ಜಿಲ್ಲೆಗಳು

9 ತಿಂಗಳಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ

ದೂರ ಗ್ರಾಮದಿಂದ ದೊಡ್ಡಕಾಟೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಅವ್ಯವಸ್ಥೆ

ದೂರ ನಂಜುಂಡಸ್ವಾಮಿ

ದೂರ: ಮೈಸೂರು ತಾಲ್ಲೂಕಿನ ದೂರ ಗ್ರಾಮದಿಂದ ದೊಡ್ಡಕಾಟೂರಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಕಾಮಗಾರಿ ತಡವಾಗುತ್ತಿರುವುದರಿಂದ ಇಲ್ಲಿ ಸಂಚರಿಸುವ ರೈತರು ಮತ್ತು ವಾಹನ ಸವಾರರಿಗೆ ತುಂಬಾ ತೊಂದರೆ ಉಂಟಾಗಿದೆ.
ಈ ರಸ್ತೆಯು ಬಹಳ ಹದಗೆಟ್ಟಿದರ ಬಗ್ಗೆ ಹಲವು ಬಾರಿ ಆಂದೋಲನ ಪತ್ರಿಕೆಯಲ್ಲಿ ವರದಿ ಪ್ರಕಟಗೊಂಡಿತ್ತು. ಇದನ್ನು ಗಮನಿಸಿದ ಸಂಸದರು, ಶಾಸಕರು ಹಾಗೂ ಅಧಿಕಾರಿಗಳು ರಸ್ತೆಯನ್ನು ಡಾಂಬರೀಕರಣಗೊಳಿಸಲು ಪ್ರಧಾನ್ ಮಂತ್ರಿ ಗ್ರಾಮ್ ಸಡಕ್ ಯೋಜನೆ ಅಡಿಯಲ್ಲಿ ೨.೩೪ ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿ, ಇದರ ಕಾಮಗಾರಿಗೆ ಜನವರಿ ತಿಂಗಳಿನಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಜಿ.ಟಿ ದೇವೇಗೌಡರಿಂದ ಚಾಲನೆ ನೀಡಲಾಗಿತ್ತು.
ಅಂದಿನಿಂದ ಇಂದಿನವರೆಗೆ ಸುಮಾರು ೯ ತಿಂಗಳು ಕಳೆದರೂ ಇನ್ನೂ ಈ ರಸ್ತೆಯ ಕಾಮಗಾರಿ ಪೂರ್ಣಗೊಂಡಿಲ್ಲ. ಚಾಲನೆ ದೊರೆತ ನಂತರ ನಾಲ್ಕೆ ದು ತಿಂಗಳು ಕೆಲಸ ಮಾಡಿ, ಎರಡು ಬಾರಿ ರಸ್ತೆಗೆ ಜಲ್ಲಿ ಕಲ್ಲುಗಳನ್ನು ಹಾಕಿ ಮೆಟ್ಲಿಂಗ್ ಕಾರ್ಯ ಮುಗಿಸಿ ಎರಡು ತಿಂಗಳು ಕಳೆದರೂ ಇಲ್ಲಿಗೆ ಬಂದು ಕೆಲಸ ಮಾಡದೆ ಕೆಲಸಗಾರರು, ಗುತ್ತಿಗೆದಾರ ಹಾಗೂ ಅಧಿಕಾರಿಗಳು ಇತ್ತ ಬರದೆ ನಾಪತ್ತೆಯಾಗಿದ್ದಾರೆ.
ಕಳೆದ ತಿಂಗಳು ಬಿದ್ದ ಮಳೆಗೆ ರಸ್ತೆಯಲ್ಲಿ ಹಾಕಿದ್ದ ಜೆಲ್ಲಿ ಕಲ್ಲುಗಳು ಮೇಲೆದ್ದಿರುವುದರಿಂದ ವಾಹನ ಸವಾರರು, ರೈತಾಪಿ ವರ್ಗದವರು ಸಂಚರಿಸಲು ಹರಸಾಹಸಪಡುತ್ತಿದ್ದಾರೆ.
ಈಗಲಾದರೂ ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಅಧಿಕಾರಿಗಳಿಗೆ ಸೂಚಿಸುವ ಮೂಲಕ ಶೀಘ್ರದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳ್ಳವಂತೆ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.


ಈ ರಸ್ತೆ ಕಾಮಗಾರಿ ಶುರುವಾಗಿ ೯ ತಿಂಗಳು ಕಳೆದರೂ ಡಾಂಬರೀಕರಣ ಇನ್ನೂ ಮುಗಿದಿಲ್ಲ. ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಸರಿಯಾಗಿ ಕಾರ್ಯ ನಿರ್ವಹಿಸಿದ್ದರೆ ೫ ರಿಂದ ೬ ತಿಂಗಳೊಳಗೆ ಕೆಲಸ ಮುಗಿಸಬಹುದಾಗಿತ್ತು. ಎರಡು ತಿಂಗಳಿಂದ ಗುತ್ತಿಗೆದಾರರು, ಕೆಲಸಗಾರರು ಸ್ಥಳದಲ್ಲಿ ಕಾಣುತ್ತಿಲ್ಲ. ಸಂಬಂಧಪಟ್ಟ ಮೇಲಧಿಕಾರಿಗಳು ಇತ್ತ ಗಮನಹರಿಸಿ ಶೀಘ್ರ ಡಾಂಬರೀಕರಣ ಗೊಳಿಸುವಂತೆ ಮಾಡಲಿ.
ಡಿ.ಎಂ.ಗಿರೀಶ್, ಡಿ.ಎಸ್.ಶಂಕರ, ದೂರ.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

7 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

7 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

7 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

8 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

8 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

8 hours ago