ಜಿಲ್ಲೆಗಳು

9 ತಿಂಗಳಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ

ದೂರ ಗ್ರಾಮದಿಂದ ದೊಡ್ಡಕಾಟೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಅವ್ಯವಸ್ಥೆ

ದೂರ ನಂಜುಂಡಸ್ವಾಮಿ

ದೂರ: ಮೈಸೂರು ತಾಲ್ಲೂಕಿನ ದೂರ ಗ್ರಾಮದಿಂದ ದೊಡ್ಡಕಾಟೂರಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಕಾಮಗಾರಿ ತಡವಾಗುತ್ತಿರುವುದರಿಂದ ಇಲ್ಲಿ ಸಂಚರಿಸುವ ರೈತರು ಮತ್ತು ವಾಹನ ಸವಾರರಿಗೆ ತುಂಬಾ ತೊಂದರೆ ಉಂಟಾಗಿದೆ.
ಈ ರಸ್ತೆಯು ಬಹಳ ಹದಗೆಟ್ಟಿದರ ಬಗ್ಗೆ ಹಲವು ಬಾರಿ ಆಂದೋಲನ ಪತ್ರಿಕೆಯಲ್ಲಿ ವರದಿ ಪ್ರಕಟಗೊಂಡಿತ್ತು. ಇದನ್ನು ಗಮನಿಸಿದ ಸಂಸದರು, ಶಾಸಕರು ಹಾಗೂ ಅಧಿಕಾರಿಗಳು ರಸ್ತೆಯನ್ನು ಡಾಂಬರೀಕರಣಗೊಳಿಸಲು ಪ್ರಧಾನ್ ಮಂತ್ರಿ ಗ್ರಾಮ್ ಸಡಕ್ ಯೋಜನೆ ಅಡಿಯಲ್ಲಿ ೨.೩೪ ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿ, ಇದರ ಕಾಮಗಾರಿಗೆ ಜನವರಿ ತಿಂಗಳಿನಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಜಿ.ಟಿ ದೇವೇಗೌಡರಿಂದ ಚಾಲನೆ ನೀಡಲಾಗಿತ್ತು.
ಅಂದಿನಿಂದ ಇಂದಿನವರೆಗೆ ಸುಮಾರು ೯ ತಿಂಗಳು ಕಳೆದರೂ ಇನ್ನೂ ಈ ರಸ್ತೆಯ ಕಾಮಗಾರಿ ಪೂರ್ಣಗೊಂಡಿಲ್ಲ. ಚಾಲನೆ ದೊರೆತ ನಂತರ ನಾಲ್ಕೆ ದು ತಿಂಗಳು ಕೆಲಸ ಮಾಡಿ, ಎರಡು ಬಾರಿ ರಸ್ತೆಗೆ ಜಲ್ಲಿ ಕಲ್ಲುಗಳನ್ನು ಹಾಕಿ ಮೆಟ್ಲಿಂಗ್ ಕಾರ್ಯ ಮುಗಿಸಿ ಎರಡು ತಿಂಗಳು ಕಳೆದರೂ ಇಲ್ಲಿಗೆ ಬಂದು ಕೆಲಸ ಮಾಡದೆ ಕೆಲಸಗಾರರು, ಗುತ್ತಿಗೆದಾರ ಹಾಗೂ ಅಧಿಕಾರಿಗಳು ಇತ್ತ ಬರದೆ ನಾಪತ್ತೆಯಾಗಿದ್ದಾರೆ.
ಕಳೆದ ತಿಂಗಳು ಬಿದ್ದ ಮಳೆಗೆ ರಸ್ತೆಯಲ್ಲಿ ಹಾಕಿದ್ದ ಜೆಲ್ಲಿ ಕಲ್ಲುಗಳು ಮೇಲೆದ್ದಿರುವುದರಿಂದ ವಾಹನ ಸವಾರರು, ರೈತಾಪಿ ವರ್ಗದವರು ಸಂಚರಿಸಲು ಹರಸಾಹಸಪಡುತ್ತಿದ್ದಾರೆ.
ಈಗಲಾದರೂ ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಅಧಿಕಾರಿಗಳಿಗೆ ಸೂಚಿಸುವ ಮೂಲಕ ಶೀಘ್ರದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳ್ಳವಂತೆ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.


ಈ ರಸ್ತೆ ಕಾಮಗಾರಿ ಶುರುವಾಗಿ ೯ ತಿಂಗಳು ಕಳೆದರೂ ಡಾಂಬರೀಕರಣ ಇನ್ನೂ ಮುಗಿದಿಲ್ಲ. ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಸರಿಯಾಗಿ ಕಾರ್ಯ ನಿರ್ವಹಿಸಿದ್ದರೆ ೫ ರಿಂದ ೬ ತಿಂಗಳೊಳಗೆ ಕೆಲಸ ಮುಗಿಸಬಹುದಾಗಿತ್ತು. ಎರಡು ತಿಂಗಳಿಂದ ಗುತ್ತಿಗೆದಾರರು, ಕೆಲಸಗಾರರು ಸ್ಥಳದಲ್ಲಿ ಕಾಣುತ್ತಿಲ್ಲ. ಸಂಬಂಧಪಟ್ಟ ಮೇಲಧಿಕಾರಿಗಳು ಇತ್ತ ಗಮನಹರಿಸಿ ಶೀಘ್ರ ಡಾಂಬರೀಕರಣ ಗೊಳಿಸುವಂತೆ ಮಾಡಲಿ.
ಡಿ.ಎಂ.ಗಿರೀಶ್, ಡಿ.ಎಸ್.ಶಂಕರ, ದೂರ.

andolanait

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

3 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

3 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

3 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

4 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

5 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

5 hours ago