ಜಿಲ್ಲೆಗಳು

ಸೆ. 10 ರಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಾಗಾರಕ್ಕೆ ಚಾಲನೆ : ಜೆಡಿಎಸ್‌ ಜಿಲ್ಲಾಧ್ಯಕ್ಷ ಮಂಜುನಾಥ್‌

ಹನೂರು: ಹನೂರಿನಲ್ಲಿ ಸೆಪ್ಟಂಬರ್ 10 ರಂದು ಜೆಡಿಎಸ್ ಹಾಗೂ ಬೆಂಗಳೂರಿನ ಎನ್‍ಸಿಜಿ ಕಾಂಪಿಟೇಟಿವ್ ಇನ್ಸ್ಟಿಟ್ಯೂಟ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳುವಂತೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಮಂಜುನಾಥ್ ತಿಳಿಸಿದರು.

ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ಧ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಹನೂರು ಭಾಗದ ವಿದ್ಯಾರ್ಥಿಗಳಲ್ಲಿ ಪ್ರತಿಭಾವಂತರಿದ್ದು, ಕಡು ಬಡತನ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಆದರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸೂಕ್ತ ತರಬೇತಿ ಸಿಗುತ್ತಿಲ್ಲ. ಇತ್ತ ನಗರ ಪ್ರದೇಶಗಳಲ್ಲಿ ಹಣ ನೀಡಿ ತರಬೇತಿ ಪಡೆದುಕೊಳ್ಳಲು ಶಕ್ತರಿಲ್ಲ. ಇದರಿಂದ ಪ್ರತಿಭಾವಂತರಾಗಿದ್ದರೂ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಪರಿಣಾಮ ಕ್ಷೇತ್ರದಲ್ಲಿ ನಿರುದ್ಯೋಗದ ಸಮಸ್ಯೆ ಎದುರಾಗಿದೆ. ಇದನ್ನು ಮನಗಂಡು ವಿದ್ಯಾರ್ಥಿಗಳ ಭವಿಷ್ಯದ ದೂರ ದೃಷ್ಠಿಯಿಂದ ಅನುಕೂಲ ಕಲ್ಪಿಸುವ ಸಲುವಾಗಿ ಜೆಡಿಎಸ್ ಹಾಗೂ ಬೆಂಗಳೂರು ಎನ್‍ಸಿಜಿ ಕಾಂಪಿಟೇಟಿವ್ ಇನ್ಸ್ಟಿಟ್ಯೂಟ್ ವತಿಯಿಂದ ಕೆಎಎಸ್, ಪಿಎಸೈ, ಎಫ್‍ಡಿಎ, ಎಸ್‍ಡಿಎ ಸೇರಿದಂತೆ ಇನ್ನಿತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸುಮಾರು 3 ತಿಂಗಳ ಕಾಲ ಉಚಿತವಾಗಿ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು.

ಎನ್‍ಸಿಜಿ ಸಂಸ್ಥೆಯ ಮುಖ್ಯಸ್ಥ ನಾಗಪ್ಪ ಮಾತನಾಡಿ, ಹನೂರು ಭಾಗದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪದವಿ ಶಿಕ್ಷಣ ಪಡೆದಿದ್ದಾರೆ. ಆದರೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತರಬೇತಿ ಸಿಗುತ್ತಿರಲಿಲ್ಲ. ಆಗಾಗಿ ವಿದ್ಯಾರ್ಥಿಗಳಿಗೆ ತರಬೇತಿ ಅಗತ್ಯತೆ ಇತ್ತು. ಈ ದಿಸೆಯಲ್ಲಿ ಇದೀಗ ಪ್ರಥಮ ಬಾರಿಗೆ ಹನೂರಿನಲ್ಲಿ ಎಂ.ಆರ್ ಮಂಜುನಾಥ್ ನೇತೃತ್ವದಲ್ಲಿ ಉಚಿತವಾಗಿ ತರಬೇತಿ ನೀಡುತ್ತಿರುವುದು ಉತ್ತಮವಾದ ಕೆಲಸ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶಾಗ್ಯದ ರವಿಕುಮಾರ್, ನಾಗೇಂದ್ರಬಾಬು, ಶಿವಮೂರ್ತಿ, ಶಾಹಿಲ್, ರಾಜುಗೌಡ, ಮಹದೇವ, ಡಿ.ಕೆ ಸುರೇಶ್, ಮಹದೇವ, ಸತೀಶ್ ಹಾಗೂ ಇನ್ನಿತರರಿದ್ದರು.

andolanait

Recent Posts

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

10 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

29 mins ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

2 hours ago

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…

2 hours ago

ಕಾರ್ಯಾಚರಣೆ ತಂಡವನ್ನೇ ಹಿಮ್ಮೆಟ್ಟಿಸಿದ ಕಾಡಾನೆಗಳು!

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…

2 hours ago