ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಿರುದ್ಯೋಗಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಗಾರವನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ ಆರ್ ಮಂಜುನಾಥ್ ತಿಳಿಸಿದರು.
ಪಟ್ಟಣದ ವಾಸವಿ ಮಹಲ್ ಕಲ್ಯಾಣ ಮಂಟಪದಲ್ಲಿ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಎಂಆರ್ ಮಂಜುನಾಥ್ ಮತ್ತು ಎನ್ ಸಿ ಜಿ ಕಾಂಪಿಟೇಟಿವ್ ಇನ್ಸ್ಟಿಟ್ಯೂಟ್ ರವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಕಾರ್ಯಗಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕ್ಷೇತ್ರದಲ್ಲಿನ ನಿರುದ್ಯೋಗಿ ವಿದ್ಯಾವಂತರಿಗೆ ಅನುಕೂಲವಾಗುವ ಉದ್ದೇಶದಿಂದ ಇಂತಹ ಸ್ಪರ್ಧಾತ್ಮಕ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಇದು ಯಾವುದೇ ಸೌಲಭ್ಯಗಳಿಲ್ಲದ ಗುಡ್ಡಗಾಡು ಗ್ರಾಮೀಣ ಯುವಜನತೆಗೆ ಭವಿಷ್ಯ ಕಟ್ಟಿಕೊಡಲು ಸಹಕಾರಿಯಾಗುತ್ತದೆ. ಆದ್ದರಿಂದ ಈ ಕಾರ್ಯಗಾರವನ್ನು ಪ್ರಾಮಾಣಿಕವಾಗಿ ಬಳಸಿಕೊಂಡು ನಿಮ್ಮ ತಂದೆ ತಾಯಿ ಮತ್ತು ಹುಟ್ಟೂರಿಗೆ ಹೆಸರು ಮತ್ತು ಕೀರ್ತಿ ತರುವಂತವರಾಗಿ ಎಂದು ಸಲಹೆ ನೀಡಿದರು. ಆರು ತಿಂಗಳ ಈ ಕಾರ್ಯಗಾರವನ್ನು ಉತ್ತಮವಾಗಿ ಬಳಸಿಕೊಂಡು ಉನ್ನತ ಸ್ಥಾನಕ್ಕೆ ಏರಿ ನಿಮ್ಮ ಕುಟುಂಬ ಮತ್ತು ಗ್ರಾಮಕ್ಕೆ ನಿಮ್ಮದೇ ಕೊಡುಗೆ ನೀಡುವಂತವರಾಗಬೇಕು ಎಂಬುದು ನಮ್ಮ ನಿರೀಕ್ಷೆ, ಈ ಕಾರ್ಯಗಾರದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ಸಾಧಿಸಿ ನಿಮ್ಮ ಗುರಿಯನ್ನು ನೀವು ಮುಟ್ಟಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯೆ ಮುಮ್ತಾಜ್ ಬೇಗಂ, ಮಾಜಿ ಸದಸ್ಯರುಗಳಾದ ಶಿವಪ್ಪ , ನಾಗೇಂದ್ರ ಬಾಬು ವಕೀಲ ಯೋಗೇಶ್, ಎನ್.ಸಿ.ಜಿ.ಮುಖ್ಯಸ್ಥ ಸಿ.ನಾಗಪ್ಪ, ಸಂಪನ್ಮೂಲ ವ್ಯಕ್ತಿಗಳಾದ ಗಿರಿಧರ ಪೂಜಾರಿ, ಸುಶ್ಮಿತಾ, ಹಿರಿಯ ಮುಖಂಡರಾದ ಮುಳ್ಳೂರು ಶಿವಮಲ್ಲು, ಜೆಸ್ಸಿಮ್ ಪಾಷಾ, ಮಂಜೇಶ್,ಯರಂಬಾಡಿ ಮುರುಗೇಶ್ ಗೋವಿಂದ್, ವೆಂಕಟೇಶ್,ಹಾಗೂ ಸ್ಪರ್ಧಾರ್ಥಿಗಳು ಹಾಜರಿದ್ದರು.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…