ಜಿಲ್ಲೆಗಳು

ಮೊಬೈಲ್ ಗೀಳಿನಿಂದ ಹೊರಬಂದು ಪುಸ್ತಕ ಪ್ರೀತಿಸಿ :ಪೃಥ್ವಿರಾಜ್‌ ಹಾಲಹಳ್ಳಿ

ಮೈಸೂರು: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಿಯುಸಿ ಹಂತ ಪ್ರಮುಖ ಘಟ್ಟ,ಮನಸ್ಸು ಮರ್ಕಟದ ರೀತಿಯಲ್ಲಿ ವರ್ತಿಸುತ್ತದೆ, ಅದನ್ನ ಬುದ್ದಿಯಿಂದ ಕಟ್ಟಿ ಹಾಕಿ,ಉನ್ನತ ಮಟ್ಟದಲ್ಲಿ ಬೆಳವಣಿಗೆ ಹೊಂದಲು ಇಂತಹ ಕಾರ್ಯಕ್ರಮ ಸಹಾಯ ಮಾಡುತ್ತವೆ,ಮೊಬೈಲ್ ಗೀಳಿನಿಂದ ಹೊರಬಂದು ಪುಸ್ತಕ ಪ್ರೀತಿಸಿ ಎಂದು ಪೃಥ್ವಿರಾಜ್‌ ಹಾಲಹಳ್ಳಿ  ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ನಗರದ ಜೆ ಎಸ್ ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಸ್ವಾಗತ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಅತ್ಯುತ್ತಮ ಸ್ನೇಹಿತ ಅಂದರೆ ಪುಸ್ತಕ ಮಾತ್ರ,ತಾತ್ಕಾಲಿಕ ಜನಪ್ರಿಯತೆ ಇಂದ ಹೊರಬನ್ನಿ,self I reels ಗಳಂತಹ ವಿಚಾರದಿಂದ ಹೊರಬನ್ನಿ,ಸ್ಪರ್ದಾತ್ಮಕ ಜಗತ್ತಿನಲ್ಲಿದ್ದೀರಿ,smart work ಮಾಡಿ,ದುಶ್ಚಟಗಳಿಂದ ದೂರವಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಡಿ ಕೆ ಶ್ರೀನಿವಾಸಮೂರ್ತಿಅವರು ಮಾತನಾಡಿ ಮಕ್ಕಳು ಪ್ರಗತಿ ಕಾಣಬೇಕಾದರೆ ಇಂತಹ ಕಾರ್ಯಕ್ರಮಗಳು ಸಹಾಯಕ,ಸಂಸ್ಥೆಯ ಅನೇಕ ಮೌಲ್ವಿಕ ಕಾರ್ಯಕ್ರಮ ಗಳು ಸಮಾಜಕ್ಕೆ ಪೂರಕವಾಗಿ ಇರುತ್ತವೆ,ಮುಂಬರುವ ಪರೀಕ್ಷೆ ಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಸಮಾಜಕ್ಕೆ ಮಾದರಿಯಾಗಬೇಕು ಎಂದರು,ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂಸ್ಕೃತಿ ಚಿಂತಕರಾದ ಪೃಥ್ವಿರಾಜ್‌ ಹಾಲಹಳ್ಳಿ ಮಾತನಾಡಿ ವ್ಯಕ್ತಿ ದೊಡ್ಡವನಾಗುವುದು ವ್ಯಕ್ತಿತ್ವದಿಂದ,ಶಿಕ್ಷಣ ಮಾತ್ರ ಅದನ್ನು ನಿರ್ಮಾಣ ಮಾಡುತ್ತದೆ,ಸಂಸ್ಕಾರವಂತ ಶಿಕ್ಷಣದ ಮೂಲಕ ನಾಡು ಕಟ್ಟಬಹುದು ಎಂದರು,

ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶಾಂತಮಲ್ಲಪ್ಪ ವಹಿಸಿದ್ದರು,ಗಣಿತ ಉಪನ್ಯಾಸಕರಾದ ಹರೀಶ್ ರವರು,ಮತ್ತು ಇನ್ನಿತರರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು,

 

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

4 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

13 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

13 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

13 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

16 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

16 hours ago