುಸಿಯುತ್ತಿವೆ. ಈ ಕಟ್ಟಡಗಳ ಸಂರಕ್ಷಣೆಗಾಗಿ ಸರ್ಕಾರ ಕೂಡಲೇ ೫೦೦ ಕೋಟಿ ರೂ. ಹಣ ಬಿಡುಗಡೆ ಮಾಡಬೇಕು. ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳನ್ನೇ ಉಳಿಸಿಕೊಳ್ಳಲಾಗಲಿಲ್ಲವೆಂದರೆ ದಸರಾ ವೇಳೆ ಪ್ರವಾಸಿಗರಿಗೆ ತೋರಿಸಲು ಏನು ಉಳಿಯುತ್ತದೆ.

ಪ್ರೊ.ಎನ್.ಎಸ್.ರಂಗರಾಜು, ಸದಸ್ಯರು, ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ


ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿಯಲ್ಲಿರುವ ನಾಲ್ಕೈದು ಜನರು ಯಾವ ಕೆಲಸವನ್ನೂ ಮಾಡಲು ಬಿಡುತ್ತಿಲ್ಲ. ಈ ಹಿಂದೆೆಯೇ ಕಟ್ಟಡದ ನವೀಕರಣಕ್ಕೆ ೨.೫ ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕ್ರಿಯಾಯೋಜನೆ    ಸಿದ್ಧಪಡಿಸಲಾಗಿತ್ತು. ಭವಿಷ್ಯದ ದೃಷ್ಟಿಯಿಂದ ಇಡೀ ಕಟ್ಟಡವನ್ನು ನೆಲಸಮಗೊಳಿಸಿ ಹೊಸದಾಗಿ ಕಾಲೇಜು ಕಟ್ಟಡ ನಿರ್ಮಿಸಬೇಕಾದ ಅಗತ್ಯತೆ ಇದೆ.

-ಎಲ್.ನಾಗೇಂದ್ರ, ಶಾಸಕರು

andolanait

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

60 mins ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

1 hour ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

2 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

2 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

2 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

2 hours ago