ಜಿಲ್ಲೆಗಳು

ರೋಹಿಣಿ ಮೇಲಿನ ದೂರು ಹಿಂಪಡೆಯಲ್ಲ: ಸಾ.ರಾ ಸ್ಪಷ್ಟನೆ

ಕೆ.ಆರ್.ನಗರ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ನನ್ನ ಮೇಲೆ ಮಾಡಿದ ಆರೋಪಗಳು ಸಾಬೀತಾಗದೆ ಇದ್ದುದ್ದರಿಂದ ಅವರು ನನ್ನ ಬಳಿ ಕ್ಷಮೆ ಕೇಳಿದ್ದಾರೆ. ಆದರೆ, ನಾನು ಅವರ ಮೇಲೆ ನೀಡಿರುವ ದೂರುಗಳನ್ನು ವಾಪಸ್ ಪಡೆಯುವುದಿಲ್ಲ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು.
ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಅವರಣದಲ್ಲಿ ರಾಜ್ಯ ಸರ್ಕಾರದ ಡಾ.ಬಿ.ಸಿ.ರಾಯ್‌ ಪ್ರಶಸ್ತಿಗೆ ಭಾಜನರಾದ ಪ್ರಸೂತಿ ತಜ್ಞೆ ಡಾ.ಕೆ.ಆರ್.ಚಂದ್ರಕಲಾ ಅವರನ್ನು ಸನ್ಮಾನಿಸಿ ನಂತರ ಸುದ್ದಿಗಾರರ ಪ್ರಶ್ನೆಗೆ ಅವರು ಮೇಲಿನಂತೆ ಉತ್ತರಿಸಿದರು.

ಸರ್ಕಾರಿ ಅಧಿಕಾರ ಯಂತ್ರವನ್ನು ದುರುಪಯೋಗ ಮಾಡಿಕೊಂಡು ಯಾವುದೇ ಸಾಕ್ಷ್ಯಾಧಾರವಿಲ್ಲದೇ ಜನಪ್ರತಿನಿಧಿಯ ಮೇಲೆ ಆರೋಪ ಮಾಡಿ, ಕೆಸರೆರೆಚುವ ಕೆಲಸ ಮಾಡಿದ್ದು, ನನಗೆ ಮಾನಸಿಕವಾಗಿ ತೊಂದರೆ ನೀಡಿದ್ದಾರೆ. ಈ ಬಗ್ಗೆ ನಾನು ಶಾಸಕನಾಗಿ ವಿಧಾನಸಭೆಯಲ್ಲಿ ಸಭಾಧ್ಯಕ್ಷರ ಮುಂದೆ ಬೇಸರ ವ್ಯಕ್ತಪಡಿಸಿದ್ದೇನೆಯೇ ಹೊರತು ಯಾರಿಗೂ ತೊಂದರೆ ನೀಡಬೇಕೆಂಬ ಉದ್ದೇಶದಿಂದ ಅಲ್ಲ ಎಂದು ತಿಳಿಸಿದರು.
ರೋಹಿಣಿ ಸಿಂಧೂರಿ ವಿರುದ್ಧ ನಾನು ಸಾಕ್ಷಿ ಸಮೇತ ಭ್ರಷ್ಟಾಚಾರದ ಆರೋಪ ಮಾಡಿ ದೂರು ನೀಡಿದ್ದು 8 ತಿಂಗಳಾದ ಮೇಲೆ ವರದಿ ಬಂದಿದೆ. ಆದರೆ ಅವರ ಆರೋಪದ ತನಿಖೆ ವರದಿ ಕೇವಲ ಎರಡು ತಿಂಗಳಲ್ಲಿ ಬರುತ್ತದೆ ಎಂದರೆ ಅಧಿಕಾರ ಯಂತ್ರ ಹೇಗಿದೆ ಎಂಬುದು ತಿಳಿಯುತ್ತದೆ. ಅಲ್ಲದೇ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಿದರು ಕೂಡ ನಾನು ಅವರ ಮೇಲಿನ ದೂರನ್ನು ವಾಪಸ್ ಪಡೆಯುವುದಿಲ್ಲ. ಸರ್ಕಾರ ಏನು ಕ್ರಮ ಕೈಗೊಳ್ಳುತ್ತದೋ ನೋಡೋಣ ಎಂದು ನುಡಿದರು.

ಪುರಸಭಾ ಸದಸ್ಯರಾದ ಕೆ.ಎಲ್.ಜಗದೀಶ್, ಸಂತೋಷ್‌ಗೌಡ, ಉಮೇಶ್, ಮಾಜಿ ಅಧ್ಯಕ್ಷ ಡಿ.ಕಾಂತರಾಜ್, ಗ್ರಾಪಂ ಮಾಜಿ ಸದಸ್ಯ ಹೋಟೆಲ್ ಮಹದೇವ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಜೆ.ಅರುಣ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಹೇಂದ್ರಪ್ಪ,, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ವಿ.ರಮೇಶ್, ಆಸ್ಪತ್ರೆಯ ರಕ್ಷಾ ಸಮಿತಿ ಸದಸ್ಯರಾದ ಹೆಚ್.ಜಿ.ಮಂಜು, ಸಾ.ರಾ.ನಾಗೇಶ್, ಇನ್ನಿತರರು ಹಾಜರಿದ್ದರು.

 

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago