ಜಿಲ್ಲೆಗಳು

ಮೊಬೈಲ್ ಗೀಳಿನಿಂದ ಹೊರಬಂದು ಪುಸ್ತಕ ಪ್ರೀತಿಸಿ :ಪೃಥ್ವಿರಾಜ್‌ ಹಾಲಹಳ್ಳಿ

ಮೈಸೂರು: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಿಯುಸಿ ಹಂತ ಪ್ರಮುಖ ಘಟ್ಟ,ಮನಸ್ಸು ಮರ್ಕಟದ ರೀತಿಯಲ್ಲಿ ವರ್ತಿಸುತ್ತದೆ, ಅದನ್ನ ಬುದ್ದಿಯಿಂದ ಕಟ್ಟಿ ಹಾಕಿ,ಉನ್ನತ ಮಟ್ಟದಲ್ಲಿ ಬೆಳವಣಿಗೆ ಹೊಂದಲು ಇಂತಹ ಕಾರ್ಯಕ್ರಮ ಸಹಾಯ ಮಾಡುತ್ತವೆ,ಮೊಬೈಲ್ ಗೀಳಿನಿಂದ ಹೊರಬಂದು ಪುಸ್ತಕ ಪ್ರೀತಿಸಿ ಎಂದು ಪೃಥ್ವಿರಾಜ್‌ ಹಾಲಹಳ್ಳಿ  ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ನಗರದ ಜೆ ಎಸ್ ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಸ್ವಾಗತ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಅತ್ಯುತ್ತಮ ಸ್ನೇಹಿತ ಅಂದರೆ ಪುಸ್ತಕ ಮಾತ್ರ,ತಾತ್ಕಾಲಿಕ ಜನಪ್ರಿಯತೆ ಇಂದ ಹೊರಬನ್ನಿ,self I reels ಗಳಂತಹ ವಿಚಾರದಿಂದ ಹೊರಬನ್ನಿ,ಸ್ಪರ್ದಾತ್ಮಕ ಜಗತ್ತಿನಲ್ಲಿದ್ದೀರಿ,smart work ಮಾಡಿ,ದುಶ್ಚಟಗಳಿಂದ ದೂರವಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಡಿ ಕೆ ಶ್ರೀನಿವಾಸಮೂರ್ತಿಅವರು ಮಾತನಾಡಿ ಮಕ್ಕಳು ಪ್ರಗತಿ ಕಾಣಬೇಕಾದರೆ ಇಂತಹ ಕಾರ್ಯಕ್ರಮಗಳು ಸಹಾಯಕ,ಸಂಸ್ಥೆಯ ಅನೇಕ ಮೌಲ್ವಿಕ ಕಾರ್ಯಕ್ರಮ ಗಳು ಸಮಾಜಕ್ಕೆ ಪೂರಕವಾಗಿ ಇರುತ್ತವೆ,ಮುಂಬರುವ ಪರೀಕ್ಷೆ ಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಸಮಾಜಕ್ಕೆ ಮಾದರಿಯಾಗಬೇಕು ಎಂದರು,ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂಸ್ಕೃತಿ ಚಿಂತಕರಾದ ಪೃಥ್ವಿರಾಜ್‌ ಹಾಲಹಳ್ಳಿ ಮಾತನಾಡಿ ವ್ಯಕ್ತಿ ದೊಡ್ಡವನಾಗುವುದು ವ್ಯಕ್ತಿತ್ವದಿಂದ,ಶಿಕ್ಷಣ ಮಾತ್ರ ಅದನ್ನು ನಿರ್ಮಾಣ ಮಾಡುತ್ತದೆ,ಸಂಸ್ಕಾರವಂತ ಶಿಕ್ಷಣದ ಮೂಲಕ ನಾಡು ಕಟ್ಟಬಹುದು ಎಂದರು,

ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶಾಂತಮಲ್ಲಪ್ಪ ವಹಿಸಿದ್ದರು,ಗಣಿತ ಉಪನ್ಯಾಸಕರಾದ ಹರೀಶ್ ರವರು,ಮತ್ತು ಇನ್ನಿತರರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು,

 

andolanait

Recent Posts

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ಕೊಟ್ಟಿಲ್ಲ: ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಸಿಎಂ ಬದಲಾವಣೆ…

12 mins ago

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ…

36 mins ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

55 mins ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

1 hour ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

2 hours ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

2 hours ago