ಜಿಲ್ಲೆಗಳು

ಕಾಲೇಜು ಕಟ್ಟಡ ಕುಸಿತ: ಕೆಸರೆರಚಾಟ ಶುರು

ಪಾರಂಪರಿಕ ಕಟ್ಟಡಗಳನ್ನು ಕಾಪಾಡಬೇಕೆಂಬುದು ನಾಗರಿಕರ ವಾದ; ಪುನರ್ ನಿರ್ಮಾಣವೊಂದೇ ದಾರಿ ಎಂಬುದು ಅಧಿಕಾರಿಗಳ ಮಾತು

ಮೈಸೂರು: ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿತವಾದ ಬೆನ್ನಲ್ಲೇ ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಕೆಸರೆರಚಾಟ ಶುರುವಾಗಿದೆ.
ಪ್ರವಾಸೋದ್ಯಮದ ದೃಷ್ಟಿಯಿಂದ ಮಹಾರಾಜರ ಆಳ್ವಿಕೆ ಕಾಲದಲ್ಲಿ ನಿರ್ಮಿಸಿರುವ ಪಾರಂಪರಿಕ ಕಟ್ಟಡಗಳನ್ನು ಜತನದಿಂದ ಕಾಪಾಡಿಕೊಳ್ಳಬೇಕು ಎಂಬುದು ರಾಜ ಮನೆತನದವರು ಹಾಗೂ ಮೈಸೂರು ನಾಗರಿಕರ ವಾದವಾಗಿದ್ದರೆ, ‘ಶಿಥಿಲ ಕಟ್ಟಡಗಳನ್ನು ಕಾಪಾಡಿಕೊಳ್ಳುವುದು ಅಸಾಧ್ಯದ ಮಾತು. ಏನಿದ್ದರೂ ಶಿಥಿಲ ಕಟ್ಟಡಗಳನ್ನು ಕೆಡವಿ ಪುನರ್ ನಿರ್ಮಾಣ ಮಾಡುವುದೊಂದೇ ದಾರಿ’ ಎನ್ನುವುದು ಲೋಕೋಪಯೋಗಿ ಇಲಾಖೆ ಆಧಿಕಾರಿಗಳ ವಾದ. ಅಂದಿನ ಕಾಲಕ್ಕೆ ಯಾವುದೇ ಕಟ್ಟಡ ನಿರ್ಮಾಣಕ್ಕೂ ಫಿಲ್ಲರ್‌ಗಳನ್ನು ಹಾಕಿ ಕಾಂಕ್ರೀಟ್ ಬಳಸುತ್ತಿರಲಿಲ್ಲ. ದಪ್ಪನಾದ ಇಟ್ಟಿಗೆ ಗೋಡೆಗೆ ಸುಣ್ಣದ ಗಾರೆ, ಕಲ್ಲುಗಳನ್ನು ಬಳಸಿ ಕಟ್ಟಲಾಗಿದೆ. ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಹೆಚ್ಚು ಮಳೆಯಾದಾಗ ಈ ಕಟ್ಟಡಗಳ ಗೋಡೆಗಳು ನೀರು ಹೀರಿಕೊಂಡು ಶಿಥಿಲಗೊಳ್ಳುತ್ತಿವೆ. ಜತೆಗೆ ಕಟ್ಟಡಗಳ ಅಕ್ಕ ಪಕ್ಕ ಇರುವ ಬೃಹದಾಕಾರದ ಮರಗಳಿಂದ ಉದುರಿರುವ ಎಲೆಗಳ ರಾಶಿ ಜತೆಗೆ ತೇವಾಂಶ ಇದ್ದ ಕಡೆಗಳಲ್ಲೆಲ್ಲ ಗಿಡ-ಗಂಟಿಗಳು ಬೆಳೆದು ಕಟ್ಟಡಗಳು ಶಿಥಿಲಗೊಳ್ಳಲು ಕಾರಣವಾಗಿವೆ ಎನ್ನುತ್ತಾರೆ ಪಾರಂಪರಿಕ ತಜ್ಞ ಪ್ರೊ.ಎನ್.ಎಸ್.ರಂಗರಾಜ್.

ಹೆರಿಟೇಜ್ ಕಮಿಟಿಯತ್ತ ಬೊಟ್ಟು: ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿತ ಪ್ರಕರಣವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರ ಗಮನಕ್ಕೆ ತಂದಿದ್ದು, ದೀಪಾವಳಿ ಹಬ್ಬ ಕಳೆದ ನಂತರ ಸಚಿವರು ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಜತೆಗೆ ಈಗಾಗಲೇ ಲೋಕೋಪಯೋಗಿ ಇಲಾಖೆ ಇಂಜಿನಿಯರುಗಳನ್ನು ಕರೆಸಿ ಸ್ಥಳ ಪರಿಶೀಲನೆ ಮಾಡಿಸಿದ್ದು, ೧೦೬ ವರ್ಷಗಳಷ್ಟು ಹಳೆಯದಾದ ಸಂಪೂರ್ಣ ಶಿಥಿಲವಾಗಿರುವ ಕಾಲೇಜು ಕಟ್ಟಡದ ಪುನರ್ ನಿರ್ಮಾಣ ಸಾಧ್ಯವೇ ಇಲ್ಲ ಎಂದು ಶಾಸಕ ಎಲ್.ನಾಗೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ಲೋಕೋಪಯೋಗಿ ಇಲಾಖೆ ಇಂಜಿನಿಯರುಗಳ ಈ ಅಭಿಪ್ರಾಯದ ಹಿನ್ನೆಲೆಯಲ್ಲಿ ಕುಸಿದು ಬಿದ್ದಿರುವ ಕಾಲೇಜು ಕಟ್ಟಡದ ಅಷ್ಟೂ ಭಾಗವನ್ನೂ ಸಂಪೂರ್ಣ ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಿಸುವ ಸಂಬಂಧ ಅಂದಾಜು ವೆಚ್ಚ ಸಿದ್ಧಪಡಿಸಿ, ವರದಿ ನೀಡುವಂತೆ ಲೋಕೋಪಯೋಗಿ ಇಲಾಖೆ ಇಂಜಿನಿಯರುಗಳಿಗೆ ಸೂಚಿಸಿದ್ದು, ಮೂರ್ನಾಲ್ಕು ದಿನಗಳಲ್ಲಿ ವರದಿ ಕೈಸೇರಲಿದೆ ಎಂದು ತಿಳಿಸಿದರು.


ಮೈಸೂರಿನಲ್ಲಿ ಮಹಾರಾಜರ ಕಾಲದಲ್ಲಿ ಕಟ್ಟಿಸಲಾಗಿರುವ ನೂರಾರು ಕಟ್ಟಡಗಳು ಸೂಕ್ತ ನಿರ್ವಹಣೆ ಇಲ್ಲದೆ ಶಿಥಿಲಗೊಂಡು ಕುಸಿಯುತ್ತಿವೆ. ಈ ಕಟ್ಟಡಗಳ ಸಂರಕ್ಷಣೆಗಾಗಿ ಸರ್ಕಾರ ಕೂಡಲೇ ೫೦೦ ಕೋಟಿ ರೂ. ಹಣ ಬಿಡುಗಡೆ ಮಾಡಬೇಕು. ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳನ್ನೇ ಉಳಿಸಿಕೊಳ್ಳಲಾಗಲಿಲ್ಲವೆಂದರೆ ದಸರಾ ವೇಳೆ ಪ್ರವಾಸಿಗರಿಗೆ ತೋರಿಸಲು ಏನು ಉಳಿಯುತ್ತದೆ.

ಪ್ರೊ.ಎನ್.ಎಸ್.ರಂಗರಾಜು, ಸದಸ್ಯರು, ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ


ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿಯಲ್ಲಿರುವ ನಾಲ್ಕೈದು ಜನರು ಯಾವ ಕೆಲಸವನ್ನೂ ಮಾಡಲು ಬಿಡುತ್ತಿಲ್ಲ. ಈ ಹಿಂದೆೆಯೇ ಕಟ್ಟಡದ ನವೀಕರಣಕ್ಕೆ ೨.೫ ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕ್ರಿಯಾಯೋಜನೆ    ಸಿದ್ಧಪಡಿಸಲಾಗಿತ್ತು. ಭವಿಷ್ಯದ ದೃಷ್ಟಿಯಿಂದ ಇಡೀ ಕಟ್ಟಡವನ್ನು ನೆಲಸಮಗೊಳಿಸಿ ಹೊಸದಾಗಿ ಕಾಲೇಜು ಕಟ್ಟಡ ನಿರ್ಮಿಸಬೇಕಾದ ಅಗತ್ಯತೆ ಇದೆ.

-ಎಲ್.ನಾಗೇಂದ್ರ, ಶಾಸಕರು

andolanait

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

8 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

8 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

8 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

8 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

8 hours ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

8 hours ago