ಹನೂರು : ಬಂಡಳ್ಳಿ ಗ್ರಾಮದ ಸೋಲಾರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸ್ಥಳೀಯ ನೌಕರರನ್ನು ವಜಾಗೊಳಿಸಲು ಸಂಚು ನಡೆಸುತ್ತಿರುವುದನ್ನು ಖಂಡಿಸಿ ಕರುನಾಡ ಸೇನೆ ಸದಸ್ಯರುಗಳು ಪ್ರತಿಭಟನೆ ನಡೆಸಿದರು.
ಈ ವೇಳೆ ಕರುನಾಡು ವಿಜಯಸೇನೆ ಜಿಲ್ಲಾಧ್ಯಕ್ಷರಾದ ನವೀನ್ ಕುಮಾರ್ ರವರ ಮಾತನಾಡಿ ನಮ್ಮ ಬಂಡಳ್ಳಿ ಗ್ರಾಮದಲ್ಲಿರುವ ಸೋಲಾರ್ ಕಂಪೆನಿಯಲ್ಲಿ ಮೊದಲಿಗೆ ನಮ್ಮ ಸ್ಥಳೀಯ ನೌಕರರಿಗೆ ಮೊದಲ ಆದ್ಯತೆ ನೀಡಬೇಕು ವಿಶೇಷವಾಗಿ ನಮ್ಮ ಕನ್ನಡ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಆನಂತರದಲ್ಲಿ ಇತರರಿಗೆ ಅವಕಾಶ ಮಾಡಿಕೊಡಬೇಕೆಂದು ಎಂದು ಸೋಲಾರ್ ಮುಖ್ಯಸ್ಥರಲ್ಲಿ ಮನವಿ ಮಾಡಿದರು.
ಸೋಲಾರ್ ಕಂಪನಿಯ ಮುಖ್ಯಸ್ಥರಾದ ಸಂತೋಷ್ ಮಾತನಾಡಿ ಶೇಕಡ 100ರಷ್ಟು ಕೆಲಸವನ್ನು ಸ್ಥಳೀಯ ನೌಕರರಿಗೆ ನೀಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಈ ಸಂದರ್ಭದಲ್ಲಿ ಕರುನಾಡ ವಿಜಯ ಸೇನೆಯ ಚಾಮರಾಜನಗರ ಜಿಲ್ಲಾ ಘಟಕದ ಪದಾಧಿಕಾರಿಗಳಾದ
ವಿನೋದ್ ಕುಮಾರ್ ಎಸ್ ,ಸಂಜಯ್ ಮದನ್ ,ಮನೋಜ್ ಪ್ರಮೋದ್ ಹಾಗೂ ಇನ್ನಿತರರು ಭಾಗವಹಿಸಿದ್ದರು
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…