ಜಿಲ್ಲೆಗಳು

ವಿದ್ಯುತ್‌ ಸ್ಪರ್ಶಿಸಿ ಅಸ್ವಸ್ಥಗೊಂಡಿದ್ದ ಕಾಡಾನೆ ರಕ್ಷಣೆ: ಬಂಡೀಪುರ ಅರಣ್ಯ ಸಿಬ್ಬಂದಿ, ವೈದ್ಯರ ಕಾರ್ಯಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ  ಓಂಕಾರ ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಬರಗಿ ಗ್ರಾಮದಲ್ಲಿ ಜಮೀನಿಗೆ ಅಳವಡಿಸಲಾಗಿದ್ದ ಅಕ್ರಮ ವಿದ್ಯುತ್‌ ತಂತಿ ಬೇಲಿಯನ್ನು ಸ್ಪ‍ರ್ಶಿಸಿ ಹೆಣ್ಣು ಕಾಡಾನೆ ತೀವ್ರವಾಗಿ ಅಸ್ವಸ್ಥಗೊಂಡಿತ್ತು. ಸದ್ಯ ಅರಣ್ಯ ಅಧಿಕಾರಿಗಳು ಹಾಗೂ ಪಶುವೈದ್ಯರು ಯಶಸ್ವಿಯಾಗಿ ಹೆಣ್ಣು ಕಾಡಾನೆಯನ್ನು ರಕ್ಷಿಸಿದ್ದಾರೆ. ಬಂಡೀಪುರ ಅರಣ್ಯ ಸಿಬ್ಬಂದಿ, ವೈದ್ಯರ ಕಾರ್ಯಕ್ಕೆ ಟ್ವೀಟ್ ಮಾಡವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ವಿದ್ಯುತ್ ತಂತಿ ತಗುಲಿ ಅಸ್ವಸ್ಥಗೊಂಡಿದ್ದ 25ರಿಂದ 30 ವರ್ಷ ವಯಸ್ಸಿನ ಹೆಣ್ಣಾನೆಗೆ ವೈದ್ಯರಿಂದ ನಿರಂತರ ಚಿಕಿತ್ಸೆ ನೀಡಲಾಗಿದ್ದು ಗುಣಮುಖವಾಗಿದೆ. ಸದ್ಯ ಅಧಿಕಾರಿಗಳು ಮತ್ತೆ ಕಾಡಿಗೆ ವಾಪಸ್‌ ಕಳಿಸಿದ್ದಾರೆ. ಬಂಡೀಪುರ ಅರಣ್ಯಾಧಿಕಾರಿಗಳ ಕಾರ್ಯಕ್ಕೆ ಪ್ರಧಾನಿ‌ ಮೋದಿ ಮೆಚ್ಚುಗೆ ಸೂಚಿಸಿದ್ದು ಅರಣ್ಯ ಸಚಿವರ ಟ್ವೀಟ್​ನ್ನು ರೀ ಟ್ವೀಟ್ ಮಾಡಿದ್ದಾರೆ.

ನಾಗಪಟ್ಟಣ ಗ್ರಾಮದ ಪುತ್ರನಪುರರಾಜು ಎಂಬುವರಿಗೆ ಸೇರಿದ ಜಮೀನಿನಲ್ಲಿ ಬೆಳೆ ರಕ್ಷಣೆಗಾಗಿ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಲಾಗಿತ್ತು. ಈ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಹೆಣ್ಣಾನೆ ತೀವ್ರವಾಗಿ ಅಸ್ವಸ್ಥಗೊಂಡಿತ್ತು. ಮಂಗಳವಾರ ಬೆಳಿಗ್ಗೆ ಹೆಣ್ಣಾನೆ ಜಮೀನಿನಲ್ಲಿ ಬಿದ್ದು ನರಳಾಡುತ್ತಿರುವ ವಿಷಯ ತಿಳಿದು ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಕಾಡಾನೆಯನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು ಪಶುವೈದ್ಯ ಡಾ.ವಾಸೀಂ ಮಿರ್ಜಾ ಅವರು ಹೆಣ್ಣಾನೆಗೆ ಚಿಕಿತ್ಸೆ ನೀಡಿದ್ದರು. ಚೇತರಿಕೆ ಕಂಡ ಬಳಿಕ ಜೆಸಿಬಿ ಸಹಾಯದಿಂದ ಆನೆಯನ್ನು ಎದ್ದು ನಿಲ್ಲಿಸಲಾಯಿತು. ಆನೆಯ ಪ್ರಾಣಕ್ಕೆ ಅಪಾಯ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

andolanait

Recent Posts

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

27 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

1 hour ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

4 hours ago