ಜಿಲ್ಲೆಗಳು

9 ತಿಂಗಳಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ

ದೂರ ಗ್ರಾಮದಿಂದ ದೊಡ್ಡಕಾಟೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಅವ್ಯವಸ್ಥೆ

ದೂರ ನಂಜುಂಡಸ್ವಾಮಿ

ದೂರ: ಮೈಸೂರು ತಾಲ್ಲೂಕಿನ ದೂರ ಗ್ರಾಮದಿಂದ ದೊಡ್ಡಕಾಟೂರಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಕಾಮಗಾರಿ ತಡವಾಗುತ್ತಿರುವುದರಿಂದ ಇಲ್ಲಿ ಸಂಚರಿಸುವ ರೈತರು ಮತ್ತು ವಾಹನ ಸವಾರರಿಗೆ ತುಂಬಾ ತೊಂದರೆ ಉಂಟಾಗಿದೆ.
ಈ ರಸ್ತೆಯು ಬಹಳ ಹದಗೆಟ್ಟಿದರ ಬಗ್ಗೆ ಹಲವು ಬಾರಿ ಆಂದೋಲನ ಪತ್ರಿಕೆಯಲ್ಲಿ ವರದಿ ಪ್ರಕಟಗೊಂಡಿತ್ತು. ಇದನ್ನು ಗಮನಿಸಿದ ಸಂಸದರು, ಶಾಸಕರು ಹಾಗೂ ಅಧಿಕಾರಿಗಳು ರಸ್ತೆಯನ್ನು ಡಾಂಬರೀಕರಣಗೊಳಿಸಲು ಪ್ರಧಾನ್ ಮಂತ್ರಿ ಗ್ರಾಮ್ ಸಡಕ್ ಯೋಜನೆ ಅಡಿಯಲ್ಲಿ ೨.೩೪ ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿ, ಇದರ ಕಾಮಗಾರಿಗೆ ಜನವರಿ ತಿಂಗಳಿನಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಜಿ.ಟಿ ದೇವೇಗೌಡರಿಂದ ಚಾಲನೆ ನೀಡಲಾಗಿತ್ತು.
ಅಂದಿನಿಂದ ಇಂದಿನವರೆಗೆ ಸುಮಾರು ೯ ತಿಂಗಳು ಕಳೆದರೂ ಇನ್ನೂ ಈ ರಸ್ತೆಯ ಕಾಮಗಾರಿ ಪೂರ್ಣಗೊಂಡಿಲ್ಲ. ಚಾಲನೆ ದೊರೆತ ನಂತರ ನಾಲ್ಕೆ ದು ತಿಂಗಳು ಕೆಲಸ ಮಾಡಿ, ಎರಡು ಬಾರಿ ರಸ್ತೆಗೆ ಜಲ್ಲಿ ಕಲ್ಲುಗಳನ್ನು ಹಾಕಿ ಮೆಟ್ಲಿಂಗ್ ಕಾರ್ಯ ಮುಗಿಸಿ ಎರಡು ತಿಂಗಳು ಕಳೆದರೂ ಇಲ್ಲಿಗೆ ಬಂದು ಕೆಲಸ ಮಾಡದೆ ಕೆಲಸಗಾರರು, ಗುತ್ತಿಗೆದಾರ ಹಾಗೂ ಅಧಿಕಾರಿಗಳು ಇತ್ತ ಬರದೆ ನಾಪತ್ತೆಯಾಗಿದ್ದಾರೆ.
ಕಳೆದ ತಿಂಗಳು ಬಿದ್ದ ಮಳೆಗೆ ರಸ್ತೆಯಲ್ಲಿ ಹಾಕಿದ್ದ ಜೆಲ್ಲಿ ಕಲ್ಲುಗಳು ಮೇಲೆದ್ದಿರುವುದರಿಂದ ವಾಹನ ಸವಾರರು, ರೈತಾಪಿ ವರ್ಗದವರು ಸಂಚರಿಸಲು ಹರಸಾಹಸಪಡುತ್ತಿದ್ದಾರೆ.
ಈಗಲಾದರೂ ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಅಧಿಕಾರಿಗಳಿಗೆ ಸೂಚಿಸುವ ಮೂಲಕ ಶೀಘ್ರದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳ್ಳವಂತೆ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.


ಈ ರಸ್ತೆ ಕಾಮಗಾರಿ ಶುರುವಾಗಿ ೯ ತಿಂಗಳು ಕಳೆದರೂ ಡಾಂಬರೀಕರಣ ಇನ್ನೂ ಮುಗಿದಿಲ್ಲ. ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಸರಿಯಾಗಿ ಕಾರ್ಯ ನಿರ್ವಹಿಸಿದ್ದರೆ ೫ ರಿಂದ ೬ ತಿಂಗಳೊಳಗೆ ಕೆಲಸ ಮುಗಿಸಬಹುದಾಗಿತ್ತು. ಎರಡು ತಿಂಗಳಿಂದ ಗುತ್ತಿಗೆದಾರರು, ಕೆಲಸಗಾರರು ಸ್ಥಳದಲ್ಲಿ ಕಾಣುತ್ತಿಲ್ಲ. ಸಂಬಂಧಪಟ್ಟ ಮೇಲಧಿಕಾರಿಗಳು ಇತ್ತ ಗಮನಹರಿಸಿ ಶೀಘ್ರ ಡಾಂಬರೀಕರಣ ಗೊಳಿಸುವಂತೆ ಮಾಡಲಿ.
ಡಿ.ಎಂ.ಗಿರೀಶ್, ಡಿ.ಎಸ್.ಶಂಕರ, ದೂರ.

andolanait

Recent Posts

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಪ್ರತೀ ವಾರಾಂತ್ಯ 100 ಜನರ ಹಸಿವು ತಣಿಸುವ ಸಂಡೇ ಬ್ರೇಕ್‌ಫಾಸ್ಟ್‌

2023ರಿಂದ "ಮಾತೋಶ್ರೀ ಫೌಂಡೇಶನ್‌"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

5 hours ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

19 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

21 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

22 hours ago