ಜಿಲ್ಲೆಗಳು

ರೋಹಿಣಿ ಮೇಲಿನ ದೂರು ಹಿಂಪಡೆಯಲ್ಲ: ಸಾ.ರಾ ಸ್ಪಷ್ಟನೆ

ಕೆ.ಆರ್.ನಗರ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ನನ್ನ ಮೇಲೆ ಮಾಡಿದ ಆರೋಪಗಳು ಸಾಬೀತಾಗದೆ ಇದ್ದುದ್ದರಿಂದ ಅವರು ನನ್ನ ಬಳಿ ಕ್ಷಮೆ ಕೇಳಿದ್ದಾರೆ. ಆದರೆ, ನಾನು ಅವರ ಮೇಲೆ ನೀಡಿರುವ ದೂರುಗಳನ್ನು ವಾಪಸ್ ಪಡೆಯುವುದಿಲ್ಲ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು.
ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಅವರಣದಲ್ಲಿ ರಾಜ್ಯ ಸರ್ಕಾರದ ಡಾ.ಬಿ.ಸಿ.ರಾಯ್‌ ಪ್ರಶಸ್ತಿಗೆ ಭಾಜನರಾದ ಪ್ರಸೂತಿ ತಜ್ಞೆ ಡಾ.ಕೆ.ಆರ್.ಚಂದ್ರಕಲಾ ಅವರನ್ನು ಸನ್ಮಾನಿಸಿ ನಂತರ ಸುದ್ದಿಗಾರರ ಪ್ರಶ್ನೆಗೆ ಅವರು ಮೇಲಿನಂತೆ ಉತ್ತರಿಸಿದರು.

ಸರ್ಕಾರಿ ಅಧಿಕಾರ ಯಂತ್ರವನ್ನು ದುರುಪಯೋಗ ಮಾಡಿಕೊಂಡು ಯಾವುದೇ ಸಾಕ್ಷ್ಯಾಧಾರವಿಲ್ಲದೇ ಜನಪ್ರತಿನಿಧಿಯ ಮೇಲೆ ಆರೋಪ ಮಾಡಿ, ಕೆಸರೆರೆಚುವ ಕೆಲಸ ಮಾಡಿದ್ದು, ನನಗೆ ಮಾನಸಿಕವಾಗಿ ತೊಂದರೆ ನೀಡಿದ್ದಾರೆ. ಈ ಬಗ್ಗೆ ನಾನು ಶಾಸಕನಾಗಿ ವಿಧಾನಸಭೆಯಲ್ಲಿ ಸಭಾಧ್ಯಕ್ಷರ ಮುಂದೆ ಬೇಸರ ವ್ಯಕ್ತಪಡಿಸಿದ್ದೇನೆಯೇ ಹೊರತು ಯಾರಿಗೂ ತೊಂದರೆ ನೀಡಬೇಕೆಂಬ ಉದ್ದೇಶದಿಂದ ಅಲ್ಲ ಎಂದು ತಿಳಿಸಿದರು.
ರೋಹಿಣಿ ಸಿಂಧೂರಿ ವಿರುದ್ಧ ನಾನು ಸಾಕ್ಷಿ ಸಮೇತ ಭ್ರಷ್ಟಾಚಾರದ ಆರೋಪ ಮಾಡಿ ದೂರು ನೀಡಿದ್ದು 8 ತಿಂಗಳಾದ ಮೇಲೆ ವರದಿ ಬಂದಿದೆ. ಆದರೆ ಅವರ ಆರೋಪದ ತನಿಖೆ ವರದಿ ಕೇವಲ ಎರಡು ತಿಂಗಳಲ್ಲಿ ಬರುತ್ತದೆ ಎಂದರೆ ಅಧಿಕಾರ ಯಂತ್ರ ಹೇಗಿದೆ ಎಂಬುದು ತಿಳಿಯುತ್ತದೆ. ಅಲ್ಲದೇ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಿದರು ಕೂಡ ನಾನು ಅವರ ಮೇಲಿನ ದೂರನ್ನು ವಾಪಸ್ ಪಡೆಯುವುದಿಲ್ಲ. ಸರ್ಕಾರ ಏನು ಕ್ರಮ ಕೈಗೊಳ್ಳುತ್ತದೋ ನೋಡೋಣ ಎಂದು ನುಡಿದರು.

ಪುರಸಭಾ ಸದಸ್ಯರಾದ ಕೆ.ಎಲ್.ಜಗದೀಶ್, ಸಂತೋಷ್‌ಗೌಡ, ಉಮೇಶ್, ಮಾಜಿ ಅಧ್ಯಕ್ಷ ಡಿ.ಕಾಂತರಾಜ್, ಗ್ರಾಪಂ ಮಾಜಿ ಸದಸ್ಯ ಹೋಟೆಲ್ ಮಹದೇವ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಜೆ.ಅರುಣ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಹೇಂದ್ರಪ್ಪ,, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ವಿ.ರಮೇಶ್, ಆಸ್ಪತ್ರೆಯ ರಕ್ಷಾ ಸಮಿತಿ ಸದಸ್ಯರಾದ ಹೆಚ್.ಜಿ.ಮಂಜು, ಸಾ.ರಾ.ನಾಗೇಶ್, ಇನ್ನಿತರರು ಹಾಜರಿದ್ದರು.

 

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

9 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

9 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

9 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

9 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

9 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

10 hours ago