ಜಿಲ್ಲೆಗಳು

ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಗಾರವನ್ನು ಸದ್ಬಳಕೆ ಮಾಡಿಕೊಳ್ಳಿ : ಎಂ. ಆರ್. ಮಂಜುನಾಥ್

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಿರುದ್ಯೋಗಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಗಾರವನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ ಆರ್ ಮಂಜುನಾಥ್ ತಿಳಿಸಿದರು.

ಪಟ್ಟಣದ ವಾಸವಿ ಮಹಲ್ ಕಲ್ಯಾಣ ಮಂಟಪದಲ್ಲಿ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಎಂಆರ್ ಮಂಜುನಾಥ್ ಮತ್ತು ಎನ್ ಸಿ ಜಿ ಕಾಂಪಿಟೇಟಿವ್ ಇನ್ಸ್ಟಿಟ್ಯೂಟ್ ರವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಕಾರ್ಯಗಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕ್ಷೇತ್ರದಲ್ಲಿನ ನಿರುದ್ಯೋಗಿ ವಿದ್ಯಾವಂತರಿಗೆ ಅನುಕೂಲವಾಗುವ ಉದ್ದೇಶದಿಂದ ಇಂತಹ ಸ್ಪರ್ಧಾತ್ಮಕ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಇದು ಯಾವುದೇ ಸೌಲಭ್ಯಗಳಿಲ್ಲದ ಗುಡ್ಡಗಾಡು ಗ್ರಾಮೀಣ ಯುವಜನತೆಗೆ ಭವಿಷ್ಯ ಕಟ್ಟಿಕೊಡಲು ಸಹಕಾರಿಯಾಗುತ್ತದೆ. ಆದ್ದರಿಂದ ಈ ಕಾರ್ಯಗಾರವನ್ನು ಪ್ರಾಮಾಣಿಕವಾಗಿ ಬಳಸಿಕೊಂಡು ನಿಮ್ಮ ತಂದೆ ತಾಯಿ ಮತ್ತು ಹುಟ್ಟೂರಿಗೆ ಹೆಸರು ಮತ್ತು ಕೀರ್ತಿ ತರುವಂತವರಾಗಿ ಎಂದು ಸಲಹೆ ನೀಡಿದರು. ಆರು ತಿಂಗಳ ಈ ಕಾರ್ಯಗಾರವನ್ನು ಉತ್ತಮವಾಗಿ ಬಳಸಿಕೊಂಡು ಉನ್ನತ ಸ್ಥಾನಕ್ಕೆ ಏರಿ ನಿಮ್ಮ ಕುಟುಂಬ ಮತ್ತು ಗ್ರಾಮಕ್ಕೆ ನಿಮ್ಮದೇ ಕೊಡುಗೆ ನೀಡುವಂತವರಾಗಬೇಕು ಎಂಬುದು ನಮ್ಮ ನಿರೀಕ್ಷೆ, ಈ ಕಾರ್ಯಗಾರದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ಸಾಧಿಸಿ ನಿಮ್ಮ ಗುರಿಯನ್ನು ನೀವು ಮುಟ್ಟಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯೆ ಮುಮ್ತಾಜ್ ಬೇಗಂ, ಮಾಜಿ ಸದಸ್ಯರುಗಳಾದ ಶಿವಪ್ಪ , ನಾಗೇಂದ್ರ ಬಾಬು ವಕೀಲ ಯೋಗೇಶ್, ಎನ್.ಸಿ.ಜಿ.ಮುಖ್ಯಸ್ಥ ಸಿ.ನಾಗಪ್ಪ, ಸಂಪನ್ಮೂಲ ವ್ಯಕ್ತಿಗಳಾದ ಗಿರಿಧರ ಪೂಜಾರಿ, ಸುಶ್ಮಿತಾ, ಹಿರಿಯ ಮುಖಂಡರಾದ ಮುಳ್ಳೂರು ಶಿವಮಲ್ಲು, ಜೆಸ್ಸಿಮ್ ಪಾಷಾ, ಮಂಜೇಶ್,ಯರಂಬಾಡಿ ಮುರುಗೇಶ್ ಗೋವಿಂದ್, ವೆಂಕಟೇಶ್,ಹಾಗೂ ಸ್ಪರ್ಧಾರ್ಥಿಗಳು ಹಾಜರಿದ್ದರು.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

4 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

9 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

9 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

10 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

10 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

11 hours ago