ಜಿಲ್ಲೆಗಳು

ಕಾಲೇಜು ಕಟ್ಟಡ ಕುಸಿತ: ಕೆಸರೆರಚಾಟ ಶುರು

ಪಾರಂಪರಿಕ ಕಟ್ಟಡಗಳನ್ನು ಕಾಪಾಡಬೇಕೆಂಬುದು ನಾಗರಿಕರ ವಾದ; ಪುನರ್ ನಿರ್ಮಾಣವೊಂದೇ ದಾರಿ ಎಂಬುದು ಅಧಿಕಾರಿಗಳ ಮಾತು

ಮೈಸೂರು: ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿತವಾದ ಬೆನ್ನಲ್ಲೇ ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಕೆಸರೆರಚಾಟ ಶುರುವಾಗಿದೆ.
ಪ್ರವಾಸೋದ್ಯಮದ ದೃಷ್ಟಿಯಿಂದ ಮಹಾರಾಜರ ಆಳ್ವಿಕೆ ಕಾಲದಲ್ಲಿ ನಿರ್ಮಿಸಿರುವ ಪಾರಂಪರಿಕ ಕಟ್ಟಡಗಳನ್ನು ಜತನದಿಂದ ಕಾಪಾಡಿಕೊಳ್ಳಬೇಕು ಎಂಬುದು ರಾಜ ಮನೆತನದವರು ಹಾಗೂ ಮೈಸೂರು ನಾಗರಿಕರ ವಾದವಾಗಿದ್ದರೆ, ‘ಶಿಥಿಲ ಕಟ್ಟಡಗಳನ್ನು ಕಾಪಾಡಿಕೊಳ್ಳುವುದು ಅಸಾಧ್ಯದ ಮಾತು. ಏನಿದ್ದರೂ ಶಿಥಿಲ ಕಟ್ಟಡಗಳನ್ನು ಕೆಡವಿ ಪುನರ್ ನಿರ್ಮಾಣ ಮಾಡುವುದೊಂದೇ ದಾರಿ’ ಎನ್ನುವುದು ಲೋಕೋಪಯೋಗಿ ಇಲಾಖೆ ಆಧಿಕಾರಿಗಳ ವಾದ. ಅಂದಿನ ಕಾಲಕ್ಕೆ ಯಾವುದೇ ಕಟ್ಟಡ ನಿರ್ಮಾಣಕ್ಕೂ ಫಿಲ್ಲರ್‌ಗಳನ್ನು ಹಾಕಿ ಕಾಂಕ್ರೀಟ್ ಬಳಸುತ್ತಿರಲಿಲ್ಲ. ದಪ್ಪನಾದ ಇಟ್ಟಿಗೆ ಗೋಡೆಗೆ ಸುಣ್ಣದ ಗಾರೆ, ಕಲ್ಲುಗಳನ್ನು ಬಳಸಿ ಕಟ್ಟಲಾಗಿದೆ. ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಹೆಚ್ಚು ಮಳೆಯಾದಾಗ ಈ ಕಟ್ಟಡಗಳ ಗೋಡೆಗಳು ನೀರು ಹೀರಿಕೊಂಡು ಶಿಥಿಲಗೊಳ್ಳುತ್ತಿವೆ. ಜತೆಗೆ ಕಟ್ಟಡಗಳ ಅಕ್ಕ ಪಕ್ಕ ಇರುವ ಬೃಹದಾಕಾರದ ಮರಗಳಿಂದ ಉದುರಿರುವ ಎಲೆಗಳ ರಾಶಿ ಜತೆಗೆ ತೇವಾಂಶ ಇದ್ದ ಕಡೆಗಳಲ್ಲೆಲ್ಲ ಗಿಡ-ಗಂಟಿಗಳು ಬೆಳೆದು ಕಟ್ಟಡಗಳು ಶಿಥಿಲಗೊಳ್ಳಲು ಕಾರಣವಾಗಿವೆ ಎನ್ನುತ್ತಾರೆ ಪಾರಂಪರಿಕ ತಜ್ಞ ಪ್ರೊ.ಎನ್.ಎಸ್.ರಂಗರಾಜ್.

ಹೆರಿಟೇಜ್ ಕಮಿಟಿಯತ್ತ ಬೊಟ್ಟು: ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿತ ಪ್ರಕರಣವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರ ಗಮನಕ್ಕೆ ತಂದಿದ್ದು, ದೀಪಾವಳಿ ಹಬ್ಬ ಕಳೆದ ನಂತರ ಸಚಿವರು ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಜತೆಗೆ ಈಗಾಗಲೇ ಲೋಕೋಪಯೋಗಿ ಇಲಾಖೆ ಇಂಜಿನಿಯರುಗಳನ್ನು ಕರೆಸಿ ಸ್ಥಳ ಪರಿಶೀಲನೆ ಮಾಡಿಸಿದ್ದು, ೧೦೬ ವರ್ಷಗಳಷ್ಟು ಹಳೆಯದಾದ ಸಂಪೂರ್ಣ ಶಿಥಿಲವಾಗಿರುವ ಕಾಲೇಜು ಕಟ್ಟಡದ ಪುನರ್ ನಿರ್ಮಾಣ ಸಾಧ್ಯವೇ ಇಲ್ಲ ಎಂದು ಶಾಸಕ ಎಲ್.ನಾಗೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ಲೋಕೋಪಯೋಗಿ ಇಲಾಖೆ ಇಂಜಿನಿಯರುಗಳ ಈ ಅಭಿಪ್ರಾಯದ ಹಿನ್ನೆಲೆಯಲ್ಲಿ ಕುಸಿದು ಬಿದ್ದಿರುವ ಕಾಲೇಜು ಕಟ್ಟಡದ ಅಷ್ಟೂ ಭಾಗವನ್ನೂ ಸಂಪೂರ್ಣ ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಿಸುವ ಸಂಬಂಧ ಅಂದಾಜು ವೆಚ್ಚ ಸಿದ್ಧಪಡಿಸಿ, ವರದಿ ನೀಡುವಂತೆ ಲೋಕೋಪಯೋಗಿ ಇಲಾಖೆ ಇಂಜಿನಿಯರುಗಳಿಗೆ ಸೂಚಿಸಿದ್ದು, ಮೂರ್ನಾಲ್ಕು ದಿನಗಳಲ್ಲಿ ವರದಿ ಕೈಸೇರಲಿದೆ ಎಂದು ತಿಳಿಸಿದರು.


ಮೈಸೂರಿನಲ್ಲಿ ಮಹಾರಾಜರ ಕಾಲದಲ್ಲಿ ಕಟ್ಟಿಸಲಾಗಿರುವ ನೂರಾರು ಕಟ್ಟಡಗಳು ಸೂಕ್ತ ನಿರ್ವಹಣೆ ಇಲ್ಲದೆ ಶಿಥಿಲಗೊಂಡು ಕುಸಿಯುತ್ತಿವೆ. ಈ ಕಟ್ಟಡಗಳ ಸಂರಕ್ಷಣೆಗಾಗಿ ಸರ್ಕಾರ ಕೂಡಲೇ ೫೦೦ ಕೋಟಿ ರೂ. ಹಣ ಬಿಡುಗಡೆ ಮಾಡಬೇಕು. ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳನ್ನೇ ಉಳಿಸಿಕೊಳ್ಳಲಾಗಲಿಲ್ಲವೆಂದರೆ ದಸರಾ ವೇಳೆ ಪ್ರವಾಸಿಗರಿಗೆ ತೋರಿಸಲು ಏನು ಉಳಿಯುತ್ತದೆ.

ಪ್ರೊ.ಎನ್.ಎಸ್.ರಂಗರಾಜು, ಸದಸ್ಯರು, ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ


ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿಯಲ್ಲಿರುವ ನಾಲ್ಕೈದು ಜನರು ಯಾವ ಕೆಲಸವನ್ನೂ ಮಾಡಲು ಬಿಡುತ್ತಿಲ್ಲ. ಈ ಹಿಂದೆೆಯೇ ಕಟ್ಟಡದ ನವೀಕರಣಕ್ಕೆ ೨.೫ ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕ್ರಿಯಾಯೋಜನೆ    ಸಿದ್ಧಪಡಿಸಲಾಗಿತ್ತು. ಭವಿಷ್ಯದ ದೃಷ್ಟಿಯಿಂದ ಇಡೀ ಕಟ್ಟಡವನ್ನು ನೆಲಸಮಗೊಳಿಸಿ ಹೊಸದಾಗಿ ಕಾಲೇಜು ಕಟ್ಟಡ ನಿರ್ಮಿಸಬೇಕಾದ ಅಗತ್ಯತೆ ಇದೆ.

-ಎಲ್.ನಾಗೇಂದ್ರ, ಶಾಸಕರು

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago