ಜಿಲ್ಲೆಗಳು

ಗೃಹ ಕಾರ್ಯದರ್ಶಿಗೆ ಒಡನಾಡಿ ದೂರು

ಒಡನಾಡಿಯ ಮಡಿಲು ಪುರ್ನವಸತಿ ಕೇಂದ್ರಕ್ಕೆ ಪೊಲೀಸರ ಅಕ್ರಮ ಪ್ರವೇಶ

ಮೈಸೂರು: ಮಕ್ಕಳು ಸುರಕ್ಷಿತವಾಗಿರುವ ಜಾಗದಲ್ಲಿ ಭಯದ ವಾತಾವರಣ ಸೃಷ್ಟಿಸಿರುವ ಚಿತ್ರದುರ್ಗ ಪೊಲೀಸರ ವಿರುದ್ಧ ಕ್ರಮಕೈಗೊಳ್ಳುವಂತೆ ಗೃಹ ಇಲಾಖೆ ಕಾರ್ಯದರ್ಶಿಗಳು, ನಗರ ಪೊಲೀಸ ಆಯುಕ್ತರು, ಮಕ್ಕಳ ಕಲ್ಯಾಣ ಸಮಿತಿ ಮತ್ತು ವಿಜಯನಗರ ಪೊಲೀಸ್ ಠಾಣೆಗೆ ಒಡನಾಡಿ ಸಂಸ್ಥೆಯಿಂದ ದೂರು ನೀಡಲಾಗಿದೆ.

ನ.30ರಂದು ಒಡನಾಡಿ ಸೇವಾ ಸಂಸ್ಥೆಯ ಮಡಿಲು ಪುರ್ನವಸತಿ ಕೇಂದ್ರಕ್ಕೆ ಕಾನೂನು ಬಾಹಿರವಾಗಿ ಮಫ್ತಿಯಲ್ಲಿ ನುಗ್ಗಿರುವ 10 ಮಂದಿ ಚಿತ್ರದುರ್ಗದ ಪೊಲೀಸರು ಸಂಸ್ಥೆಯೊಳಗೆ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಸಂಸ್ಥೆಯ ನಿರ್ದೇಶಕರು ಅವರನ್ನು ತಡೆದು, ಕಾನೂನು ಬದ್ಧವಾಗಿ ಶೋಧ ನಡೆಸಿ, ಯಾವುದೇ ನೋಟಿಸ್ ಇಲ್ಲದೇ ಹೀಗೆ ಬಂದು ಹುಡುಕಾಟ ನಡೆಸುವುದು ಸರಿಯಲ್ಲ. ನೀವು ಇಲ್ಲಿಗೆ ಬರಬೇಕಾದರೆ ಮಕ್ಕಳ ಕಲ್ಯಾಣ ಸಮಿತಿ ಮತ್ತು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳೊಂದಿಗೆ ಇಲ್ಲಿ ಬರಬೇಕು. ನಿಮಗೆ ಕಾನೂನಿನ ಅರಿವಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಸರಿಯಾಗಿ ಉತ್ತರ ನೀಡದ ಪೊಲೀಸರು, ನಾವು ಮಕ್ಕಳ ಕಲ್ಯಾಣ ಸಮಿತಿ ಎಂದು ಭಾವಿಸಿ ಇಲ್ಲಿಗೆ ಬಂದಿದ್ದೇವೆ ಎಂದು ಹೇಳಿದ್ದಾರೆ. ನೀವು ಇಲ್ಲಿಗೆ ಬಂದಿರುವುದು ಎರಡನೇ ಬಾರಿ ಹೀಗಿರುವಾಗ ಹೇಗೆ ಮಕ್ಕಳ ಕಲ್ಯಾಣ ಸಮಿತಿ ಎಂದು ತಿಳಿದುಕೊಂಡಿರಿ ಎಂದು ಕೇಳಿದ್ದಾರೆ. ಇದಕ್ಕೆ ಸರಿಯಾಗಿ ಉತ್ತರ ನೀಡದ ಪೊಲೀಸರು, ತಪ್ಪಾಯಿತು ಎಂದು ಕ್ಷಮೆ ಕೇಳಿ ಹೋಗಿದ್ದಾರೆ.

ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಪೊಲೀಸರು ಕಾನೂನು ಬಾಹಿರವಾಗಿ ಸಂಸ್ಥೆಗೆ ಬಂದು ಮಕ್ಕಳು ಸುರಕ್ಷಿತವಾಗಿರುವ ಜಾಗದಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆಯ ಕಾರ್ಯದರ್ಶಿಗಳು ಮತ್ತು ಮಕ್ಕಳ ಕಲ್ಯಾಣ ಸಮಿತಿಗೆ ಮೇಲ್ ಮೂಲಕ, ನಗರ ಪೊಲೀಸ್ ಆಯುಕ್ತರು ಮತ್ತು ವಿಜಯನಗರ ಪೊಲೀಸ್ ಠಾಣೆ ಟಪಾಲು ಮೂಲಕ ದೂರು ನೀಡಲಾಗಿದೆ.

ಒಡನಾಡಿ ಸಂಸ್ಥೆಯಿಂದ ನನಗೆ ಇನ್ನೂ ಯಾವ ದೂರು ಬಂದಿಲ್ಲ. ಬಂದ ನಂತರ ಇದರ ಬಗ್ಗೆ ಪ್ರತಿಕ್ರಿಯಿಸುತ್ತೇನೆ. -ರಮೇಶ್ ಬಾನೋತ್, ನಗರ ಪೊಲೀಸ್ ಆಯುಕ್ತ.

andolana

Recent Posts

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

2 hours ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

2 hours ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

2 hours ago

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…

2 hours ago

‘ದುರಂಧರ್’- ನಾಯಕ ಗುಪ್ತಚರನಲ್ಲ, ಯೋಧನೂ ಅಲ್ಲ!’

ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ:  ಚಲನಚಿತ್ರ ಪ್ರಮಾಣೀಕರಣ ಮಂಡಳಿ, ಪ್ರಮಾಣಪತ್ರ, ಉಲ್ಲಂಘನೆ

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…

2 hours ago